AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಗುತ್ತಿದೆ ಚಿಂದಿ ಆಯುವ ಮಹಿಳೆಯ ಕಥೆ: ‘ಬೀದಿ ಬದುಕು’ ಟ್ರೇಲರ್ ರಿಲೀಸ್

ರೇಖಾ ಸಾಗರ್ ಅಭಿನಯದ ‘ಬೀದಿ ಬದುಕು’ ಸಿನಿಮಾಗೆ ಪುರುಷೋತ್ತಮ್ ಓಂಕಾರ್ ಅವರು ನಿರ್ದೇಶನ ಮಾಡಿದ್ದಾರೆ. ಸ್ಲಂ, ಗುಡಿಸಲುಗಳು, ಸ್ಮಶಾನ, ಆಸ್ಪತ್ರೆ ಮುಂತಾದ ರಿಯಲ್ ಲೊಕೇಷನ್​​ಗಳಲ್ಲಿ ಈ ಚಿತ್ರದ ಶೂಟಿಂಗ್ ಮಾಡಲಾಗಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿವೆ. ಸಿನಿಮಾದ ಬಿಡುಗಡೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಸಿನಿಮಾ ಆಗುತ್ತಿದೆ ಚಿಂದಿ ಆಯುವ ಮಹಿಳೆಯ ಕಥೆ: ‘ಬೀದಿ ಬದುಕು’ ಟ್ರೇಲರ್ ರಿಲೀಸ್
Beedi Baduku Movie Team
ಮದನ್​ ಕುಮಾರ್​
|

Updated on: Oct 14, 2025 | 5:17 PM

Share

ನಿರ್ದೇಶಕ ಪುರುಷೋತ್ತಮ್ ಓಂಕಾರ್ ಅವರು ‘ಬೀದಿ ಬದುಕು’ (Beedi Baduku) ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈವರೆಗೂ ಬಹುತೇಕ ಭಕ್ತಿಪ್ರಧಾನ ಸಿನಿಮಾಗಳಿಂದ ಗುರುತಿಸಿಕೊಂಡ ಅವರು ಈಗ ಒಂದು ಡಿಫರೆಂಟ್ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹೊಟ್ಟೆ ಪಾಡಿಗಾಗಿ ಚಿಂದಿ ಆಯುವ ಮಹಿಳೆಯ ಬದುಕಿನ ಕಥೆ ಇಟ್ಟಕೊಂಡು ಅವರು ‘ಬೀದಿ ಬದುಕು’ ಸಿನಿಮಾ ಮಾಡಿದ್ದಾರೆ. ನಟಿ ರೇಖಾ ಸಾಗರ್ (Rekha Sagar) ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ರಾಜ್ ಭಾಸ್ಕರ್ ಅವರ ಸಂಗೀತ, ಮುತ್ತುರಾಜ್ ಅವರ ಛಾಯಾಗ್ರಹಣ, ಅನಿಲ್ ಅವರ ವಿ.ಎಫ್.ಎಕ್ಸ್. ಮತ್ತು ಸಂಕಲನ ಈ ಚಿತ್ರಕ್ಕಿದೆ.

ರಸ್ತೆ ಬದಿಯಲ್ಲಿ ಚಿಂದಿ ಆಯುತ್ತ ಜೀವನ ನಡೆಸುವ ಮಹಿಳೆಯೊಬ್ಬಳ ಬದುಕು ಹೇಗಿರುತ್ತದೆ? ತನ್ನ ಪುಟ್ಟ ಮಗನಿಗಾಗಿ ಆಕೆ ಪಡುವ ಕಷ್ಟಗಳು ಹೇಗಿರುತ್ತವೆ ಎಂಬಿತ್ಯಾದಿ ಅಂಶಗಳನ್ನು ‘ಬೀದಿ ಬದುಕು’ ಸಿನಿಮಾ ಮೂಲಕ ಪ್ರೇಕ್ಷಕರಿಗೆ ತೋರಿಸಲಾಗುತ್ತದೆ ಎಂದು ಚಿತ್ರತಂಡದವರು ಹೇಳಿದ್ದಾರೆ. ನಟಿ ರೇಖಾ ಸಾಗರ್ (ರೇಖಾರಾಣಿ) ಅವರು ನಾಯಕಿಯಾಗಿ ಅಭಿನಯಿಸುವುದರ ಜೊತೆಗೆ ನಿರ್ಮಾಣ ಕೂಡ ಮಾಡಿದ್ದಾರೆ.

‘ಬೀದಿ ಬದುಕು’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿ ರೇಖಾ ಸಾಗರ್, ನಿರ್ದೇಶಕ ಪುರುಷೋತ್ತಮ್, ರಾಜ್ ಭಾಸ್ಕರ್, ಗಣೇಶ್ ರಾವ್ ಕೇಸರ್ಕರ್, ಸಂಕಲನಕಾರ ಅನಿಲ್, ಮಾ. ಸಾಕೇತ್, ಡಾ. ರೂಪೇಶ್ ಮುಂತಾದವರು ಹಾಜರಿದ್ದರು. ಸಾಕಷ್ಟು ಸೀರಿಯಲ್​​ಗಳಲ್ಲಿ ನಟಿಸಿದ ಅನುಭವ ರೇಖಾ ಸಾಗರ್ ಅವರಿಗೆ ಇದೆ. ಕುಡುಕ ಗಂಡನ ಉಪಟಳದ ನಡುವೆ ತನ್ನ ಮಗನಿಗಾಗಿ ಚಿಂದಿ ಆಯುವ ಮಹಿಳೆಯು ಏನೆಲ್ಲ ಕಷ್ಟಪಡುತ್ತಾಳೆ ಎಂಬುದೇ ‘ಬೀದಿ ಬದುಕು’ ಸಿನಿಮಾದ ಕಥಾಸಾರಾಂಶ.

‘ಬೀದಿ ಬದುಕು’ ಸಿನಿಮಾದ ಟ್ರೇಲರ್:

ವಿಶೇಷ ಏನೆಂದರೆ ನಿಜವಾದ ಸ್ಲಂ, ಗುಡಿಸಲುಗಳು, ಸ್ಮಶಾನ ಮತ್ತು ಆಸ್ಪತ್ರೆಯಲ್ಲಿ ‘ಬೀದಿ ಬದುಕು’ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ‘ಎಲ್ಲ ರಿಯಲ್ ಲೊಕೇಶನ್​​ಗಳಲ್ಲಿ 25 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಅಲ್ಲದೇ, ಇಡೀ ಸಿನಿಮಾವನ್ನು ಸಿಂಕ್ ಸೌಂಡ್​​ನಲ್ಲಿ ಮಾಡಿದ್ದೇವೆ’ ಎಂದು ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ದಲ್ಲಿ ವಾಟರ್ ಕ್ಯಾನ್: ಈ ರೀತಿ ತಪ್ಪು ಮಾಡಿದ ದೊಡ್ಡ ಸಿನಿಮಾಗಳ ಪಟ್ಟಿ ಇಲ್ಲಿದೆ

ಸಿನಿಮಾದ ಶೂಟಿಂಗ್ ಅನುಭವವನ್ನು ನಟಿ, ನಿರ್ಮಾಪಕಿ ರೇಖಾ ಸಾಗರ್ ಅವರು ಹಂಚಿಕೊಂಡರು. ‘ಈ ಪಾತ್ರವನ್ನು ನಾನೇ ಮಾಡಬೇಕೆಂದು ಸವಾಲಾಗಿ ತೆಗೆದುಕೊಂಡೆ‌. ಸ್ಲಂಗಳಿಗೆ ಹೋಗಿ ಅವರು ಹೇಗಿರುತ್ತಾರೆ ಎಂಬುದನ್ನು ತಿಳಿದುಕೊಂಡೆ. ಇರುವವರು ಇಲ್ಲವರಿಗೆ ಸಹಾಯ ಮಾಡಬೇಕು ಎಂಬುದೇ ನಮ್ಮ ಚಿತ್ರದ ಆಶಯ. ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ಸದ್ಯದಲ್ಲೇ ರಿಲೀಸ್ ಮಾಡುತ್ತಿದ್ದೇವೆ’ ಎಂದು ರೇಖಾ ಸಾಗರ್ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?