AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬಟ್ಟೆ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ; ಪೊಲೀಸರಿಗೆ ಸಿಕ್ತು ದೊಡ್ಡ ಸಾಕ್ಷಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಮರ್ಡರ್​ ಪ್ರಕರಣದಲ್ಲಿ ಈ ಮೊದಲು ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷಿಯಾಗಿ ಸಿಕ್ಕಿದ್ದವು. ಬಳಿಕ ಮೊಬೈಲ್​ ಕರೆಗಳು ಮತ್ತು ಮೆಸೇಜ್​ಗಳು ಇನ್ನಷ್ಟು ಸಾಕ್ಷಿ ಒದಗಿಸಿದವು. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಒಂದು ಬಲವಾದ ಎವಿಡೆನ್ಸ್​​ ಈಗ ಪೊಲೀಸರ ಕೈ ಸೇರಿದೆ. ಅಂದು ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ಪತ್ತೆಯಾದ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಖಚಿತವಾಗಿದೆ.

ದರ್ಶನ್ ಬಟ್ಟೆ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ; ಪೊಲೀಸರಿಗೆ ಸಿಕ್ತು ದೊಡ್ಡ ಸಾಕ್ಷಿ
ರೇಣುಕಾ ಸ್ವಾಮಿ, ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 07, 2024 | 3:11 PM

Share

ಭಾರಿ ಸಂಚಲನ ಸೃಷ್ಟಿ ಮಾಡಿದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ವಿರುದ್ಧ ಅನೇಕ ಸಾಕ್ಷಿಗಳು ಸಿಕ್ಕಿವೆ. ಪೊಲೀಸರು ತನಿಖೆ ತೀವ್ರಗೊಳಿಸಿದಂತೆಲ್ಲ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ದರ್ಶನ್​ ವಿರುದ್ಧ ಇನ್ನೊಂದು ಮಹತ್ವದ ಸಾಕ್ಷಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ವರದಿಯಲ್ಲಿ ಒಂದು ಭಯಾನಕ ಸತ್ಯ ಬಹಿರಂಗ ಆಗಿದೆ. ಪ್ರಕರಣ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಧೃಡಪಟ್ಟಿದೆ. ಇದರಿಂದ ದರ್ಶನ್​ಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ.

ರೇಣುಕಾ ಸ್ವಾಮಿ ಮೃತದೇಹ ಪತ್ತೆ ಆದ ಬಂತರ ಬೆಂಗಳೂರು ಪೊಲೀಸರು ಬಹಳ ಚುರುಕಾಗಿ ತನಿಖೆ ಆರಂಭಿಸಿದ್ದರು. ಆರೋಪಿಗಳ ಮನೆಯಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಎ2 ಆಗಿರುವ ದರ್ಶನ್​ ಮನೆಯಲ್ಲಿ ವಶಪಡಿಸಿಕೊಂಡ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ ಮತ್ತು ಕಪ್ಪು ಬಣ್ಣದ ರೌಂಡ್​ ನೆಕ್​ ಶರ್ಟ್​ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

ಎಫ್​ಎಸ್​ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ವರದಿಯಲ್ಲಿ ಖಚಿತವಾಗಿದೆ. ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಇದು ಅತ್ಯಂತ ಮಹತ್ವಪೂರ್ಣ ಸಾಕ್ಷ್ಯ ಆಗುತ್ತಿದೆ. ಎಫ್​ಎಸ್​ಎಲ್ ತಂಡದವರು ಜಪ್ತಿ ಮಾಡಿದ್ದ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಇದೆ.

ಇದನ್ನೂ ಓದಿ: ದರ್ಶನ್​ ಮನೆ ಸಿಸಿಟಿವಿಯಲ್ಲಿ ಶಾಕಿಂಗ್​ ವಿಚಾರ ಬಯಲು; ಕೊಲೆ ಕೇಸ್​ನಲ್ಲಿ ನಟನಿಗೆ ಹೆಚ್ಚಿತು ಸಂಕಷ್ಟ

ದರ್ಶನ್​ ಸ್ನೇಹಿತೆಯಾದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂಬ ಆರೋಪ ಇದೆ. ಆ ಕಾರಣದಿಂದಲೇ ಡಿ ಗ್ಯಾಂಗ್​ನವರು ಆತನನ್ನು ಬೆಂಗಳೂರಿನಲ್ಲಿ ಥಳಿಸಿ, ಹತ್ಯೆ ಮಾಡಿದರು ಎಂಬ ಆರೋಪವಿದ್ದು, ತನಿಖೆಯಲ್ಲಿ ಅನೇಕ ವಿಚಾರಗಳು ಬಯಲಾಗುತ್ತಿವೆ. ದರ್ಶನ್​ ಈ ಕೃತ್ಯ ಮಾಡಿರಲು ಸಾಧ್ಯವಿಲ್ಲ ಎಂಬುದು ಕೆಲವರ ಅಭಿಪ್ರಾಯ. ಆದರೆ ತನಿಖೆಯ ಪ್ರತಿ ಹಂತದಲ್ಲೂ ದರ್ಶನ್​ ವಿರುದ್ಧ ಸಾಕ್ಷಿಗಳು ಸಿಗುತ್ತಿವೆ. ಇದರಿಂದ ನಟನಿಗೆ ಶಿಕ್ಷೆ ಆಗುವ ಸಾಧ್ಯತೆ ದಟ್ಟವಾಗಿದೆ. ದರ್ಶನ್​ ಮಾತ್ರವಲ್ಲದೇ ಪವಿತ್ರಾ ಗೌಡ ಸೇರಿ ಒಟ್ಟು 17 ಮಂದಿ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ