ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?

2020ರ ಫೆಬ್ರವರಿಯಲ್ಲಿ ನಟಿ ನಿವೇದಿತಾ ಗೌಡ ಮತ್ತು ಗಾಯಕ ಚಂದನ್​ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 4 ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರದಲ್ಲಿ ನಿವೇದಿತಾ ಗೌಡ ಅವರಿಗೆ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಈಗ ವಿಚ್ಛೇದನ ಪಡೆದಿದ್ದಾರೆ.

ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?
ಚಂದನ್​ ಶೆಟ್ಟಿ, ನಿವೇದಿತಾ ಗೌಡ
Follow us
ಮದನ್​ ಕುಮಾರ್​
|

Updated on: Jun 07, 2024 | 6:11 PM

ಖ್ಯಾತ ಗಾಯಕ ಚಂದನ್​ ಶೆಟ್ಟಿ ಮತ್ತು ರೀಲ್ಸ್​ ಬೆಡಗಿ ನಿವೇದಿತಾ ಗೌಡ (Niveditha Gowda) ಅವರ ಸಂಸಾರದಲ್ಲಿ ಬಿರುಕು ಉಂಟಾಗಿರುವುದು ಖಚಿತವಾಗಿದೆ. ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಇಬ್ಬರೂ ಅರ್ಜಿ ಸಲ್ಲಿಸಿ ಡಿವೋರ್ಸ್​ (Chandan Shetty Niveditha Gowda Divorce) ಪಡೆದಿದ್ದಾರೆ. ವಿಚಾರಣೆ ಸಲುವಾಗಿ ಅವರು ಇಂದು (ಜೂನ್​ 7) ಕೋರ್ಟ್​ಗೆ ಆಗಮಿಸಿದ್ದರು. ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರಿಗೆ ಫ್ಯಾಮಿಲಿ ಕೋರ್ಟ್​ ವಿಚ್ಛೇದನ ಮಂಜೂರು ಮಾಡಿದೆ. ಅಷ್ಟಕ್ಕೂ ಈ ದಂಪತಿಯ ನಡುವೆ ಕಿರಿಕ್​ ಆಗಿದ್ದು ಯಾಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಆ ಬಗ್ಗೆ ಮಾಹಿತಿ ಕೇಳಿಬಂದಿದೆ. ಮಗು ಪಡೆಯುವ ವಿಚಾರಕ್ಕೆ ಚಂದನ್​ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ನಡುವೆ ಮನಸ್ತಾಪ ಆಗಿದೆ ಎನ್ನಲಾಗಿದೆ.

2020ರ ಫೆಬ್ರವರಿಯಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಆಗಿ ನಾಲ್ಕು ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರಕ್ಕೆ ನಿವೇದಿತಾ ಗೌಡ ಅವರ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಹಾಗಾಗಿ ಅವರಿಬ್ಬರು ಡಿವೋರ್ಸ್​ ಪಡೆದರು ಎಂಬ ಮಾಹಿತಿ ಕೇಳಿಬಂದಿದೆ.

ಸಂಸಾರದಲ್ಲಿ ಮನಸ್ತಾಪ ಉಂಟಾದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಡುವೆ ಸಂಧಾನ ಮಾಡಿಸಲು ಆಪ್ತರು ಪ್ರಯತ್ನಿಸಿದ್ದರು. ಸಂಧಾನ ಸಫಲವಾಗದ ಹಿನ್ನೆಲೆಯಲ್ಲಿ ಅವರಿಬ್ಬರು ಕೋರ್ಟ್‌ ಮೆಟ್ಟಿಲು ಏರಿದರು. ಈ ವಿಚಾರದಲ್ಲಿ ಅವರಿಬ್ಬರು ಮುನಿಸಿಕೊಂಡಿಲ್ಲ. ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದಾಗ ಅವರಿಬ್ಬರು ಕೋರ್ಟ್‌ ಹಾಲ್‌ನಲ್ಲಿ ಪರಸ್ಪರ ನಗುತ್ತಲೇ ಅಕ್ಕಪಕ್ಕ ಕುಳಿತಿದ್ದರು! ಆದರೆ ಯಾವುದೇ ಕಾರಣಕ್ಕೂ ಜೊತೆಯಾಗಿ ಬಾಳಲು ಅವರು ಒಪ್ಪಲಿಲ್ಲ. ವಿಚ್ಛೇದನದ ಷರತ್ತುಗಳ ಬಗ್ಗೆ ಒಪ್ಪಂದ ಮಾಡಿಕೊಂಡರು. ಸೆಕ್ಷನ್ 13ಬಿ ಅಡಿಯಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದಾರೆ.

ಇದನ್ನೂ ಓದಿ: ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ

2017ರಲ್ಲಿ ಪ್ರಸಾರ ಕಂಡ ‘ಬಿಗ್​ ಬಾಸ್​ ಕನ್ನಡ’ 5ನೇ ಸೀಸನ್​ನಲ್ಲಿ​ ನಿವೇದಿತಾ ಗೌಡ-ಚಂದನ್​ ಶೆಟ್ಟಿ ಪರಸ್ಪರ ಪರಿಚಯ ಆಗಿದ್ದರು. ಇಬ್ಬರ ಸ್ನೇಹ ನಂತರ ಪ್ರೀತಿಗೆ ತಿರುಗಿತು. ಮೈಸೂರು ಯುವ ದಸರಾ ವೇದಿಕೆಯಲ್ಲಿ ನಿವೇದಿತಾ ಗೌಡಗೆ ಚಂದನ್​ ಶೆಟ್ಟಿ ಅವರು ಮ್ಯಾರೇಜ್​ ಪ್ರಪೋಸ್​ ಮಾಡಿದ್ದರು. ಆ ಘಟನೆಯಿಂದ ವಿವಾದ ಕೂಡ ಆಗಿತ್ತು. ಬಳಿಕ 2020ರಲ್ಲಿ ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ