AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ

ನಟನೆಯ ಜೊತೆಗೆ ಅವರು ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರಿಗೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕಿರುತೆರೆ. 'ಜನನಿ' ಧಾರಾವಾಹಿಯ ಮೂಲಕ ನಟನೆ ಆರಂಭಿಸಿದ ಅವರು ನಂತರ ನಿರ್ಮಾಪಕರಾಗಿ ಯಶಸ್ವಿಯಾದರು. ತಮ್ಮ ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಸಂಸ್ಥೆಯಡಿ ಅನೇಕ ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿದರು.

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ
ದಿಲೀಪ್ ರಾಜ್ ನಿಧನ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 13, 2026 | 8:24 AM

Share

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ.

ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ ಹೆಸರಿನ ಪಾತ್ರವನ್ನು ಮಾಡಿದ್ದರು. ಕೇವಲ ಕಿರುತೆರೆಗೆ ಸೀಮಿತವಾಗದೆ, ಉತ್ತಮ ಸಿನಿಮಾಗಳ ಮೂಲಕವೂ ಪ್ರೇಕ್ಷಕರನ್ನು ತಲುಪಿದ್ದರು. ‘ಮಿಲನ’ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಸಹೋದರನಾಗಿ ನಟಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು. ‘ಪರಿಚಯ’, ‘ನನ್ನಿ ಪಾರು’, ‘ಬಾರ್ಡರ್’, ಮತ್ತು ‘ಪಂಚಾಮೃತ’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ನಟನೆಯ ಜೊತೆಗೆ ಅವರು ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರಿಗೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕಿರುತೆರೆ. ‘ಜನನಿ’ ಧಾರಾವಾಹಿಯ ಮೂಲಕ ನಟನೆ ಆರಂಭಿಸಿದ ಅವರು ನಂತರ ನಿರ್ಮಾಪಕರಾಗಿ ಯಶಸ್ವಿಯಾದರು.

ತಮ್ಮ ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಸಂಸ್ಥೆಯಡಿ ಅನೇಕ ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿದರು. ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಇವರ ನಿರ್ಮಾಣದ ಅತಿದೊಡ್ಡ ಯಶಸ್ಸು. ಇದರಲ್ಲಿ ಅವರು ‘ಅಭಿರಾಮ್ ಜಯಶಂಕರ್’ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ಇದರ ಹೊರತಾಗಿ ‘ಪಾರು’ ಸೇರಿದಂತೆ ಹಲವು ಸರಣಿಗಳಿಗೆ ಇವರು ಕೆಲಸ ಮಾಡಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕೃಷ್ಣ ರುಕ್ಕು’ ಧಾರಾವಾಹಿಯನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ ಹಾಗೂ ಇದಕ್ಕೆ ಕ್ರಿಯೇಟಿವ್ ಹೆಡ್ ಕೂಡ ಹೌದು. ಇತ್ತೀಚೆಗೆ ತೆರೆಗೆ ಬಂದ ‘ಮಿಲನ’ ಚಿತ್ರದಲ್ಲಿ ಅವರು ಲಾಯರ್ ಪಾತ್ರ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ ದಿಲೀಪ್ ರಾಜ್ ಅವರು ಕೇವಲ ಒಬ್ಬ ಕಲಾವಿದರಾಗಿರದೆ, ಶಿಸ್ತು ಮತ್ತು ಸಮಯಪ್ರಜ್ಞೆಗೆ ಹೆಸರಾದವರು. ಅವರ ನಗುಮುಖದ ವ್ಯಕ್ತಿತ್ವ ಮತ್ತು ಕಲಾಬದುಕು ಎಂದಿಗೂ ಅಭಿಮಾನಿಗಳ ನೆನಪಿನಲ್ಲಿರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸೋಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:24 am, Wed, 13 May 26

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ