AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santhosha Sangeetha: ತೆರೆಮೇಲೆ ಜೋಡಿಯಾದ ರಿಯಲ್​ ಲೈಫ್​ ಗಂಡ-ಹೆಂಡತಿ; ಇದು ‘ಸಂತೋಷ ಸಂಗೀತ’ ಚಿತ್ರದ ವಿಶೇಷ

New Kannada Movie: ಗಂಡ ಮತ್ತು ಹೆಂಡತಿ ಇಬ್ಬರೂ ಒಂದೇ ಉದ್ಯಮದಲ್ಲಿ ತೊಡಗಿಕೊಂಡಿದ್ದರೆ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ಆ ಸವಾಲುಗಳನ್ನು ‘ಸಂತೋಷ ಸಂಗೀತ’ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ ನಿರ್ದೇಶಕರು.

Santhosha Sangeetha: ತೆರೆಮೇಲೆ ಜೋಡಿಯಾದ ರಿಯಲ್​ ಲೈಫ್​ ಗಂಡ-ಹೆಂಡತಿ; ಇದು ‘ಸಂತೋಷ ಸಂಗೀತ’ ಚಿತ್ರದ ವಿಶೇಷ
‘ಸಂತೋಷ ಸಂಗೀತ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Jul 08, 2023 | 10:12 PM

Share

2023ರಲ್ಲಿ 6 ತಿಂಗಳು ಕಳೆದು ಹೋಗಿದೆ. ಈಗಾಗಲೇ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಬಿಡುಗಡೆಯಾಗಲು ಇನ್ನೂ ಹಲವು ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಸಕ್ಸಸ್​ ರೇಟ್​ ಏನೇ ಇರಲಿ, ಕನ್ನಡದಲ್ಲಿ ಹೊಸ ಸಿನಿಮಾಗಳು (New Kannada Movies) ಬರುತ್ತಲೇ ಇವೆ. ಆ ಸಾಲಿಗೆ ಇನ್ನೊಂದು ಸೇರ್ಪಡೆ ‘ಸಂತೋಷ ಸಂಗೀತ’ (Santhosha Sangeetha) ಸಿನಿಮಾ. ಈ ಸಿನಿಮಾವನ್ನು ಸಿದ್ದು ಎಸ್. ಅವರು ನಿರ್ಮಿಸಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಅರ್ನವ್ ವಿನ್ಯಾಸ್ ಮತ್ತು ರಾಣಿ ವರದ್ ಅವರು ಈ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ಗಂಡ-ಹೆಂಡತಿ ಆಗಿರುವ ಇವರು ‘ಸಂತೋಷ ಸಂಗೀತ’ ಸಿನಿಮಾದಲ್ಲಿ ಕೂಡ ಪತಿ-ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

ಒಂದೇ ಉದ್ಯಮದಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ತೊಡಗಿಕೊಂಡಿದ್ದರೆ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ಆ ಸವಾಲುಗಳನ್ನು ‘ಸಂತೋಷ ಸಂಗೀತ’ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ ನಿರ್ದೇಶಕ ಸಿದ್ದು ಎಸ್​. ಹಿರಿಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಇದ್ದಾರೆ. ದೊಡ್ಡಣ್ಣ, ಲಯ ಕೋಕಿಲ, ಕವನ, ಅವಿನಾಶ್, ಅಮಿತ್, ‘ಕಾಮಿಡಿ ಕಿಲಾಡಿಗಳು’ ಲೋಕೇಶ್ ಸೂರ್ಯ, ಹನೀಶ್, ಮಡೆನೂರು ಮನು ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Devara Kanasu: ‘ದೇವರ ಕನಸು’ ಚಿತ್ರಕ್ಕೆ ಸಾಥ್​ ನೀಡಿದ ಅಶ್ವಿನಿ ಪುನೀತ್​; ಜುಲೈ 21ಕ್ಕೆ ರಿಲೀಸ್​ ಆಗಲಿದೆ ಮಕ್ಕಳ ಸಿನಿಮಾ

ನಿರ್ದೇಶಕ ಸಿದ್ದು ಎಸ್​. ಅವರು ಎಂ.ಸಿ.ಎ. ಪದವಿ ಪೂರ್ಣಗೊಳಿಸಿ ಚಿತ್ರರಂಗಕ್ಕೆ ಕಾಲಿಟ್ಟರು. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಬರೆದ ಕಥೆಗೆ ಈಗ ಸಿನಿಮಾ ರೂಪ ನೀಡುತ್ತಿದ್ದಾರೆ. ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಅವರೇ ಹೊತ್ತುಕೊಂಡಿದ್ದಾರೆ. ಕಾಮಿಡಿ, ಲವ್​ ಸ್ಟೋರಿ ಜೊತೆಗೆ ಕಮರ್ಷಿಯಲ್​ ಅಂಶಗಳು ಕೂಡ ಈ ಸಿನಿಮಾದಲ್ಲಿ ಇವೆ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಇದರ ಬಹುತೇಕ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಸಿನಿಮಾ ತೆರೆಕಾಣಿಸಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ.

ಇದನ್ನೂ ಓದಿ: ಪ್ರಜ್ವಲ್ ಹುಟ್ಟುಹಬ್ಬಕ್ಕೆ ಗಣ ಟೀಸರ್ ಬಿಡುಗಡೆ: ಇದು ಭೂತ-ಭವಿಷ್ಯದ ಸಿನಿಮಾ

ಈ ಮೊದಲು ‘ಹೊಂಬಣ್ಣ’ ಹಾಗೂ ‘ಪ್ರೇಮಂ’ ಚಿತ್ರಗಳಲ್ಲಿ ನಟಿಸಿದ್ದ ಅರ್ನವ್ ವಿನ್ಯಾಸ್ ಅವರಿಗೆ ಇದು ಮೂರನೇ ಸಿನಿಮಾ. ಈ ಸಿನಿಮಾದಲ್ಲಿ ಅವರು ಉದ್ಯಮಿಯ ಪಾತ್ರ ಮಾಡಿದ್ದಾರೆ. ಜೆ.ಪಿ. ನಗರದ ಮಾಜಿ ಕಾರ್ಪೋರೇಟರ್ ಆದ ಚಂದ್ರಶೇಖರ್ ರಾಜು ಅವರು ‘ಸಂತೋಷ ಸಂಗೀತ’ ಸುದ್ದಿಗೋಷ್ಠಿಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಹಾರೈಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ