AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಪ್ತ್​ ಗುಪ್ತ್​ ರೆಸಾರ್ಟ್ ಪಾರ್ಟಿಯಲ್ಲಿ.. ಡ್ರಗ್ಸ್ ಸೇವನೆ -ಫೋಟೋ ಬಿಚ್ಚಿಡ್ತು ರಾಗಿಣಿ ರಹಸ್ಯ!

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲದ ಕುರಿತು ದಿನದಿಂದ ದಿನಕ್ಕೆ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. CCB ವಿಚಾರಣೆ ವೇಳೆ ನಟಿ ರಾಗಿಣಿ ಆಪ್ತ ರವಿಶಂಕರ್​ ಮತ್ತುಷ್ಟು ಮಾಹಿತಿ ಹೊರಹಾಕಿದ್ದಾನೆ. ಲಾಕ್​ಡೌನ್ ವೇಳೆ ನಡೆದಿದ್ದ ಗೌಪ್ಯ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ನಟಿ ರಾಗಿಣಿ ದ್ವಿವೇದಿ, ಆಕೆಯ ಆಪ್ತ ರವಿಶಂಕರ್ ಜೊತೆ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ. ರಾಗಿಣಿ MDMA ಡ್ರಗ್ಸ್ ಸೇವಿಸಿದ್ದ ಬಗ್ಗೆ ರವಿಶಂಕರ್​ ಮಾಹಿತಿ ಕೊಟ್ಟಿದ್ದಾನೆ. ಜೊತೆಗೆ, ಪಾರ್ಟಿಯಲ್ಲಿ ಕೇವಲ 25 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದ್ದು […]

ಗುಪ್ತ್​ ಗುಪ್ತ್​ ರೆಸಾರ್ಟ್ ಪಾರ್ಟಿಯಲ್ಲಿ.. ಡ್ರಗ್ಸ್ ಸೇವನೆ -ಫೋಟೋ ಬಿಚ್ಚಿಡ್ತು ರಾಗಿಣಿ ರಹಸ್ಯ!
KUSHAL V
|

Updated on:Sep 05, 2020 | 10:47 AM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲದ ಕುರಿತು ದಿನದಿಂದ ದಿನಕ್ಕೆ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. CCB ವಿಚಾರಣೆ ವೇಳೆ ನಟಿ ರಾಗಿಣಿ ಆಪ್ತ ರವಿಶಂಕರ್​ ಮತ್ತುಷ್ಟು ಮಾಹಿತಿ ಹೊರಹಾಕಿದ್ದಾನೆ.

ಲಾಕ್​ಡೌನ್ ವೇಳೆ ನಡೆದಿದ್ದ ಗೌಪ್ಯ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ನಟಿ ರಾಗಿಣಿ ದ್ವಿವೇದಿ, ಆಕೆಯ ಆಪ್ತ ರವಿಶಂಕರ್ ಜೊತೆ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ. ರಾಗಿಣಿ MDMA ಡ್ರಗ್ಸ್ ಸೇವಿಸಿದ್ದ ಬಗ್ಗೆ ರವಿಶಂಕರ್​ ಮಾಹಿತಿ ಕೊಟ್ಟಿದ್ದಾನೆ. ಜೊತೆಗೆ, ಪಾರ್ಟಿಯಲ್ಲಿ ಕೇವಲ 25 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದ್ದು ಆಹ್ವಾನಿತ 25 ಮಂದಿಯಲ್ಲಿ ಸ್ಟಾರ್​ಗಳು, ಉದ್ಯಮಿಗಳು, ಟೆಕ್ಕಿಗಳು ಹಾಗೂ ಡ್ರಗ್ ಪೆಡ್ಲರ್ಸ್​ಗಳು ಭಾಗಿಯಾಗಿದ್ದರಂತೆ.

ಈ ಗೌಪ್ಯ ಪಾರ್ಟಿ ಯಲಹಂಕ ಹೊರವಲಯದಲ್ಲಿರುವ ಲೇ ರೋಮ ಗಾರ್ಡೇನಿಯಾ ರೆಸಾರ್ಟ್​ನಲ್ಲಿ ನಡೆದಿತ್ತು ಎಂದು ರವಿಶಂಕರ್​ CCB ಅಧಿಕಾರಿಗಳಿಗೆ ತಿಳಿಸಿದ್ದಾನೆ. ರೆಸಾರ್ಟ್​ನಲ್ಲಿ ಯಾವುದೇ ಸಿಸಿಟಿವಿ ಇರಲಿಲ್ಲ. ಜೊತೆಗೆ ಪಾರ್ಟಿ ಮಧ್ಯೆ ಫೋಟೊ, ವಿಡಿಯೋ ಮಾಡುವಂತಿರಲಿಲ್ಲ ಎಂಬ ಕಂಡೀಷನ್​ ಹಾಕಲಾಗಿತ್ತು ಎಂದೂ ಸಹ ರವಿಶಂಕರ್​ ತಿಳಿಸಿದ್ದಾನೆ.

ಅನುಮತಿ ಇಲ್ಲದಿದ್ದರೂ ಫೋಟೋ ಮಾಡಿ ತಗಲಾಕೊಂಡರು! ಪಾರ್ಟಿ ವೇಳೆ ಮೊಬೈಲ್ ಬಳಕೆಗೆ ಅನುಮತಿ ಇಲ್ಲದಿದ್ದರೂ, ರವಿಶಂಕರ್ ಕೆಲ ಫೋಟೋ ತೆಗೆದಿದ್ದನಂತೆ. ಬಳಿಕ ಆ ಫೋಟೊಗಳನ್ನು ಡಿಲಿಟ್ ಮಾಡಿದ್ದನಂತೆ. ಆದರೆ, ರಾಗಿಣಿ ಡ್ರಗ್ಸ್ ಸೇವನೆ ಬಗ್ಗೆ ರವಿಶಂಕರ್​ನ ಮೊಬೈಲ್​ ರಿಟ್ರೀವ್ ಮಾಡಿದ ವೇಳೆ ಇವೆಲ್ಲಾ ಮಹತ್ವದ ಸಾಕ್ಷ್ಯ ತನ್ನಿಂತಾನೇ ದೊರೆತಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ನಟಿ ರಾಗಿಣಿ ವಿರುದ್ಧ ಕಾಟನ್​​ಪೇಟೆ ಠಾಣೆಯಲ್ಲಿ FIR ದಾಖಲಾಗಿದೆ. ಇದಲ್ಲದೆ, ನಿನ್ನೆ ಪಾರ್ಟಿ ನಡೆದಿದ್ದ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ಅಧಿಕಾರಿಗಳು ಮತ್ತಷ್ಟು ಸಾಕ್ಷ್ಯಗಳನ್ನ ಕಲೆಹಾಕಿದ್ದಾರೆ.

Published On - 10:41 am, Sat, 5 September 20

Follow Us
KUSHAL V
KUSHAL V
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು