AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rajyotsava 2021: ‘ಜೀವ ಕನ್ನಡ, ದೇಹ ಕನ್ನಡ..’ ಎನ್ನುತ್ತ ‘ವೀರ ಕನ್ನಡಿಗ’ ಆಗಿದ್ದ ಪುನೀತ್​; ರಾಜ್ಯೋತ್ಸವದಲ್ಲಿ ಕಾಡುವ ನೆನಪು

Puneeth Rajkumar: ಕನ್ನಡಿಗರ ಪಾಲಿಗೆ ಡಾ. ರಾಜ್​ಕುಮಾರ್​ ಮಾದರಿ ವ್ಯಕ್ತಿ ಆಗಿದ್ದರು. ಪುನೀತ್​ ರಾಜ್​ಕುಮಾರ್​ ರೂಪದಲ್ಲೂ ಜನರು ಅಣ್ಣಾವ್ರನ್ನು ಕಾಣುತ್ತಿದ್ದರು. ರಾಜ್ಯೋತ್ಸವದ ಸಂದರ್ಭದಲ್ಲಿ ಈ ಇಬ್ಬರು ಮಹಾನ್​ ಪುರುಷರು ಅತಿಯಾಗಿ ನೆನಪಾಗುತ್ತಿದ್ದಾರೆ.

Karnataka Rajyotsava 2021: ‘ಜೀವ ಕನ್ನಡ, ದೇಹ ಕನ್ನಡ..’ ಎನ್ನುತ್ತ ‘ವೀರ ಕನ್ನಡಿಗ’ ಆಗಿದ್ದ ಪುನೀತ್​; ರಾಜ್ಯೋತ್ಸವದಲ್ಲಿ ಕಾಡುವ ನೆನಪು
‘ವೀರ ಕನ್ನಡಿಗ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 01, 2021 | 9:29 AM

Share

ಕನ್ನಡಿಗರ ಪಾಲಿಗೆ ಇದೊಂದು ಸಂದಿಗ್ಧ ಪರಿಸ್ಥಿತಿ. ಒಂದು ಕಡೆ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡ ನೋವು ಎದುರಾಗಿದೆ. ಇನ್ನೊಂದು ಕಡೆ ಕನ್ನಡ ರಾಜ್ಯೋತ್ಸವ ಕೂಡ ಬಂದಿದೆ. ಬಂಗಾರದಂತಹ ಮನುಷ್ಯನನ್ನು ಕಳೆದುಕೊಂಡಿದ್ದಕ್ಕೆ ಅಳಬೇಕೋ ಅಥವಾ ನೋವು ಬದಿಗಿಟ್ಟು ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೋ ತಿಳಿಯುತ್ತಿಲ್ಲ. ಪುನೀತ್​ ಅವರಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿ ಮೇಲೆ ಇದ್ದ ಗೌರವ ಅಪಾರ. ಅವರು ನಟಿಸಿದ್ದ ‘ವೀರ ಕನ್ನಡಿಗ’ ಸಿನಿಮಾದಲ್ಲಿ ಕನ್ನಡಿಗರ ಹೋರಾಟದ ಕಥೆಯನ್ನು ತೋರಿಸಲಾಗಿತ್ತು. ಅಭಿಮಾನಿಗಳ ಪಾಲಿಗೆ ಆ ಚಿತ್ರ ಈಗಲೂ ಅಚ್ಚುಮೆಚ್ಚು.

2004ರಲ್ಲಿ ‘ವೀರ ಕನ್ನಡಿಗ’ ಸಿನಿಮಾ ತೆರೆಕಂಡಿತ್ತು. ಆ ಚಿತ್ರದಲ್ಲಿ ಪುನೀತ್​ ಎರಡು ಪಾತ್ರ ನಿಭಾಯಿಸಿದ್ದರು. ತಂದೆ ಮತ್ತು ಮಗನ ಪಾತ್ರಗಳಲ್ಲಿ ಅವರು ಅತ್ಯುತ್ತಮವಾಗಿ ನಟಿಸಿದ್ದರು. ಆ ಚಿತ್ರದ ಕಥೆ ಕನ್ನಡಿಗರ ಅಸ್ತಿತ್ವದ ಕುರಿತಾಗಿತ್ತು. ಹೊಟ್ಟೆಪಾಡಿಗಾಗಿ ಕೂಲಿ ಕೆಲಸ ಹುಡುಕಿಕೊಂಡು ಮುಂಬೈಗೆ ಹೋಗುವ ಕನ್ನಡಿಗರು ಅಲ್ಲಿ ಹೇಗೆಲ್ಲ ಕಷ್ಟ ಅನುಭವಿಸುತ್ತಾರೆ? ಅವರ ಮೇಲೆ ಬೇರೆ ಭಾಷಿಕರು ಹೇಗೆ ದಬ್ಬಾಳಿಕೆ ನಡೆಸುತ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿತ್ತು.

‘ವೀರ ಕನ್ನಡಿಗ’ ಸಿನಿಮಾದ ಕಥಾನಾಯಕ ಮುನ್ನಾ ಎಂಬ ಪಾತ್ರದಲ್ಲಿ ಒಂದು ಕಿಚ್ಚು ಇತ್ತು. ಕನ್ನಡಿಗರಲ್ಲಿ ಒಗ್ಗಟ್ಟಿನ ಭಾವನೆ ಮೂಡಿಸುವ ಗುಣ ಇತ್ತು. ಅದರಲ್ಲೂ ‘ಜೀವ ಕನ್ನಡ.. ದೇಹ ಕನ್ನಡ..’ ಹಾಡಿನ ಮೂಲಕ ಪುನೀತ್​ ಎಲ್ಲರ ಮನದಲ್ಲೂ ಒಂದು ಬಗೆಯ ಕಿಡಿ ಹೊತ್ತಿಸಿದ್ದರು. ಈಗಲೂ ಆ ಹಾಡನ್ನು ಕೇಳಿದರೆ ಪುಳಕ ಆಗುತ್ತದೆ. ಆ ಗೀತೆಗೆ ಹಂಸಲೇಖ ಸಾಹಿತ್ಯ ಬರೆದು, ಚಕ್ರಿ ಸಂಗೀತ ನಿರ್ದೇಶನ ಮಾಡಿದ್ದರು. ಮೆಹರ್​ ರಮೇಶ್​ ನಿರ್ದೇಶನದಲ್ಲಿ ‘ವೀರ ಕನ್ನಡಿಗ’ ಸಿನಿಮಾ ಮೂಡಿಬಂದಿತ್ತು. ಇತ್ತೀಚೆಗೆ ನಿಧನರಾದ ನಟ ಸತ್ಯಜಿತ್​ ಅವರು ಈ ಸಿನಿಮಾದಲ್ಲಿ ಒಂದು ಪಾತ್ರ ನಿಭಾಯಿಸಿದ್ದರು. ಬುಲೆಟ್​ ಪ್ರಕಾಶ್​ ಎಂದಿನಂತೆ ಕಾಮಿಡಿ ಪಾತ್ರ ಮಾಡಿದ್ದರು. ಈ ಯಾವ ನಟರು ಕೂಡ ಈಗ ನಮ್ಮೊಂದಿಗಿಲ್ಲ ಎಂಬುದು ನೋವಿನ ಸಂಗತಿ.

ಆ ಸಿನಿಮಾ ಬಂದು 17 ವರ್ಷ ಕಳೆದಿದೆ. ಆದರೂ ‘ಜೀವ ಕನ್ನಡ ದೇಹ ಕನ್ನಡ..’ ಹಾಡಿನ ಹವಾ ಮಾತ್ರ ಕಮ್ಮಿ ಆಗಿಲ್ಲ. ಈಗಲೂ ಕನ್ನಡ ರಾಜ್ಯೋತ್ಸದ ಸಂದರ್ಭದಲ್ಲಿ ಈ ಗೀತೆ ಮೊಳಗುತ್ತದೆ. ಕನ್ನಡಿಗರ ಪಾಲಿಗೆ ಡಾ. ರಾಜ್​ಕುಮಾರ್​ ಅವರು ಮಾದರಿ ವ್ಯಕ್ತಿ ಆಗಿದ್ದರು. ಅವರ ಗುಣಗಳನ್ನೇ ಪಾಲಿಸುವ ಪುನೀತ್​ ರಾಜ್​ಕುಮಾರ್​ ರೂಪದಲ್ಲಿ ಜನರು ಅಣ್ಣಾವ್ರನ್ನು ಕಾಣುತ್ತಿದ್ದರು. ಈ ರಾಜ್ಯೋತ್ಸವದ ಸಂದರ್ಭದಲ್ಲಿ ಈ ಇಬ್ಬರು ಮಹಾನ್​ ಪುರುಷರು ಅತಿಯಾಗಿ ನೆನಪಾಗುತ್ತಿದ್ದಾರೆ.

ಇದನ್ನೂ ಓದಿ:

Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!