AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santhosha Sangeetha: ತೆರೆಮೇಲೆ ಜೋಡಿಯಾದ ರಿಯಲ್​ ಲೈಫ್​ ಗಂಡ-ಹೆಂಡತಿ; ಇದು ‘ಸಂತೋಷ ಸಂಗೀತ’ ಚಿತ್ರದ ವಿಶೇಷ

New Kannada Movie: ಗಂಡ ಮತ್ತು ಹೆಂಡತಿ ಇಬ್ಬರೂ ಒಂದೇ ಉದ್ಯಮದಲ್ಲಿ ತೊಡಗಿಕೊಂಡಿದ್ದರೆ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ಆ ಸವಾಲುಗಳನ್ನು ‘ಸಂತೋಷ ಸಂಗೀತ’ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ ನಿರ್ದೇಶಕರು.

Santhosha Sangeetha: ತೆರೆಮೇಲೆ ಜೋಡಿಯಾದ ರಿಯಲ್​ ಲೈಫ್​ ಗಂಡ-ಹೆಂಡತಿ; ಇದು ‘ಸಂತೋಷ ಸಂಗೀತ’ ಚಿತ್ರದ ವಿಶೇಷ
‘ಸಂತೋಷ ಸಂಗೀತ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Jul 08, 2023 | 10:12 PM

Share

2023ರಲ್ಲಿ 6 ತಿಂಗಳು ಕಳೆದು ಹೋಗಿದೆ. ಈಗಾಗಲೇ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಬಿಡುಗಡೆಯಾಗಲು ಇನ್ನೂ ಹಲವು ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಸಕ್ಸಸ್​ ರೇಟ್​ ಏನೇ ಇರಲಿ, ಕನ್ನಡದಲ್ಲಿ ಹೊಸ ಸಿನಿಮಾಗಳು (New Kannada Movies) ಬರುತ್ತಲೇ ಇವೆ. ಆ ಸಾಲಿಗೆ ಇನ್ನೊಂದು ಸೇರ್ಪಡೆ ‘ಸಂತೋಷ ಸಂಗೀತ’ (Santhosha Sangeetha) ಸಿನಿಮಾ. ಈ ಸಿನಿಮಾವನ್ನು ಸಿದ್ದು ಎಸ್. ಅವರು ನಿರ್ಮಿಸಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಅರ್ನವ್ ವಿನ್ಯಾಸ್ ಮತ್ತು ರಾಣಿ ವರದ್ ಅವರು ಈ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ಗಂಡ-ಹೆಂಡತಿ ಆಗಿರುವ ಇವರು ‘ಸಂತೋಷ ಸಂಗೀತ’ ಸಿನಿಮಾದಲ್ಲಿ ಕೂಡ ಪತಿ-ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

ಒಂದೇ ಉದ್ಯಮದಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ತೊಡಗಿಕೊಂಡಿದ್ದರೆ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ಆ ಸವಾಲುಗಳನ್ನು ‘ಸಂತೋಷ ಸಂಗೀತ’ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ ನಿರ್ದೇಶಕ ಸಿದ್ದು ಎಸ್​. ಹಿರಿಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಇದ್ದಾರೆ. ದೊಡ್ಡಣ್ಣ, ಲಯ ಕೋಕಿಲ, ಕವನ, ಅವಿನಾಶ್, ಅಮಿತ್, ‘ಕಾಮಿಡಿ ಕಿಲಾಡಿಗಳು’ ಲೋಕೇಶ್ ಸೂರ್ಯ, ಹನೀಶ್, ಮಡೆನೂರು ಮನು ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Devara Kanasu: ‘ದೇವರ ಕನಸು’ ಚಿತ್ರಕ್ಕೆ ಸಾಥ್​ ನೀಡಿದ ಅಶ್ವಿನಿ ಪುನೀತ್​; ಜುಲೈ 21ಕ್ಕೆ ರಿಲೀಸ್​ ಆಗಲಿದೆ ಮಕ್ಕಳ ಸಿನಿಮಾ

ನಿರ್ದೇಶಕ ಸಿದ್ದು ಎಸ್​. ಅವರು ಎಂ.ಸಿ.ಎ. ಪದವಿ ಪೂರ್ಣಗೊಳಿಸಿ ಚಿತ್ರರಂಗಕ್ಕೆ ಕಾಲಿಟ್ಟರು. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಬರೆದ ಕಥೆಗೆ ಈಗ ಸಿನಿಮಾ ರೂಪ ನೀಡುತ್ತಿದ್ದಾರೆ. ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಅವರೇ ಹೊತ್ತುಕೊಂಡಿದ್ದಾರೆ. ಕಾಮಿಡಿ, ಲವ್​ ಸ್ಟೋರಿ ಜೊತೆಗೆ ಕಮರ್ಷಿಯಲ್​ ಅಂಶಗಳು ಕೂಡ ಈ ಸಿನಿಮಾದಲ್ಲಿ ಇವೆ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಇದರ ಬಹುತೇಕ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಸಿನಿಮಾ ತೆರೆಕಾಣಿಸಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ.

ಇದನ್ನೂ ಓದಿ: ಪ್ರಜ್ವಲ್ ಹುಟ್ಟುಹಬ್ಬಕ್ಕೆ ಗಣ ಟೀಸರ್ ಬಿಡುಗಡೆ: ಇದು ಭೂತ-ಭವಿಷ್ಯದ ಸಿನಿಮಾ

ಈ ಮೊದಲು ‘ಹೊಂಬಣ್ಣ’ ಹಾಗೂ ‘ಪ್ರೇಮಂ’ ಚಿತ್ರಗಳಲ್ಲಿ ನಟಿಸಿದ್ದ ಅರ್ನವ್ ವಿನ್ಯಾಸ್ ಅವರಿಗೆ ಇದು ಮೂರನೇ ಸಿನಿಮಾ. ಈ ಸಿನಿಮಾದಲ್ಲಿ ಅವರು ಉದ್ಯಮಿಯ ಪಾತ್ರ ಮಾಡಿದ್ದಾರೆ. ಜೆ.ಪಿ. ನಗರದ ಮಾಜಿ ಕಾರ್ಪೋರೇಟರ್ ಆದ ಚಂದ್ರಶೇಖರ್ ರಾಜು ಅವರು ‘ಸಂತೋಷ ಸಂಗೀತ’ ಸುದ್ದಿಗೋಷ್ಠಿಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಹಾರೈಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ