AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಹಿಡಿದ ಶ್ರೇಯಸ್​ಗೆ ಆಲ್​ ದಿ ಬೆಸ್ಟ್​ ಹೇಳಿದ ಉಪೇಂದ್ರ

ಸಿನಿಮಾ ರಂಗದಲ್ಲಿ ಶ್ರೇಯಸ್​ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ‘ರಾಣ’ ಅವರಿಗೆ ಮೂರನೇ ಸಿನಿಮಾ.  ಈ ತಂಡಕ್ಕೆ ಉಪ್ಪಿ ಶುಭ ಕೋರಿದ್ದಾರೆ.

ಮಚ್ಚು ಹಿಡಿದ ಶ್ರೇಯಸ್​ಗೆ ಆಲ್​ ದಿ ಬೆಸ್ಟ್​ ಹೇಳಿದ ಉಪೇಂದ್ರ
ಮಚ್ಚು ಹಿಡಿದ ಶ್ರೇಯಸ್​ಗೆ ಆಲ್​ ದಿ ಬೆಸ್ಟ್​ ಹೇಳಿದ ಉಪೇಂದ್ರ
TV9 Web
| Edited By: |

Updated on: Sep 15, 2021 | 2:55 PM

Share

ನಟ ಉಪೇಂದ್ರ ಅವರು ಸಾಕಷ್ಟು ಯುವ ನಟರ ಬೆನ್ನು ತಟ್ಟಿದ್ದಾರೆ. ಹೊಸ ತಂಡಗಳ ಸಿನಿಮಾದ ಟೀಸರ್​, ಟ್ರೇಲರ್​ ರಿಲೀಸ್​ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈಗ ಉಪೇಂದ್ರ ಅವರು ಶ್ರೇಯಸ್ ಕೆ. ಮಂಜು ನಟಿಸುತ್ತಿರುವ ‘ರಾಣ’ ಚಿತ್ರದ  ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಸಿನಿಮಾ ರಂಗದಲ್ಲಿ ಶ್ರೇಯಸ್​ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ‘ರಾಣ’ ಅವರಿಗೆ ಮೂರನೇ ಸಿನಿಮಾ.  ಈ ತಂಡಕ್ಕೆ ಉಪ್ಪಿ ಶುಭ ಕೋರಿದ್ದಾರೆ. ‘ಶ್ರೇಯಸ್​ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಶ್ರೇಯಸ್ ಮೀರಿಸುತ್ತಾನೆ​. ಅವನಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದರು ಉಪೇಂದ್ರ.

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್​​ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯುವ ನಟರ ಹಾಡುಗಳಿಗೆ ಬೇಡಿಕೆ ಸಿಗೋದು ಕಷ್ಟ. ಆದರೆ, ಈ ಸಿನಿಮಾದ ಹಾಡುಗಳನ್ನು ಬರೋಬ್ಬರಿ 76 ಲಕ್ಷ ರೂಪಾಯಿಗೆ ಆನಂದ್ ಆಡಿಯೋ ಖರೀದಿಸಿದೆ ಅನ್ನೋದು ವಿಶೇಷ.

‘ಚಿತ್ರೀಕರಣ ಬಹುತೇಕ ಮುಗಿದಿದೆ. ಕೊವಿಡ್ ಕಾರಣದಿಂದ ಕೆಲವು ಜಾಗಗಳಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಸಿಕ್ಕಿದ್ದು ತಡವಾಯಿತು. ಇಲ್ಲದಿದ್ದರೆ, ಈ ವೇಳೆಗೆ ಸಿನಿಮಾ ರೆಡಿ ಆಗಿರುತ್ತಿತ್ತು. ಚಿತ್ರ ಉತ್ತಮವಾಗಿ ಬರಲು ಸಹಕರಿಸುತ್ತಿರುವ ಚಿತ್ರತಂಡದ ಸದಸ್ಯರಿಗೆ ನನ್ನ ಧನ್ಯವಾದ’ ಎಂದರು ನಿರ್ದೇಶಕ ನಂದ ಕಿಶೋರ್‌ .

‘ನಾನು ಚಿಕ್ಕ ವಯಸ್ಸಿನಿಂದಲೂ ಉಪೇಂದ್ರ ಅವರ ಅಭಿಮಾನಿ. ನಾನು ಅವರಿಂದ ಕಲಿತಿರುವುದು  ಸಾಕಷ್ಟು. ಇದೆ. ಚಿತ್ರರಂಗಕ್ಕೆ ಹೊಸದಾಗಿ ಬರುತ್ತಿರುವ ನೂತನ ಪ್ರತಿಭೆಗಳಿಗೆ ಅವರು ನೀಡುವ ಪ್ರೋತ್ಸಾಹಕ್ಕೆ ಚಿರ ಋಣಿ. ಶಿವರಾಜ್​​ಕುಮಾರ್ ಅವರು ಸಹ ನನಗೆ ಈ ಚಿತ್ರದಲ್ಲಿ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟಿದ್ದಾರೆ. ನಾನು ಏನಾದರೂ ಉತ್ತಮವಾಗಿ ನಟಿಸಿದ್ದೇನೆಂದರೆ ಅದಕ್ಕೆ ಕಾರಣ ನಿರ್ದೇಶಕ ನಂದಕಿಶೋರ್ ಹಾಗೂ ಛಾಯಾಗ್ರಹಕ ಶೇಖರ್ ಚಂದ್ರ. ಹಿರಿಯ ಕಲಾವಿದರಿಗೆ, ನಿರ್ಮಾಪಕರಿಗೆ, ನನ್ನ ಅಪ್ಪ ಕೆ.ಮಂಜು ಅವರಿಗೆ ಹಾಗೂ ಇಡೀ ತಂಡಕ್ಕೆ’ ಧನ್ಯವಾದ ಎಂದರು ಶ್ರೇಯಸ್.

ಈ ಚಿತ್ರದಲ್ಲಿ ಶ್ರೇಯಸ್​​ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ‘ರಾಣ’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ‌.

ಇದನ್ನೂ ಓದಿ: Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ