AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮತ್ತು ಗ್ಯಾಂಗ್​ಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರು ನೀಡಿದ ಕಾರಣಗಳು

Renuka Swamy: ದರ್ಶನ್ ತೂಗುದೀಪ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲರಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಲಾಗಿದೆ. ನ್ಯಾಯಾಂಗ ಬಂಧನ ಆದೇಶ ವಿಸ್ತರಿಸಲು ಕಾರಣವಾದ ಅಂಶಗಳು ಯಾವುವು? ಇಲ್ಲಿದೆ ಮಾಹಿತಿ.

ದರ್ಶನ್ ಮತ್ತು ಗ್ಯಾಂಗ್​ಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರು ನೀಡಿದ ಕಾರಣಗಳು
ದರ್ಶನ್-ರೇಣುಕಾ ಸ್ವಾಮಿ
ಮಂಜುನಾಥ ಸಿ.
|

Updated on: Aug 14, 2024 | 3:58 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಕಳೆದ ಎರಡು ತಿಂಗಳಿನಿಂದಲೂ ಜೈಲುವಾಸಿಯಾಗಿರುವ ದರ್ಶನ್ ಮತ್ತು ಸಂಗಡಿಗರಿಗೆ ಬುಧವಾರ ಮತ್ತೆ ನಿರಾಸೆಯಾಗಿದೆ. ನ್ಯಾಯಾಲಯವು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28ರ ವರೆಗೆ ಮುಂದೂಡಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಏಕೆ ಮುಂದುವರೆಸಬೇಕು ಎಂದು ಪೊಲೀಸರು ಕೆಲವು ಕಾರಣಗಳನ್ನು ನ್ಯಾಯಾಲಯಕ್ಕೆ ನೀಡಿದ್ದರು. ಆ ಕಾರಣಗಳನ್ನು ಪರಿಗಣಿಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದರು. ಪೊಲೀಸರು ನ್ಯಾಯಾಲಯಕ್ಕೆ ನೀಡಿದ ಕಾರಣಗಳು ಈ ಕೆಳಕಂಡಂತಿವೆ.

ಇದನ್ನೂ ಓದಿ:‘ದರ್ಶನ್​ ಸಲುವಾಗಿ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ’: ಜಗ್ಗೇಶ್ ನೇರ ಮಾತು

1) ಆರೋಪಿಗಳು ಕೊಲೆಯಲ್ಲಿ ಭಾಗಿಯಾಗಿದ್ದು FSL ವರದಿಯಲ್ಲಿ ಬಹುತೇಕ ದೃಢವಾಗಿದೆ. ಈಗಾಗಲೇ ಕೆಲವು ಎಫ್​ಎಸ್​ಎಲ್​ ವರದಿಗಳು ಬಂದಿವೆ. ಇನ್ನೂ ಕೆಲವು ವರದಿಗಳು ಬರಬೇಕಿವೆ.

2) ಪ್ರಕರಣ ಸಂಬಂಧ ಇನ್ನೂ ಹಲವರ ವಿಚಾರಣೆ ಬಾಕಿ ಇದೆ, ಸೆಕ್ಷನ್ 164 ರ ಅಡಿಯಲ್ಲಿ ಕೆಲವು ಸಾಂದರ್ಭಿಕ ಸಾಕ್ಷಿಗಳ ಹೇಳಿಕೆ ಬಾಕಿ ಇದೆ.

3) ಆರೋಪಿಗಳು ಪ್ರಭಾವಿಗಳಾಗಿದ್ದು ಮೃತ ರೇಣುಕಾ ಸ್ವಾಮಿಯ ಕುಟುಂಬಕ್ಕೆ ಆಮಿಷ ಅಥವಾ ಬೆದರಿಕೆ ಸಾಧ್ಯತೆ ಇದೆ.

4) ಮತ್ತಷ್ಟು ಟೆಕ್ನಿಕಲ್ ಸಾಕ್ಷಿಗಳನ್ನು CFSL ಪರೀಕ್ಷೆಗೆಂದು ಕಳಿಸಿದ್ದು ಅವುಗಳ ವರದಿ ಬರುವುದು ಬಾಕಿ ಇದೆ.

5) ಪವಿತ್ರ, ದರ್ಶನ್ ನಿಂದ 17 ಆರೋಪಿಗಳವರೆಗೆ ಕೃತ್ಯದಲ್ಲಿ ಭಾಗಿ ಆಗಿರುವುದು ಮೇಲ್ನೋಟಕ್ಕೆ ತಿಳಿದಿದೆ. ಅಷ್ಟು ಮಂದಿಯ ವಿರುದ್ದ ಭೌತಿಕ, ತಾಂತ್ರಿಕ, ಸಾಂದರ್ಭಿಕ ಸಾಕ್ಷಿ ಪತ್ತೆ ಆಗಿದೆ.

6) ಕೊಲೆಯಲ್ಲಿ ಪ್ರತಿ ಆರೋಪಿಯ ಪಾತ್ರದದ ಬಗ್ಗೆ ತಿಳಿಯಬೇಕಿದೆ. ಕೃತ್ಯದಲ್ಲಿ ಪ್ರತಿಯೊಬ್ಬರು ವಹಿಸಿದ್ದ ಪಾತ್ರ, ಉದ್ದೇಶಗಳ ಬಗ್ಗೆ ಗೊತ್ತಾಗಬೇಕಿದೆ.

7) ಆರೋಪಿಗಳಿಗೆ ಹಣಬಲ ಇದೆ. ಆರೋಪಿಗಳು ಪ್ರಭಾವಿಗಳಾಗಿದ್ದಾರೆ. ಆರೋಪಿಗಳಿಗೆ ಜಾಮೀನು ನೀಡಿದರೆ ತೊಂದರೆ ಆಗುವ ಸಾಧ್ಯತೆ ಇದೆ. ಸಾಕ್ಷಿಗಳ ಬೆದರಿಕೆ ಹಾಕಿ ಸಾಕ್ಷಿ ನಾಶ ಸಾಧ್ಯತೆ ಇದೆ.

ಈ ಎಲ್ಲ ಕಾರಣಗಳನ್ನು ಪರಿಗಣಿಸಿ ನ್ಯಾಯಾಧೀಶರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸೆಪ್ಟೆಂಬರ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದ್ದು, ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ದರ್ಶನ್​ ಹಾಗೂ ಇತರೆ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?