Reba Monica John: ಬೆಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ರತ್ನನ್ ಪ್ರಪಂಚ’ ಬೆಡಗಿ ರೆಬಾ ಮೋನಿಕಾ ಜಾನ್

Reba Monica John Marriage: ರೆಬಾ ಮಾನಿಕಾ ಜಾನ್ ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜನವರಿ 9ರಂದು ಬೆಂಗಳೂರಿನಲ್ಲಿ ಅವರು ವಿವಾಹವಾಗಿದ್ದಾರೆ.

Reba Monica John: ಬೆಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ರತ್ನನ್ ಪ್ರಪಂಚ’ ಬೆಡಗಿ ರೆಬಾ ಮೋನಿಕಾ ಜಾನ್
ರೆಬಾ ಮೋನಿಕಾ ಜಾನ್ ಮತ್ತು ಜೋಮೋನ್ ವಿವಾಹದ ಸಂದರ್ಭದ ಚಿತ್ರ
Follow us
| Updated By: shivaprasad.hs

Updated on: Jan 12, 2022 | 4:54 PM

‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾದ ರೆಬಾ ಮೋನಿಕಾ ಜಾನ್ (Reba Monica John) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ (Joemon) ಅವರೊಂದಿಗೆ ಜನವರಿ 9ರಂದು ರೆಬಾ ವಿವಾಹವಾಗಿದ್ದು, ಬೆಂಗಳೂರಿನ ಬ್ರಿಗೇಡ್​ ರಸ್ತೆಯ ಚರ್ಚ್​ನಲ್ಲಿ ಸಮಾರಂಭ ನೆರವೇರಿದೆ. ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಶೇರ್ ಮಾಡಿರುವ ನಟಿ, ಈ ಮೂಲಕ ಎಲ್ಲರೊಡನೆ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಮಲಯಾಳಂ, ತಮಿಳು ಸೇರಿದಂತೆ ವಿವಿಧ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೆಬಾಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಶುಭ ಕೋರಿದ್ದಾರೆ.

ವಿವಾಹದ ಕುರಿತು ರೆಬಾ ಹಂಚಿಕೊಂಡ ಪೋಸ್ಟ್: 

ರೆಬಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2016ರಲ್ಲಿ. ಮಲಯಾಳಂನ ‘ಜಾಕೋಬಿಂಟೆ ಸ್ವರ್ಗರಾಜ್ಯಂ’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ನಂತರ ‘ಮಿಖಾಯೆಲ್’, ’ಫೊರೆನ್ಸಿಕ್’ ಮೊದಲಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ತಮಿಳಿನಲ್ಲಿ ವಿಜಯ್ ನಟನೆಯ ‘ಬಿಗಿಲ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಬಣ್ಣಹಚ್ಚಿದ್ದರು. ‘ಎಫ್​ಐಆರ್’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ರೋಹಿತ್ ಪದಕಿ ನಿರ್ದೇಶನ ಹಾಗೂ ಧನಂಜಯ ನಟನೆಯ ‘ರತ್ನನ್ ಪ್ರಪಂಚ’ದ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದರು. ಅವರ ಪಾತ್ರ ಪೋಷಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ರೆಬಾ ಮೋನಿಕಾ ಜಾನ್ ಅವರು ಮಲಯಾಳಿಯಾದರೂ ಬೆಂಗಳೂರಿನಲ್ಲೇ ಹುಟ್ಟಿಬೆಳೆದವರು. ಕನ್ನಡ ಓದಲು ಹಾಗೂ ಬರೆಯಲು ಕೂಡ ಅವರಿಗೆ ಬರುತ್ತದೆ. ಈ ಹಿಂದೆ ಸಂದರ್ಶನವೊಂದರಲ್ಲಿ ನೆಚ್ಚಿನ ಸ್ಥಳ ಯಾವುದು ಎಂಬ ಪ್ರಶ್ನೆಗೆ, ಎಲ್ಲರಿಗೂ ಅಂತಿಮವಾಗಿ ಅವರವರ ಮನೆಯೇ ಇಷ್ಟವಾಗುತ್ತದೆ. ಹಾಗಾಗಿ ನನಗೆ ಬೆಂಗಳೂರೇ ಅಚ್ಚುಮೆಚ್ಚು ಎಂದಿದ್ದರು. ಇದೀಗ ರೆಬಾ ತಮ್ಮ ಗೆಳೆಯ ಜೋಮೋನ್ ಜತೆ ಬೆಂಗಳೂರಿನಲ್ಲೇ ವಿವಾಹವಾಗಿದ್ದಾರೆ. ಅವರು ಮತ್ತಷ್ಟು ಕನ್ನಡದ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿ ಎಂಬ ಕೋರಿಕೆ ಅಭಿಮಾನಿಗಳದ್ದು.

ಇದನ್ನೂ ಓದಿ:

Rathnan Prapancha Movie Review: ಸಂಬಂಧಗಳ ಅರ್ಥ ತಿಳಿಯಲು ಪ್ರಪಂಚ ಸುತ್ತಿದ ರತ್ನ; ಧನಂಜಯ ಖಾತೆಗೆ ಇನ್ನೊಂದು ಭಿನ್ನ ಸಿನಿಮಾ

ಮನಸ್ಸು ಬದಲಾಯಿಸಿದ ಕೆಜಿಎಫ್ ಬೆಡಗಿ; ಭಾರತದ ಸಮುದ್ರ ತಟದಲ್ಲೇ ನೆರವೇರಲಿದೆ ಅದ್ದೂರಿ ಕಲ್ಯಾಣ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ