AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬಟ್ಟೆ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ; ಪೊಲೀಸರಿಗೆ ಸಿಕ್ತು ದೊಡ್ಡ ಸಾಕ್ಷಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಮರ್ಡರ್​ ಪ್ರಕರಣದಲ್ಲಿ ಈ ಮೊದಲು ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷಿಯಾಗಿ ಸಿಕ್ಕಿದ್ದವು. ಬಳಿಕ ಮೊಬೈಲ್​ ಕರೆಗಳು ಮತ್ತು ಮೆಸೇಜ್​ಗಳು ಇನ್ನಷ್ಟು ಸಾಕ್ಷಿ ಒದಗಿಸಿದವು. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಒಂದು ಬಲವಾದ ಎವಿಡೆನ್ಸ್​​ ಈಗ ಪೊಲೀಸರ ಕೈ ಸೇರಿದೆ. ಅಂದು ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ಪತ್ತೆಯಾದ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಖಚಿತವಾಗಿದೆ.

ದರ್ಶನ್ ಬಟ್ಟೆ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ; ಪೊಲೀಸರಿಗೆ ಸಿಕ್ತು ದೊಡ್ಡ ಸಾಕ್ಷಿ
ರೇಣುಕಾ ಸ್ವಾಮಿ, ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 07, 2024 | 3:11 PM

Share

ಭಾರಿ ಸಂಚಲನ ಸೃಷ್ಟಿ ಮಾಡಿದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ವಿರುದ್ಧ ಅನೇಕ ಸಾಕ್ಷಿಗಳು ಸಿಕ್ಕಿವೆ. ಪೊಲೀಸರು ತನಿಖೆ ತೀವ್ರಗೊಳಿಸಿದಂತೆಲ್ಲ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ದರ್ಶನ್​ ವಿರುದ್ಧ ಇನ್ನೊಂದು ಮಹತ್ವದ ಸಾಕ್ಷಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ವರದಿಯಲ್ಲಿ ಒಂದು ಭಯಾನಕ ಸತ್ಯ ಬಹಿರಂಗ ಆಗಿದೆ. ಪ್ರಕರಣ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಧೃಡಪಟ್ಟಿದೆ. ಇದರಿಂದ ದರ್ಶನ್​ಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ.

ರೇಣುಕಾ ಸ್ವಾಮಿ ಮೃತದೇಹ ಪತ್ತೆ ಆದ ಬಂತರ ಬೆಂಗಳೂರು ಪೊಲೀಸರು ಬಹಳ ಚುರುಕಾಗಿ ತನಿಖೆ ಆರಂಭಿಸಿದ್ದರು. ಆರೋಪಿಗಳ ಮನೆಯಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಎ2 ಆಗಿರುವ ದರ್ಶನ್​ ಮನೆಯಲ್ಲಿ ವಶಪಡಿಸಿಕೊಂಡ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ ಮತ್ತು ಕಪ್ಪು ಬಣ್ಣದ ರೌಂಡ್​ ನೆಕ್​ ಶರ್ಟ್​ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

ಎಫ್​ಎಸ್​ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ವರದಿಯಲ್ಲಿ ಖಚಿತವಾಗಿದೆ. ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಇದು ಅತ್ಯಂತ ಮಹತ್ವಪೂರ್ಣ ಸಾಕ್ಷ್ಯ ಆಗುತ್ತಿದೆ. ಎಫ್​ಎಸ್​ಎಲ್ ತಂಡದವರು ಜಪ್ತಿ ಮಾಡಿದ್ದ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಇದೆ.

ಇದನ್ನೂ ಓದಿ: ದರ್ಶನ್​ ಮನೆ ಸಿಸಿಟಿವಿಯಲ್ಲಿ ಶಾಕಿಂಗ್​ ವಿಚಾರ ಬಯಲು; ಕೊಲೆ ಕೇಸ್​ನಲ್ಲಿ ನಟನಿಗೆ ಹೆಚ್ಚಿತು ಸಂಕಷ್ಟ

ದರ್ಶನ್​ ಸ್ನೇಹಿತೆಯಾದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂಬ ಆರೋಪ ಇದೆ. ಆ ಕಾರಣದಿಂದಲೇ ಡಿ ಗ್ಯಾಂಗ್​ನವರು ಆತನನ್ನು ಬೆಂಗಳೂರಿನಲ್ಲಿ ಥಳಿಸಿ, ಹತ್ಯೆ ಮಾಡಿದರು ಎಂಬ ಆರೋಪವಿದ್ದು, ತನಿಖೆಯಲ್ಲಿ ಅನೇಕ ವಿಚಾರಗಳು ಬಯಲಾಗುತ್ತಿವೆ. ದರ್ಶನ್​ ಈ ಕೃತ್ಯ ಮಾಡಿರಲು ಸಾಧ್ಯವಿಲ್ಲ ಎಂಬುದು ಕೆಲವರ ಅಭಿಪ್ರಾಯ. ಆದರೆ ತನಿಖೆಯ ಪ್ರತಿ ಹಂತದಲ್ಲೂ ದರ್ಶನ್​ ವಿರುದ್ಧ ಸಾಕ್ಷಿಗಳು ಸಿಗುತ್ತಿವೆ. ಇದರಿಂದ ನಟನಿಗೆ ಶಿಕ್ಷೆ ಆಗುವ ಸಾಧ್ಯತೆ ದಟ್ಟವಾಗಿದೆ. ದರ್ಶನ್​ ಮಾತ್ರವಲ್ಲದೇ ಪವಿತ್ರಾ ಗೌಡ ಸೇರಿ ಒಟ್ಟು 17 ಮಂದಿ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ