Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಮಸೂದೆ ಹಿಂಪಡೆಯಿರಿ, ಮತಾಂತರ ವಿರೋಧಿ ಮಸೂದೆ ತೆಗೆಯಿರಿ: ಹೊಸ ಸರ್ಕಾರಕ್ಕೆ ಚೇತನ್ ಅಹಿಂಸಾ ಬೇಡಿಕೆ

Chetan Ahimsa: ಕರ್ನಾಟಕ ಹೊಸ ಸರ್ಕಾರ ರಚನೆಯಾಗುತ್ತಿದೆ. ಈ ಸಂದರ್ಭದಲ್ಲಿ ನಟ, ಹೋರಾಟಗಾರ ಚೇತನ್ ಅಹಿಂಸ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಗೋಹತ್ಯೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಹಿಂಪಡೆಯಿರಿ, ಮತಾಂತರ ವಿರೋಧಿ ಮಸೂದೆ ತೆಗೆಯಿರಿ: ಹೊಸ ಸರ್ಕಾರಕ್ಕೆ ಚೇತನ್ ಅಹಿಂಸಾ ಬೇಡಿಕೆ
ಚೇತನ್ ಅಹಿಂಸ
Follow us
ಮಂಜುನಾಥ ಸಿ.
|

Updated on: May 18, 2023 | 7:01 PM

ಕರ್ನಾಟಕದಲ್ಲಿ ಹೊಸ ಸರ್ಕಾರ (Karnataka Government) ಅಧಿಕಾರಕ್ಕೆ ಏರಲಿದೆ. ಸಿಎಂ ಯಾರಾಗಬೇಕೆಂಬ ಗೊಂದಲ ನಿವಾರಣೆಯಾಗಿದ್ದು, ರಾಜ್ಯಪಾಲರ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಾಗಿದೆ. ಅನೌಪಚಾರಿಕ ಶಾಸಕಾಂಗ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಹೊಸ ಸರ್ಕಾರದ ಬಳಿ ಹಲವರು ಬೇಡಿಕೆಗಳನ್ನು ಇಡುತ್ತಿದ್ದಾರೆ. ನಟ, ಹೋರಾಟಗಾರ ಚೇತನ್ ಅಹಿಂಸ (Chetan Ahimsa) ಸಹ ಹೊಸ ಸರ್ಕಾರದ ಮುಂದೆ ಒತ್ತಾಯವೊಂದನ್ನು ಇರಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿರುವ ಚೇತನ್ ಅಹಿಂಸಾ, ಈ ಹಿಂದಿನ ಸರ್ಕಾರ ತಂದಿದ್ದ, ಗೋಹತ್ಯೆ ವಿರೋಧಿ ಮಸೂದೆ ಮತ್ತು ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕಬೇಕು ಎಂದಿದ್ದಾರೆ. ಮಾತ್ರವಲ್ಲದೆ ಹಿಂದಿನ ಬಿಜೆಪಿ ಸರ್ಕಾರ ರದ್ದು ಮಾಡಿದ್ದ 4% ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು. ಪರಿಶಿಷ್ಟ ಪಂಗಡ ಒಳ ಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು ಎಂದು ಸಹ ಒತ್ತಾಯಿಸಿದ್ದಾರೆ.

2021 ರಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಚರ್ಚೆಯ ಬಳಿಕ ಗೋಹತ್ಯೆ ಕಾಯ್ದೆಯನ್ನು ತರಲಾಗಿತ್ತು. ಆಗಲೂ ಚೇತನ್ ಅಹಿಂಸ ಈ ಕಾಯ್ದೆಯನ್ನು ವಿರೋಧಿಸಿದ್ದರು. ಇನ್ನು ಮತಾಂತರ ನಿಷೇಧ ಕಾಯ್ದೆಯೂ ಸಹ ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ಮತಾಂತರ ನಿಷೇಧ ಕಾಯ್ದೆಯು ವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ಚೇತನ್ ಅಹಿಂಸ ಸೇರಿದಂತೆ ಹಲವರು ಆಕ್ಷೇಪವ್ಯಕ್ತಪಡಿಸಿದ್ದರು. ಆದರೆ ಮತಾಂತರಕ್ಕೆ ಒಪ್ಪಿಗೆ ಇದೆ ಆದರೆ ಬಲವಂತದ ಮತಾಂತರಕ್ಕೆ ನಿಷೇಧ ಹೇರುತ್ತಿದ್ದೇವೆ ಎಂದು ಆಡಳಿತ ಸರ್ಕಾರ ವಿವರಣೆ ನೀಡಿತ್ತು.

ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಜಾತಿ ಗಣತಿ ಮಾಡಲಾಗಿತ್ತು. ಆದರೆ ಅವರು ಅದನ್ನು ಬಹಿರಂಗಪಡಿಸಿರಲಿಲ್ಲ. ಆ ಬಳಿಕ ಬಂದ ಬಿಜೆಪಿ ಸರ್ಕಾರವೂ ಸಹ ಜಾತಿ ಗಣತಿ ಬಹಿರಂಗಪಡಿಸಲಿಲ್ಲ. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು ಎಂದು ಆಗಿನಿಂದಲೂ ಹಲವರು ಒತ್ತಾಯಿಸುತ್ತಲೇ ಇದ್ದಾರೆ. ಇದೀಗ ಚೇತನ್ ಅಹಿಂಸ ಈ ಬಗ್ಗೆಯೂ ನೂತನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು ಎಂಬ ಗೊಂದಲ ಏರ್ಪಟ್ಟಿದ್ದ ಬಗ್ಗೆ ನಿನ್ನೆ (ಮೇ 17) ಅಭಿಪ್ರಾಯ ಹಂಚಿಕೊಂಡಿದ್ದ ಚೇತನ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಜಟಾಪಟಿ ಎಂದರೆ ಸ್ಪರ್ಧಿಗಳು ಪ್ರಬಲರಾಗಿದ್ದಾರೆ ಎಂದರ್ಥವಲ್ಲ, ಬದಲಿಗೆ, ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ಇಂತಹ ಸುದೀರ್ಘ ಪವರ್‌ಪ್ಲೇಗಳು ಇಂದಿನ ಬಿಜೆಪಿಯಲ್ಲಿ ನಡೆಯುವುದಿಲ್ಲ. ಪರಿಪೂರ್ಣ ಮಾದರಿಯಲ್ಲಿ, ಕರ್ನಾಟಕದ ಜನರಿಗೆ ಸಂವೇದನಾಶೀಲ ಮತ್ತು ಬಲವಾದ ಕರ್ನಾಟಕದ ‘ಹೈಕಮಾಂಡ್’ ಅಗತ್ಯವಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ದೆಹಲಿಯ ಹೈಕಮಾಂಡ್ ಅಲ್ಲ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ