AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?

2020ರ ಫೆಬ್ರವರಿಯಲ್ಲಿ ನಟಿ ನಿವೇದಿತಾ ಗೌಡ ಮತ್ತು ಗಾಯಕ ಚಂದನ್​ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 4 ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರದಲ್ಲಿ ನಿವೇದಿತಾ ಗೌಡ ಅವರಿಗೆ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಈಗ ವಿಚ್ಛೇದನ ಪಡೆದಿದ್ದಾರೆ.

ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?
ಚಂದನ್​ ಶೆಟ್ಟಿ, ನಿವೇದಿತಾ ಗೌಡ
ಮದನ್​ ಕುಮಾರ್​
|

Updated on: Jun 07, 2024 | 6:11 PM

Share

ಖ್ಯಾತ ಗಾಯಕ ಚಂದನ್​ ಶೆಟ್ಟಿ ಮತ್ತು ರೀಲ್ಸ್​ ಬೆಡಗಿ ನಿವೇದಿತಾ ಗೌಡ (Niveditha Gowda) ಅವರ ಸಂಸಾರದಲ್ಲಿ ಬಿರುಕು ಉಂಟಾಗಿರುವುದು ಖಚಿತವಾಗಿದೆ. ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಇಬ್ಬರೂ ಅರ್ಜಿ ಸಲ್ಲಿಸಿ ಡಿವೋರ್ಸ್​ (Chandan Shetty Niveditha Gowda Divorce) ಪಡೆದಿದ್ದಾರೆ. ವಿಚಾರಣೆ ಸಲುವಾಗಿ ಅವರು ಇಂದು (ಜೂನ್​ 7) ಕೋರ್ಟ್​ಗೆ ಆಗಮಿಸಿದ್ದರು. ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರಿಗೆ ಫ್ಯಾಮಿಲಿ ಕೋರ್ಟ್​ ವಿಚ್ಛೇದನ ಮಂಜೂರು ಮಾಡಿದೆ. ಅಷ್ಟಕ್ಕೂ ಈ ದಂಪತಿಯ ನಡುವೆ ಕಿರಿಕ್​ ಆಗಿದ್ದು ಯಾಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಆ ಬಗ್ಗೆ ಮಾಹಿತಿ ಕೇಳಿಬಂದಿದೆ. ಮಗು ಪಡೆಯುವ ವಿಚಾರಕ್ಕೆ ಚಂದನ್​ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ನಡುವೆ ಮನಸ್ತಾಪ ಆಗಿದೆ ಎನ್ನಲಾಗಿದೆ.

2020ರ ಫೆಬ್ರವರಿಯಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಆಗಿ ನಾಲ್ಕು ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರಕ್ಕೆ ನಿವೇದಿತಾ ಗೌಡ ಅವರ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಹಾಗಾಗಿ ಅವರಿಬ್ಬರು ಡಿವೋರ್ಸ್​ ಪಡೆದರು ಎಂಬ ಮಾಹಿತಿ ಕೇಳಿಬಂದಿದೆ.

ಸಂಸಾರದಲ್ಲಿ ಮನಸ್ತಾಪ ಉಂಟಾದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಡುವೆ ಸಂಧಾನ ಮಾಡಿಸಲು ಆಪ್ತರು ಪ್ರಯತ್ನಿಸಿದ್ದರು. ಸಂಧಾನ ಸಫಲವಾಗದ ಹಿನ್ನೆಲೆಯಲ್ಲಿ ಅವರಿಬ್ಬರು ಕೋರ್ಟ್‌ ಮೆಟ್ಟಿಲು ಏರಿದರು. ಈ ವಿಚಾರದಲ್ಲಿ ಅವರಿಬ್ಬರು ಮುನಿಸಿಕೊಂಡಿಲ್ಲ. ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದಾಗ ಅವರಿಬ್ಬರು ಕೋರ್ಟ್‌ ಹಾಲ್‌ನಲ್ಲಿ ಪರಸ್ಪರ ನಗುತ್ತಲೇ ಅಕ್ಕಪಕ್ಕ ಕುಳಿತಿದ್ದರು! ಆದರೆ ಯಾವುದೇ ಕಾರಣಕ್ಕೂ ಜೊತೆಯಾಗಿ ಬಾಳಲು ಅವರು ಒಪ್ಪಲಿಲ್ಲ. ವಿಚ್ಛೇದನದ ಷರತ್ತುಗಳ ಬಗ್ಗೆ ಒಪ್ಪಂದ ಮಾಡಿಕೊಂಡರು. ಸೆಕ್ಷನ್ 13ಬಿ ಅಡಿಯಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದಾರೆ.

ಇದನ್ನೂ ಓದಿ: ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ

2017ರಲ್ಲಿ ಪ್ರಸಾರ ಕಂಡ ‘ಬಿಗ್​ ಬಾಸ್​ ಕನ್ನಡ’ 5ನೇ ಸೀಸನ್​ನಲ್ಲಿ​ ನಿವೇದಿತಾ ಗೌಡ-ಚಂದನ್​ ಶೆಟ್ಟಿ ಪರಸ್ಪರ ಪರಿಚಯ ಆಗಿದ್ದರು. ಇಬ್ಬರ ಸ್ನೇಹ ನಂತರ ಪ್ರೀತಿಗೆ ತಿರುಗಿತು. ಮೈಸೂರು ಯುವ ದಸರಾ ವೇದಿಕೆಯಲ್ಲಿ ನಿವೇದಿತಾ ಗೌಡಗೆ ಚಂದನ್​ ಶೆಟ್ಟಿ ಅವರು ಮ್ಯಾರೇಜ್​ ಪ್ರಪೋಸ್​ ಮಾಡಿದ್ದರು. ಆ ಘಟನೆಯಿಂದ ವಿವಾದ ಕೂಡ ಆಗಿತ್ತು. ಬಳಿಕ 2020ರಲ್ಲಿ ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು