AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ದರ್ಶನ್ ಅಭಿಮಾನಿಯಾದ ತಪ್ಪಿಗೆ ಕುಟುಂಬದವರು ಎದುರಿಸುತ್ತಿರೋ ಕಷ್ಟ ಒಂದೆರಡಲ್ಲ

ನಂದೀಶ್ ಮಂಡ್ಯ ತಾಲೂಕಿನ ಚಾಮಲಪುರ‌ ಗ್ರಾಮದವರು. ಜೈಲಲ್ಲಿರುವ ಮಗನ ನೋಡಲು ಬೆಂಗಳೂರಿಗೆ ಬರಲಾಗದೆ ನಂದೀಶ್ ಹೆತ್ತವರು ಒದ್ದಾಡುತ್ತಿದ್ದಾರೆ. ಸ್ನೇಹಿತರೊಬ್ಬರು ವಾಹನ ವ್ಯವಸ್ಥೆ ಮಾಡಿ ಕೊಟ್ಟರು. ಆದರೆ, ಡಿಸೇಲ್​ಗೆ ಹಣ ಹೊಂದಿಸಲಾಗಿಲ್ಲ.

ಮಕ್ಕಳು ದರ್ಶನ್ ಅಭಿಮಾನಿಯಾದ ತಪ್ಪಿಗೆ ಕುಟುಂಬದವರು ಎದುರಿಸುತ್ತಿರೋ ಕಷ್ಟ ಒಂದೆರಡಲ್ಲ
ದರ್ಶನ್
ಪ್ರಶಾಂತ್​ ಬಿ.
| Edited By: |

Updated on: Jun 22, 2024 | 8:23 AM

Share

ನಟ ದರ್ಶನ್ (Darshan) ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ನಡೆದಿದೆ. ಈ ಘಟನೆ ನಡೆದು ಎರಡು ವಾರ ಕಳೆಯುತ್ತಾ ಬಂದಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಅರೆಸ್ಟ್ ಆಗುವುದರ ಜೊತೆಗೆ ಇನ್ನೂ ಅನೇಕರ ಬಂಧನ ಆಗಿದೆ. ದರ್ಶನ್ ನಂಬಿ ಜೈಲು ಸೇರಿದವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಇತ್ತೀಚೆಗಷ್ಟೆ ಆರೋಪಿ ಅನುಕುಮಾರ್ ತಂದೆ ನಿಧನ ಹೊಂದಿದರು. ಈಗ ಪ್ರಕರಣ ಐದನೇ ಆರೋಪಿ ನಂದೀಶ್ ಫ್ಯಾಮಿಲಿ ಕಣ್ಣೀರಿನ ಕಥೆ ಹೊರಬಿದ್ದಿದೆ.

ನಂದೀಶ್ ಮಂಡ್ಯ ತಾಲೂಕಿನ ಚಾಮಲಪುರ‌ ಗ್ರಾಮದವರು. ಜೈಲಲ್ಲಿರುವ ಮಗನ ನೋಡಲು ಬೆಂಗಳೂರಿಗೆ ಬರಲಾಗದೆ ನಂದೀಶ್ ಹೆತ್ತವರು ಒದ್ದಾಡುತ್ತಿದ್ದಾರೆ. ಸ್ನೇಹಿತರೊಬ್ಬರು ವಾಹನ ವ್ಯವಸ್ಥೆ ಮಾಡಿ ಕೊಟ್ಟರು. ಆದರೆ, ಡಿಸೇಲ್​ಗೆ ಹಣ ಹೊಂದಿಸಲಾಗಿಲ್ಲ. ನಂದೀಶ್ ತಾಯಿ ಭಾಗ್ಯಮ್ಮ ಅಸ್ತಮ ಖಾಯಿಲೆಯಿಂದ ತೀವ್ರ ಬಳಲುತ್ತಿದ್ದಾರೆ. ಮಾಧ್ಯಮದವರನ್ನ ಹೊರತುಪಡಿಸಿ ಮನೆ ಬಳಿಗೆ ಸೌಜನ್ಯಕ್ಕೂ ದರ್ಶನ್ ಅಭಿಮಾನಿಗಳು, ಆಪ್ತರು ಭೇಟಿ ನೀಡಿಲ್ಲ.

ನಂದೀಶ್ ಬಿಡುಗಡೆಗೆ ಪ್ರಯತ್ನಿಸೋಣ ಎಂದರೆ ಅದು ಕನಸಿನ ಮಾತು ಎಂಬಂತಾಗಿದೆ. ಬೆಂಗಳೂರಿಗೆ ಬರೋಕೆ ಹಣವಿಲ್ಲ. ಹೀಗಿರುವಾಗ ವಕೀಲರನ್ನ ನೇಮಿಸಿಕೊಳ್ಳೋದು ಹೇಗೆ? ಅವರಿಗೆ ಹಣ ನೀಡೋದು ಹೇಗೆ? ‘ದರ್ಶನ್ ಅಭಿಮಾನಿ ಎನಿಸಿಕೊಂಡ ಯಾರೊಬ್ಬರು ನಮ್ಮ ಕಷ್ಟ ಕೇಳಲಿಲ್ಲ’ ಎಂದು ಮಾಧ್ಯಮಗಳ ಮುಂದೆ ನಂದೀಶ್ ಅಕ್ಕ ನಂದಿನಿ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?

ದರ್ಶನ್ ಜೊತೆ ಬಂಧನಕ್ಕೆ ಒಳಗಾದ ಎಲ್ಲಾ ಅಭಿಮಾನಿಗಳದ್ದು ಒಂದೊಂದು ರೀತಿಯ ಕಥೆ ಇದೆ. ಬಹುತೇಕರ ಕುಟುಂಬ ಕಷ್ಟದಲ್ಲಿಯೇ ಇದೆ. ದರ್ಶನ್ ಸೇರಿ ಕೆಲವೇ ಕೆಲವು ಮಂದಿ ವಕೀಲರ ನೇಮಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್