AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡ ಪರ ವಕೀಲರ ವಾದ ಹೇಗಿತ್ತು? ಸಿಗುತ್ತಾ ಜಾಮೀನು?

Renuka Swamy: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಸೆಬಾಸ್ಟಿಯನ್ ಇಂದು (ಡಿಸೆಂಬರ್ 03) ಹೈಕೋರ್ಟ್​ನಲ್ಲಿ ವಾದ ಮಂಡನೆ ಮಾಡಿದ್ದಾರೆ. ವಾದದ ಮುಖ್ಯಾಂಶಗಳು ಇಲ್ಲಿವೆ.

ಪವಿತ್ರಾ ಗೌಡ ಪರ ವಕೀಲರ ವಾದ ಹೇಗಿತ್ತು? ಸಿಗುತ್ತಾ ಜಾಮೀನು?
Pavithra-Renuka
ಮಂಜುನಾಥ ಸಿ.
|

Updated on:Dec 03, 2024 | 5:14 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 17 ಮಂದಿ ಆರೋಪಿಗಳಿದ್ದು ಅವರಲ್ಲಿ ನಾಲ್ಕು ಮಂದಿಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಕರಣದ ಎರಡನೇ ಆರೋಪಿ ದರ್ಶನ್​ಗೆ ಮಧ್ಯಂತರ ಜಾಮೀನು ದೊರೆತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜಾಮೀನಿನ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಉಳಿದ ಆರೋಪಿಗಳಿಗೆ ಇದರಿಂದ ಸಮಸ್ಯೆ ಆಗಿತ್ತು. ಪವಿತ್ರಾ ಸೇರಿದಂತೆ ಇತರ ಆರೋಪಿಗಳ ಪರ ವಾದ ಮಂಡನೆಗೆ ಸಹ ಸೂಕ್ತ ಕಾಲಾವಕಾಶ ಸಿಕ್ಕಿರಲಿಲ್ಲ. ಆದರೆ ಇಂದು (ಡಿಸೆಂಬರ್ 03) ಪವಿತ್ರಾ ಗೌಡ ಪರ ವಕೀಲರು, ಹೈಕೋರ್ಟ್​ನಲ್ಲಿ ವಾದ ಮಂಡನೆ ಮಾಡಿದರು.

ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲರಾದ ಸೆಬಾಸ್ಟಿಯನ್ ಹೈಕೋರ್ಟ್​ನಲ್ಲಿ ವಾದ ಮಂಡಿಸಿದರು. ಕೆಳಹಂತದ ನ್ಯಾಯಾಲಯದಲ್ಲಿಯೂ ಇವರೇ ಪವಿತ್ರಾ ಪರವಾಗಿ ವಾದಿಸಿದ್ದರು. ವಾದ ಆರಂಭಕ್ಕೂ ಮುಂಚೆಯೇ ನ್ಯಾಯಮೂರ್ತಿಗಳು ಎಷ್ಟು ಸಮಯ ವಾದ ಮಾಡಲಿದ್ದೀರಿ ಎಂದು ಕೇಳಿ ಸಮಯ ನಿಗದಿ ಮಾಡಿಬಿಟ್ಟರು, ಹಾಗಾಗಿ ಚುಟುಕಾಗಿ ಸೆಬಾಸ್ಟಿಯನ್ ಅವರು ವಾದ ಮಂಡನೆ ಮಾಡಿದರು.

ಇದನ್ನೂ ಓದಿ:ಜಾಮೀನು ಸಿಗದೇ ಪರದಾಡುತ್ತಿರುವ ಪವಿತ್ರಾ ಗೌಡ; ಡಿ.3ಕ್ಕೆ ಅರ್ಜಿ ವಿಚಾರಣೆ

ಮೊದಲಿಗೆ ಆರೋಪ ಪಟ್ಟಿಯಲ್ಲಿರುವ ಮಾಹಿತಿ ಓದಿದ ಸೆಬಾಸ್ಟಿಯನ್, ಸಾಕ್ಷಿಗಳು ನೀಡಿರುವ ಹೇಳಿಕೆಯಂತೆ ಕೇವ ಒಂದು ಬಾರಿ ಮಾತ್ರ ಪವಿತ್ರಾ ಹಲ್ಲೆ ಮಾಡಿದ್ದಾಳೆ ಆ ನಂತರ ಅವರನ್ನು ಮನೆಗೆ ಬಿಟ್ಟು ಬರಲಾಗಿದೆ. ಫೆಬ್ರವರಿಯಲ್ಲಿ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದಾನೆ, ಅದನ್ನು ನೋಡಿ ಪವಿತ್ರಾಗೆ ಆಘಾತವಾಗಿದೆ. ನೋವನ್ನು ಎ3 ಪವನ್​ ಬಳಿ ತೋಡಿಕೊಂಡಿದ್ದಾಳೆ. ಆತ ಕೆಲವರ ಸಹಾಯದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿದ್ದಾನೆ. ಎ2 ದರ್ಶನ್ ಜೊತೆ ಬಂದ ಪವಿತ್ರಾ, ರೇಣುಕಾ ಕಪಾಳಕ್ಕೆ ಹೊಡೆದಿದ್ದಾಳೆ, ಪವಿತ್ರಾ ಚಪ್ಪಲಿ ಪಡೆದುಕೊಂಡು ದರ್ಶನ್, ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದ ರೇಣುಕಾ ಸ್ವಾಮಿಯನ್ನು ಕರೆದುಕೊಂಡು ಬರಲಾಗಿಲ್ಲ. ಎಲ್ಲರೂ ಹೊಡೆದ ಏಟಿನಿಂದ ಆತ ಸತ್ತಿರಬಹುದು ಆದರೆ ಕೊಲೆ ಮಾಡುವುದು ಉದ್ದೇಶ ಆಗಿರಲಿಲ್ಲ’ ಎಂದು ಸೆಬಾಸ್ಟಿಯನ್ ವಾದಿಸಿದ್ದಾರೆ.

ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಇದೆ, ಆದರೆ ಸಾಕ್ಷಿಗಳ ಹೇಳಿಕೆಯಲ್ಲಿ ಪ್ರಚೋದನೆ ನೀಡಿರುವ ಯಾವ ಅಂಶವೂ ಸಹ ಇಲ್ಲ. ಅಲ್ಲದೆ ಪವಿತ್ರಾಗೌಡ ಮಹಿಳೆಯಾಗಿದ್ದು, ಆಕೆಗೆ ಯಾವುದೇ ಅಪರಾಧದ ಹಿನ್ನೆಲೆಯಿಲ್ಲ, ಕೇವಲ ಮಹಿಳೆ ಎಂಬ ಕಾರಣಕ್ಕೆ ಜಾಮೀನು ನೀಡಿದ ಉದಾಹರಣೆಗಳು ಇವೆ. ಪತಿಯನ್ನೇ ಕೊಂದ ಪತ್ನಿಗೂ ಸಹ ಮಹಿಳೆ ಎಂಬ ಕಾರಣಕ್ಕೆ ಜಾಮೀನು ಸಿಕ್ಕಿದೆ. ಪವಿತ್ರಾಗೌಡಗೆ 9ನೇ ತರಗತಿ ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು ಎಂದು ಸೆಬಾಸ್ಟಿಯನ್ ಮನವಿ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Tue, 3 December 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ