Ambareesh Death Anniversary: ‘ಕ್ಷಣಕ್ಷಣವೂ ನೆನಪಾಗಿ ನನ್ನೊಂದಿಗೆ ಇದ್ದೀರಿ’; ಅಂಬಿ ಪುಣ್ಯ ಸ್ಮರಣೆಗೆ ಸುಮಲತಾ ಭಾವುಕ ಮಾತು

Rebel Star Ambareesh | Sumalatha Ambareesh: ಅಂಬರೀಷ್ ಅವರು ಇಹಲೋಕ ತ್ಯಜಿಸಿ 4 ವರ್ಷ ಕಳೆದಿದೆ. ಅವರ ನೆನಪಿನಲ್ಲಿ ಅಭಿಮಾನಿಗಳು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

Ambareesh Death Anniversary: ‘ಕ್ಷಣಕ್ಷಣವೂ ನೆನಪಾಗಿ ನನ್ನೊಂದಿಗೆ ಇದ್ದೀರಿ’; ಅಂಬಿ ಪುಣ್ಯ ಸ್ಮರಣೆಗೆ ಸುಮಲತಾ ಭಾವುಕ ಮಾತು
ಅಂಬರೀಷ್
Follow us
| Updated By: ಮದನ್​ ಕುಮಾರ್​

Updated on:Nov 24, 2022 | 10:26 AM

ಕನ್ನಡ ಚಿತ್ರರಂಗ ಕಂಡ ವಿಶೇಷ ನಟ ಅಂಬರೀಷ್​ (Ambareesh). ಅಭಿಮಾನಿಗಳ ಪಾಲಿನ ‘ರೆಬಲ್​ ಸ್ಟಾರ್​’ ಅವರು. ನೂರಾರು ಬಗೆಯ ಪಾತ್ರಗಳ ಮೂಲಕ ಜನರನ್ನು ರಂಜಿಸಿದ ‘ಮಂಡ್ಯದ ಗಂಡು’ ಸಂಪಾದಿಸಿದ ಅಭಿಮಾನ ಅಷ್ಟಿಷ್ಟಲ್ಲ. ನಟನಾಗಿ, ರಾಜಕಾರಣಿ ಆಗಿ ಅವರು ಸಾಕಷ್ಟು ಗಮನ ಸೆಳೆದರು. ರಿಯಲ್​ ಲೈಫ್​ನಲ್ಲಿಯೂ ಅಂಬರೀಷ್​ ಅವರದ್ದು ವರ್ಣರಂಜಿತ ವ್ಯಕ್ತಿತ್ವ. ಅವರ ವಿಶೇಷ ವ್ಯಕ್ತಿತ್ವಕ್ಕೆ ಅಭಿಮಾನಿಗಳು ಮನಸೋತಿದ್ದರು. ಇಂದು (ನ.24) ಅಂಬರೀಷ್​ ಪುಣ್ಯ ಸ್ಮರಣೆ (Ambareesh Death Anniversary) ಪ್ರಯುಕ್ತ ಅವರನ್ನು ಹಲವು ರೀತಿಯಲ್ಲಿ ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಕುಟುಂಬದವರು ಮತ್ತು ಅಭಿಮಾನಿಗಳು ಅಂಬಿ ಸಮಾಧಿ ಸ್ಥಳಕ್ಕೆ ತೆರಳಿ ನಮಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ (Sumalatha Ambareesh) ಅವರು ಸೋಶಿಯಲ್​ ಮೀಡಿಯಾದಲ್ಲಿ ಭಾವುಕ ಪೋಸ್ಟ್​ ಹಂಚಿಕೊಂಡಿದ್ದಾರೆ.

2014ರಲ್ಲಿ ಅಂಬರೀಷ್​ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಅಭಿಮಾನಿಗಳ ಹಾರೈಕೆಯಿಂದ ಗುಣಮುಖರಾಗಿ ಬಂದಿದ್ದರು. ಎಂದಿನಂತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಆದರೆ 2018ರ ನವೆಂಬರ್​ 24 ಅಭಿಮಾನಿಗಳ ಪಾಲಿಗೆ ಕರಾಳ ದಿನವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಅಂದು ಅಂಬರೀಷ್​ ಕೊನೆಯುಸಿರೆಳೆದರು.

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ಅಂಬರೀಷ್​ ಅವರನ್ನು ಸ್ಮರಿಸಿಕೊಂಡು ಸುಮಲತಾ ಅಂಬರೀಷ್​ ಭಾವುಕ ಬರಹ ಹಂಚಿಕೊಂಡಿದ್ದಾರೆ. ‘ನಟನಾಗಿ ಜೊತೆಯಾಗಿ, ಬಾಳ ಸಂಗಾತಿಯಾಗಿ ಹಾಕಿದ ಹೆಜ್ಜೆಗಳು ಯಾವತ್ತಿಗೂ ಜೀವಂತ. ನಿಮ್ಮ ಸಿಡುಕು, ಸಂಭ್ರಮ ಹಿತ ಹಿತ. ದೈಹಿಕವಾಗಿ ನೀವು ನಮ್ಮೊಂದಿಗೆ ಇಲ್ಲ ಅನ್ನುವುದನ್ನು ಬಿಟ್ಟರೆ, ಕ್ಷಣಕ್ಷಣವೂ ನೆನಪಾಗಿ ನನ್ನೊಂದಿಗೆ ಇದ್ದೀರಿ. ನಿಮ್ಮ ಕನಸು, ಕನವರಿಕೆ, ಸಮಾಜಮುಖಿ ಕೆಲಸ, ನಾಡಿನ ಮೇಲಿದ್ದ ಒಲವು ಅವು ಮುಂದುವರಿಯುತ್ತಿವೆ ನಿಮ್ಮದೇ ಹೆಸರಿನಲಿ. ಜೊತೆಗಿರದ ಜೀವ ಎಂದೆಂದಿಗೂ ಜೀವಂತ. ನಿಮ್ಮ ಪುಣ್ಯಸ್ಮರಣೆಗೆ ನನ್ನ ಹೃದಯಾಂತರಾಳದ ನಮನ. ಅಂಬಿ ಅಮರ’ ಎಂದು ಪೋಸ್ಟ್​ ಮಾಡಿದ್ದಾರೆ.

ಇಂದಿಗೆ ಅಂಬರೀಷ್ ಅವರು ಇಹಲೋಕ ತ್ಯಜಿಸಿ 4 ವರ್ಷ ಕಳೆದಿದೆ. ಸಿನಿಮಾಗಳ ಮೂಲಕ ಅವರು ಎಂದಿಗೂ ಜೀವಂತವಾಗಿ ಇರುತ್ತಾರೆ. ಅವರ ನೆನಪಿನಲ್ಲಿ ಅಭಿಮಾನಿಗಳು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:26 am, Thu, 24 November 22

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ