Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಪ್ತ್​ ಗುಪ್ತ್​ ರೆಸಾರ್ಟ್ ಪಾರ್ಟಿಯಲ್ಲಿ.. ಡ್ರಗ್ಸ್ ಸೇವನೆ -ಫೋಟೋ ಬಿಚ್ಚಿಡ್ತು ರಾಗಿಣಿ ರಹಸ್ಯ!

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲದ ಕುರಿತು ದಿನದಿಂದ ದಿನಕ್ಕೆ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. CCB ವಿಚಾರಣೆ ವೇಳೆ ನಟಿ ರಾಗಿಣಿ ಆಪ್ತ ರವಿಶಂಕರ್​ ಮತ್ತುಷ್ಟು ಮಾಹಿತಿ ಹೊರಹಾಕಿದ್ದಾನೆ. ಲಾಕ್​ಡೌನ್ ವೇಳೆ ನಡೆದಿದ್ದ ಗೌಪ್ಯ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ನಟಿ ರಾಗಿಣಿ ದ್ವಿವೇದಿ, ಆಕೆಯ ಆಪ್ತ ರವಿಶಂಕರ್ ಜೊತೆ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ. ರಾಗಿಣಿ MDMA ಡ್ರಗ್ಸ್ ಸೇವಿಸಿದ್ದ ಬಗ್ಗೆ ರವಿಶಂಕರ್​ ಮಾಹಿತಿ ಕೊಟ್ಟಿದ್ದಾನೆ. ಜೊತೆಗೆ, ಪಾರ್ಟಿಯಲ್ಲಿ ಕೇವಲ 25 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದ್ದು […]

ಗುಪ್ತ್​ ಗುಪ್ತ್​ ರೆಸಾರ್ಟ್ ಪಾರ್ಟಿಯಲ್ಲಿ.. ಡ್ರಗ್ಸ್ ಸೇವನೆ -ಫೋಟೋ ಬಿಚ್ಚಿಡ್ತು ರಾಗಿಣಿ ರಹಸ್ಯ!
Follow us
KUSHAL V
|

Updated on:Sep 05, 2020 | 10:47 AM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲದ ಕುರಿತು ದಿನದಿಂದ ದಿನಕ್ಕೆ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. CCB ವಿಚಾರಣೆ ವೇಳೆ ನಟಿ ರಾಗಿಣಿ ಆಪ್ತ ರವಿಶಂಕರ್​ ಮತ್ತುಷ್ಟು ಮಾಹಿತಿ ಹೊರಹಾಕಿದ್ದಾನೆ.

ಲಾಕ್​ಡೌನ್ ವೇಳೆ ನಡೆದಿದ್ದ ಗೌಪ್ಯ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ನಟಿ ರಾಗಿಣಿ ದ್ವಿವೇದಿ, ಆಕೆಯ ಆಪ್ತ ರವಿಶಂಕರ್ ಜೊತೆ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ. ರಾಗಿಣಿ MDMA ಡ್ರಗ್ಸ್ ಸೇವಿಸಿದ್ದ ಬಗ್ಗೆ ರವಿಶಂಕರ್​ ಮಾಹಿತಿ ಕೊಟ್ಟಿದ್ದಾನೆ. ಜೊತೆಗೆ, ಪಾರ್ಟಿಯಲ್ಲಿ ಕೇವಲ 25 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದ್ದು ಆಹ್ವಾನಿತ 25 ಮಂದಿಯಲ್ಲಿ ಸ್ಟಾರ್​ಗಳು, ಉದ್ಯಮಿಗಳು, ಟೆಕ್ಕಿಗಳು ಹಾಗೂ ಡ್ರಗ್ ಪೆಡ್ಲರ್ಸ್​ಗಳು ಭಾಗಿಯಾಗಿದ್ದರಂತೆ.

ಈ ಗೌಪ್ಯ ಪಾರ್ಟಿ ಯಲಹಂಕ ಹೊರವಲಯದಲ್ಲಿರುವ ಲೇ ರೋಮ ಗಾರ್ಡೇನಿಯಾ ರೆಸಾರ್ಟ್​ನಲ್ಲಿ ನಡೆದಿತ್ತು ಎಂದು ರವಿಶಂಕರ್​ CCB ಅಧಿಕಾರಿಗಳಿಗೆ ತಿಳಿಸಿದ್ದಾನೆ. ರೆಸಾರ್ಟ್​ನಲ್ಲಿ ಯಾವುದೇ ಸಿಸಿಟಿವಿ ಇರಲಿಲ್ಲ. ಜೊತೆಗೆ ಪಾರ್ಟಿ ಮಧ್ಯೆ ಫೋಟೊ, ವಿಡಿಯೋ ಮಾಡುವಂತಿರಲಿಲ್ಲ ಎಂಬ ಕಂಡೀಷನ್​ ಹಾಕಲಾಗಿತ್ತು ಎಂದೂ ಸಹ ರವಿಶಂಕರ್​ ತಿಳಿಸಿದ್ದಾನೆ.

ಅನುಮತಿ ಇಲ್ಲದಿದ್ದರೂ ಫೋಟೋ ಮಾಡಿ ತಗಲಾಕೊಂಡರು! ಪಾರ್ಟಿ ವೇಳೆ ಮೊಬೈಲ್ ಬಳಕೆಗೆ ಅನುಮತಿ ಇಲ್ಲದಿದ್ದರೂ, ರವಿಶಂಕರ್ ಕೆಲ ಫೋಟೋ ತೆಗೆದಿದ್ದನಂತೆ. ಬಳಿಕ ಆ ಫೋಟೊಗಳನ್ನು ಡಿಲಿಟ್ ಮಾಡಿದ್ದನಂತೆ. ಆದರೆ, ರಾಗಿಣಿ ಡ್ರಗ್ಸ್ ಸೇವನೆ ಬಗ್ಗೆ ರವಿಶಂಕರ್​ನ ಮೊಬೈಲ್​ ರಿಟ್ರೀವ್ ಮಾಡಿದ ವೇಳೆ ಇವೆಲ್ಲಾ ಮಹತ್ವದ ಸಾಕ್ಷ್ಯ ತನ್ನಿಂತಾನೇ ದೊರೆತಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ನಟಿ ರಾಗಿಣಿ ವಿರುದ್ಧ ಕಾಟನ್​​ಪೇಟೆ ಠಾಣೆಯಲ್ಲಿ FIR ದಾಖಲಾಗಿದೆ. ಇದಲ್ಲದೆ, ನಿನ್ನೆ ಪಾರ್ಟಿ ನಡೆದಿದ್ದ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ಅಧಿಕಾರಿಗಳು ಮತ್ತಷ್ಟು ಸಾಕ್ಷ್ಯಗಳನ್ನ ಕಲೆಹಾಕಿದ್ದಾರೆ.

Published On - 10:41 am, Sat, 5 September 20

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ