AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ

ರವಿಚಂದ್ರನ್ ಹೊಸ ಸಿನಿಮಾ 'ಐ ಆ್ಯಮ್ ಗಾಡ್' ಬಿಗ್ ಬಾಸ್ ವೇದಿಕೆಯಲ್ಲಿ ಘೋಷಣೆಯಾಗಿದೆ. ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿ, ರವಿಚಂದ್ರನ್ ಅವರೇ ನಿರ್ದೇಶನ, ನಿರ್ಮಾಣ ಸೇರಿದಂತೆ ಎಲ್ಲವನ್ನೂ ನಿಭಾಯಿಸಿದ್ದಾರೆ. ವಿಶೇಷವೆಂದರೆ ಈ ಚಿತ್ರ 30-35 ಹಾಡುಗಳನ್ನು ಒಳಗೊಂಡಿದೆ. ಮೇ 30ರಂದು ಅವರ ಹುಟ್ಟುಹಬ್ಬದಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದಾರೆ.

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ
ರವಿಚಂದ್ರನ್-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Jan 18, 2026 | 9:50 PM

Share

ರವಿಚಂದ್ರನ್ ಸಿನಿಮಾಗಳಲ್ಲಿ ಹಾಡುಗಳೇ ಹೈಲೈಟ್ ಆಗಿರುತ್ತವೆ. ಅವರು ನೀಡಿದ ಹಲವು ಸಿನಿಮಾಗಳಲ್ಲಿ ಇದು ಕಾಣಿಸಿದೆ. ಈಗ ಅವರು 35 ಹಾಡುಗಳು ಇರು ಸಿನಿಮಾ ಮೂಲಕ ಬರಲು ರೆಡಿ ಆಗಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

‘ಐ ಆ್ಯಮ್ ಗಾಡ್’ ಎಂಬುದು ಚಿತ್ರದ ಟೈಟಲ್. ಇದು ಸಂಪೂರ್ಣವಾಗಿ ಎಐ ತಂತ್ರಜ್ಞಾನದಿಂದ ಮಾಡಲ್ಪಟ್ಟ ಸಿನಿಮಾ ಅನ್ನೋದು ವಿಶೇಷ. ಈ ಬಗ್ಗೆ ರವಿಚಂದ್ರನ್ ಅವರು ಮಾಹಿತಿ ನೀಡಿದ್ದಾರೆ. ಒಬ್ಬರನ್ನು ಎಲಿಮಿನೇಟ್ ಮಾಡಲು ರವಿಚಂದ್ರನ್ ಅವರು ಬಿಗ್ ಬಾಸ್ ವೇದಿಕೆಗೆ ಬಂದಿದ್ದರು. ಈ ವೇಳೆ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

‘ಎರಡೂವರೆ ವರ್ಷದಿಂದ ಒಂದು ಸಿನಿಮಾ ಮಾಡ್ತಾ ಇದೀನಿ.400 ದಿನ ಶೂಟ್ ಮಾಡಿದ್ದೇನೆ. ಈ ಸಿನಿಮಾನ ಒಬ್ಬನೇ ಮಾಡಿದ್ದೇನೆ. ಎಐ ಇದೆ. ಕ್ಯಾಮೆರಾಮೆನ್ ಬಿಟ್ರೆ ಉಳಿದೆಲ್ಲವನ್ನೂ ನಾನೋಬ್ನೇ ಮಾಡಿದ್ದು. ಐ ಆ್ಯಮ್ ಗಾಡ್ ಚಿತ್ರದ ಹೆಸರು. ಇದಕ್ಕೆ ಮ್ಯೂಸಿಕ್ ಡೈರೆಕ್ಟರ್ ಕೂಡ ಇಲ್ಲ’ ಎಂದರು ರವಿಚಂದ್ರನ್.

ಇದನ್ನೂ ಓದಿ: ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್

‘ಐ ಆ್ಯಮ್ ಗಾಡ್ ಸಿನಿಮಾದಲ್ಲಿ 30-35 ಹಾಡು ಬರುತ್ತೆ. ನನ್ನ ಬರ್ತ್​​​ಡೇಗೆ (ಮೇ 30) ಸಿನಿಮಾ ತರಬೇಕು ಎಂಬ ಉದ್ದೇಶ ಇದೆ. ನಾನೇ ಎಲ್ಲವನ್ನೂ ಮಾಡಬೇಕು. ಹೀಗಾಗಿ ಟೈಮ್ ಆಗ್ತಾ ಇದೆ’ ಎಂದು ರವಿಚಂದ್ರನ್ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ