AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತೂಗುದೀಪ ಪ್ರಕರಣ: ಆದಾಯ ತೆರಿಗೆ ಇಲಾಖೆ, ಇನ್​ಸ್ಟಾಗ್ರಾಂಗೆ ತನಿಖಾಧಿಕಾರಿಗಳ ಪತ್ರ

Renuka Swamy Case: ದರ್ಶನ್ ತೂಗುದೀಪ ಆರೋಪಿಯಾಗಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣ ಕುರಿತಾಗಿ ಇನ್​ಸ್ಟಾಗ್ರಾಂ ಹಾಗೂ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ಸಹಾಯ ಕೋರಿದ್ದಾರೆ.

ದರ್ಶನ್ ತೂಗುದೀಪ ಪ್ರಕರಣ: ಆದಾಯ ತೆರಿಗೆ ಇಲಾಖೆ, ಇನ್​ಸ್ಟಾಗ್ರಾಂಗೆ ತನಿಖಾಧಿಕಾರಿಗಳ ಪತ್ರ
ಮಂಜುನಾಥ ಸಿ.
| Updated By: Digi Tech Desk|

Updated on:Jun 27, 2024 | 10:57 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿರುವ ಪೊಲೀಸರು ಈಗಾಗಲೇ 160ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಇನ್ನಷ್ಟು ಸಾಕ್ಷ್ಯಗಳ ಸಂಗ್ರಹಕ್ಕೆ ಪ್ರಯತ್ನಿಸಲಾಗುತ್ತಿದೆ. ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್​ಗಳ ಪರಿಶೀಲನೆಯನ್ನು ಪೊಲೀಸರು ಮಾಡುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಕೆಲವು ಅಡೆ-ತಡೆಗಳು ಎದುರಾಗಿವೆ. ಮೃತ ರೇಣುಕಾ ಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್ ತೂಗುದೀಪ , ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದಾರೆ.

ರೇಣುಕಾ ಸ್ವಾಮಿ, ಪವಿತ್ರಾ ಗೌಡಗೆ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಎನ್ನಲಾಗಿದ್ದು, ರೇಣುಕಾ ಸ್ವಾಮಿಯ ಮೊಬೈಲ್ ನಾಶವಾಗಿರುವ ಕಾರಣ ರೇಣುಕಾ ಸ್ವಾಮಿ ಯಾವ ಸಂದೇಶವನ್ನು ಪವಿತ್ರಾ ಗೌಡಗೆ ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಕಾಮಾಕ್ಷಿಪಾಳ್ಯ ಪೊಲೀಸರು ಇನ್​ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ತನಿಖೆಗೆ ಸಹಾಯ ಕೇಳುತ್ತಿದ್ದಾರೆ. ಇನ್​ಸ್ಟಾಗ್ರಾಂ ಮೂಲಕವೇ ರೇಣುಕಾ ಸ್ವಾಮಿ ಸಂದೇಶ ಕಳಿಸಿದ್ದ ಎನ್ನಲಾಗುತ್ತಿದ್ದು, ಕಳಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್​ಸ್ಟಾಗ್ರಾಂ ಅನ್ನು ಕೋರಿದ್ದಾರೆ.

ಇದನ್ನೂ ಓದಿ: ಸಿನಿಮಾ ಆಗುತ್ತಾ ದರ್ಶನ್​ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಗೂ ಸಹ ಕಾಮಾಕ್ಷಿಪಾಳ್ಯ ಪೊಲೀಸರು ಪತ್ರ ಬರೆದಿದ್ದಾರೆ. ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂಪಾಯಿ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತಲ್ಲಿ ಆದಾಐ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಹಾಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊಲೆ ಮುಚ್ಚಿಹಾಕಲು ನೀಡಿದ್ದು ಎನ್ನಲಾಗಿರುವ 30 ಲಕ್ಷ ರೂಪಾಯಿ ಹಣವನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದಾದ ಬಳಿಕ ದರ್ಶನ್ ಅವರ ಮನೆ ಮಹಜರಿನ ವೇಳೆ ದರ್ಶನ್ ಅವರ ಮನೆಯಲ್ಲಿದ್ದ 37.40 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದಾದ ಬಳಿಕ, ದರ್ಶನ್​ರ ಪತ್ನಿ ವಿಜಯಲಕ್ಷ್ಮಿ ಅವರು ಮೂರು ಲಕ್ಷ ರೂಪಾಯಿ ಹಣವನ್ನು ಪೊಲೀಸರ ವಶಕ್ಕೆ ನೀಡಿದ್ದರು. ಪ್ರಕರಣ ನಡೆದ ಬಳಿಕ ಮೂರು ಲಕ್ಷ ರೂಪಾಯಿ ಹಣವನ್ನು ದರ್ಶನ್, ವಿಜಯಲಕ್ಷ್ಮಿ ಅವರಿಗೆ ನೀಡುವಂತೆ ತಮ್ಮ ಸಹಾಯಕರ ಮೂಲಕ ಕಳಿಸಿದ್ದರಂತೆ. ಆ ಹಣವನ್ನು ವಿಜಯಲಕ್ಷ್ಮಿ ಅವರು ವಿಚಾರಣೆ ವೇಳೆ ತನಿಖಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Wed, 26 June 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ