AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಹುಟ್ಟುಹಬ್ಬಕ್ಕೆ ಒಂದು ಬ್ಯಾಡ್​ ನ್ಯೂಸ್​, ಇನ್ನೊಂದು ಗುಡ್​ ನ್ಯೂಸ್​; ಇಲ್ಲಿದೆ ಉಪ್ಪಿಯ ಮುಖ್ಯ ಸಂದೇಶ

ಸೆ.18ರಂದು ಉಪೇಂದ್ರ ಜನ್ಮದಿನ. ಅಂದು ನೆಚ್ಚಿನ ನಟನ ಮನೆಯ ಬಳಿ ತೆರಳಿ, ಅವರನ್ನು ಭೇಟಿ ಮಾಡಿ ಅದ್ದೂರಿಯಾಗಿ ಹುಟ್ಟುಹಬ್ಬ ಸೆಲೆಬ್ರೇಟ್​ ಮಾಡಬೇಕು ಎಂದುಕೊಂಡವರಿಗೆ ನಿರಾಸೆ ಆಗಿದೆ.

ಉಪೇಂದ್ರ ಹುಟ್ಟುಹಬ್ಬಕ್ಕೆ ಒಂದು ಬ್ಯಾಡ್​ ನ್ಯೂಸ್​, ಇನ್ನೊಂದು ಗುಡ್​ ನ್ಯೂಸ್​; ಇಲ್ಲಿದೆ ಉಪ್ಪಿಯ ಮುಖ್ಯ ಸಂದೇಶ
ಉಪೇಂದ್ರ
TV9 Web
| Edited By: |

Updated on: Sep 17, 2021 | 9:06 AM

Share

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಜನ್ಮದಿನವನ್ನು (ಸೆ.18) ಆಚರಿಸಲು ಅಭಿಮಾನಿಗಳೆಲ್ಲ ಕಾದು ಕುಳಿತಿದ್ದಾರೆ. ಒಂದೆಡೆ ಸಿನಿಮಾ, ಇನ್ನೊಂದೆಡೆ ಪ್ರಜಾಕೀಯ ಎನ್ನುತ್ತಿರುವ ಉಪೇಂದ್ರ, ಈ ಎರಡೂ ಕ್ಷೇತ್ರದಲ್ಲಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಈ ವರ್ಷದ ಉಪ್ಪಿ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ ಆಗಿರಲಿದೆ. ಅದಕ್ಕೆ ಕಾರಣಗಳು ಹಲವು. ಆದರೆ ಜನ್ಮದಿನಕ್ಕೂ ಮುನ್ನವೇ ತಮ್ಮ ಅಭಿಮಾನಿ ಬಳಗಕ್ಕೆ ಉಪೇಂದ್ರ ಒಂದು ನಿರಾಸೆಯ ಸುದ್ದಿ ನೀಡಿದ್ದಾರೆ. ಫ್ಯಾನ್ಸ್​ ಜೊತೆ ಸೇರಿ ಬರ್ತ್​​ಡೇ ಆಚರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಮುಂಚಿತವಾಗಿಯೇ ತಿಳಿಸಿದ್ದಾರೆ. ಇದು ಸದ್ಯದ ಬ್ಯಾಡ್​ ನ್ಯೂಸ್​.

‘ಅಭಿಮಾನಿಗಳ ದಿನ, 18-09-2021. ಪ್ರತಿವರ್ಷ ಅಭಿಮಾನಿಗಳೊಂದಿಗೆ ಆಚರಿಸುತ್ತಿದ್ದ ಅಭಿಮಾನಿಗಳ ದಿನದ ಸಂಭ್ರಮ ಈ ವರ್ಷವೂ ಆಚರಿಸಲು ಆಗದಿರುವುದಕ್ಕೆ ವಿಷಾದಿಸುತ್ತೇನೆ. ನಾನು ಬೆಂಗಳೂರಿನಲ್ಲಿ ಇಲ್ಲದಿರುವ ಕಾರಣ ಎಲ್ಲಾ ಅಭಿಮಾನಿಗಳು ಅವರವರು ಇರುವ ಕಡೆಯೇ ಸರಳವಾಗಿ ಈ ದಿನವನ್ನು ಆಚರಿಸಿ ಹಾರೈಸಬೇಕಾಗಿ ಬಯಸುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಉಪ್ಪಿ ಪೋಸ್ಟ್​ ಮಾಡಿದ್ದಾರೆ. ಸದ್ಯ ಕೊರೊನಾ ಹಾವಳಿ ಮುಗಿದಿಲ್ಲ. ಹಾಗಾಗಿ ಅವರು ಎಲ್ಲರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇನ್ನು, ಗುಡ್​ ನ್ಯೂಸ್​ ಏನು ಎಂಬ ಬಗ್ಗೆ ಈಗಾಗಲೇ ಸುಳಿವು ಸಿಕ್ಕಿದೆ. ಉಪೇಂದ್ರ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್​ ಅಧಿಕೃತವಾಗಿ ಘೋಷಣೆ ಆಗಲಿದೆ. ಒಂದೆರಡು ದಿನಗಳಿಂದ ಈಚೆಗೆ ಟೈಟಲ್​ ಪೋಸ್ಟರ್​ ಲೀಕ್ ಆಗಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಅದರ ಬಗ್ಗೆ ಹುಟ್ಟುಹಬ್ಬದ ದಿನ ಉಪೇಂದ್ರ ಅವರಿಂದ ನಿಖರ ಮಾಹಿತಿ ಹೊರಬೀಳಲಿದೆ. ಆದ್ದರಿಂದ ಸೆ.18ಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

‘ರಿಯಲ್​ ಸ್ಟಾರ್​’ ನಿರ್ದೇಶನ ಮಾಡುತ್ತಾರೆ ಎಂದರೆ ಅಭಿಮಾನಿಗಳ ಮನದಲ್ಲಿ ಬೆಟ್ಟದಷ್ಟು ನಿರೀಕ್ಷೆ ಸಹಜವಾಗಿಯೇ ನಿರ್ಮಾಣ ಆಗುತ್ತದೆ. ಈ ಹಿಂದಿನ ಎ, ಉಪೇಂದ್ರ, ಸೂಪರ್​, ಉಪ್ಪಿ 2, ಓಂ, ಶ್​ ಮುಂತಾದ ಸಿನಿಮಾಗಳ ಮೂಲಕ ಅವರು ಅಂಥ ಛಾಪು ಮೂಡಿಸಿದ್ದಾರೆ. ಅವರ ಬತ್ತಳಿಕೆಯಿಂದ ಬರುವ ಮುಂದಿನ ಸಿನಿಮಾ ಹೇಗಿರಬಹುದು ಎಂಬ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆ ಮಾಡಿದೆ.

ಇದನ್ನೂ ಓದಿ:

Real Star Upendra: ಉಪೇಂದ್ರ ನಿರ್ದೇಶನದ ಹೊಸ ಚಿತ್ರದ ಪೋಸ್ಟರ್ ಲೀಕ್; ಚಿತ್ರದ ಟೈಟಲ್ ಏನು?

ಪ್ರಜಾಕೀಯದ ಹೈಕಮಾಂಡ್​ ಯಾರು ಎಂಬುದನ್ನು ಬಹಿರಂಗಪಡಿಸಿದ ಉಪೇಂದ್ರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್