AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೇಸ್: ದರ್ಶನ್​ ಪೊಲೀಸ್ ಕಸ್ಟಡಿ ವಿಸ್ತರಣೆಗೆ ಕಾರಣವೇನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಹತ್ತು ದಿನ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ತೂಗುದೀಪ ಇನ್ನೂ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲೇ ಇರಬೇಕಾಗಿದೆ. ದರ್ಶನ್ ಅನ್ನು ಮತ್ತೆ ವಶಕ್ಕೆ ನೀಡಲು ಪೊಲೀಸರು ನ್ಯಾಯಾಲಯಕ್ಕೆ ನೀಡಿದ ಕಾರಣವೇನು?

ರೇಣುಕಾ ಸ್ವಾಮಿ ಕೇಸ್: ದರ್ಶನ್​ ಪೊಲೀಸ್ ಕಸ್ಟಡಿ ವಿಸ್ತರಣೆಗೆ ಕಾರಣವೇನು?
ದರ್ಶನ್
ಮಂಜುನಾಥ ಸಿ.
|

Updated on: Jun 20, 2024 | 6:46 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ್​ರ (Darshan) ಪೊಲೀಸ್ ಕಸ್ಟಡಿ ಅವಧಿಯನ್ನು ಇನ್ನೆರಡು ದಿನಗಳ ಕಾಲ ವಿಸ್ತರಿಸಲಾಗಿದೆ. ಕಳೆದ ಹತ್ತು ದಿನಗಳಿಂದಲೂ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈಗ ಮತ್ತೆ ನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು, ಆದರೆ ನ್ಯಾಯಾಲಯವು ಎರಡು ದಿನಗಳ ಕಾಲ ಕಸ್ಟಡಿ ವಿಸ್ತರಣೆ ಮಾಡಿದೆ. ದರ್ಶನ್ ಮಾತ್ರವೇ ಅಲ್ಲದೆ ಪ್ರಕರಣದ ಇತರೆ ಮೂವರು ಅಂದರೆ ಒಟ್ಟು ನಾಲ್ಕು ಮಂದಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಎರಡು ದಿನಗಳ ಕಾಲ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ A2 ದರ್ಶನ್‌, A9 ಧನರಾಜ್, A10 ವಿನಯ್ ಹಾಗೂ A14 ಪ್ರದೋಶ್‌ ಅವರುಗಳ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ನೀಡಿದೆ. ಜೂನ್ 22ರಂದು ಸಂಜೆ ಐದು ಗಂಟೆಯ ಒಳಗಾಗಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ಹೇಳಿದೆ.

ದರ್ಶನ್ ಹಾಗೂ ಇತರರನ್ನು ಮತ್ತೆ ಕಸ್ಟಡಿಗೆ ನೀಡಲು ಕೆಲವು ಕಾರಣಗಳನ್ನು ಪೊಲೀಸರು ನೀಡಿದ್ದರು. ಪ್ರಕರಣದಲ್ಲಿ ಪ್ರತ್ಯಕ್ಷ್ಯ ಸಾಕ್ಷಿ ಇದ್ದಾರೆ ಎಂಬುದು ಪ್ರಮುಖ ಕಾರಣವಾಗಿತ್ತು. ಪ್ರತ್ಯಕ್ಷ್ಯ ಸಾಕ್ಷಿ ನೀಡಿರುವ ಹೇಳಿಕೆಗಳ ಆಧಾರದಲ್ಲಿ ದರ್ಶನ್​ರ ವಿಚಾರಣೆ ಮಾಡಬೇಕೆಂಬುದು ಪೊಲೀಸರ ವಾದ. ಇದರ ಜೊತೆಗೆ ಕೆಲವು ಟೆಕ್ನಿಕಲ್ ಸಾಕ್ಷ್ಯಗಳು, ಉದಾಹರಣೆಗೆ ಮೊಬೈಲ್ ನೆಟ್​ವರ್ಕಿಂಗ್, ಎಫ್​ಎಸ್​ಎಲ್ ವರದಿಗಳು ಇವುಗಳ ವರದಿಗಳ ಆಧಾರದಲ್ಲಿ ವಿಚಾರಣೆ ಮಾಡಬೇಕೆನ್ನುವ ಕಾರಣವನ್ನು ಪೊಲೀಸರು ನೀಡಿದರು. ಇದರ ಜೊತೆಗೆ ಶವ ಎಸೆಯಲು ನೀಡಲಾಗಿದ್ದ 37 ಲಕ್ಷ ರೂಪಾಯಿ ಹಣದ ಮೂಲವನ್ನು ಸಹ ಪತ್ತೆ ಮಾಡಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ:Breaking: ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲು ಪಾಲು

ಇನ್ನು ಆರೋಪಿ ಧನರಾಜ್, ರೇಣುಕಾ ಸ್ವಾಮಿಯ ಮೊಬೈಲ್ ಹುಡುಕಾಟದಲ್ಲಿ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಕಾರಣವನ್ನು ನೀಡಿದ್ದಾರೆ. ಧನರಾಜ್, ರೇಣುಕಾ ಸ್ವಾಮಿಗೆ ಶಾಕ್ ನೀಡಿದ್ದವ. ಅಲ್ಲದೆ ಹಣ ಪಡೆದು ರೇಣುಕಾ ಸ್ವಾಮಿಯ ಶವ ಸಹ ಸಾಗಿಸಿದ್ದ ಎನ್ನಲಾಗಿದೆ. ರೇಣುಕಾ ಸ್ವಾಮಿಯ ಮೊಬೈಲ್ ಅನ್ನು ಈತನೇ ಮೋರಿಗೆ ಎಸೆದಿದ್ದ ಎನ್ನಲಾಗುತ್ತಿದೆ. ಆದರೆ ಈಗ ರೇಣುಕಾ ಸ್ವಾಮಿಯ ಮೊಬೈಲ್ ಹುಡುಕಾಟದಲ್ಲಿ ಈತ ಸಹಕಾರ ನೀಡುತ್ತಿಲ್ಲ ಎನ್ನಲಾಗುತ್ತಿದೆ.

ದೀಪಕ್ ಹಾಗೂ ವಿನಯ್ ಅವರುಗಳು ತನಿಖೆಗೆ ಸರಿಯಾಗಿ ಸಹಕಾರ ನೀಡಿಲ್ಲವೆಂದು, ಅಲ್ಲದೆ 37 ಲಕ್ಷ ರೂಪಾಯಿ ಹಣದ ಮೂಲ ಪತ್ತೆ ಹಚ್ಚಲು ಸಹ ಅವರ ವಿಚಾರಣೆಯ ಅಗತ್ಯವಿದೆ ಎಂದು ಕಾರಣ ನೀಡಿ ಪೊಲೀಸರು ಈ ಇಬ್ಬರನ್ನು ಸಹ ವಶಕ್ಕೆ ಕೇಳಿದ್ದರು. ಪೊಲೀಸರು ಒಟ್ಟು ನಾಲ್ಕು ಆರೋಪಿಗಳನ್ನು ವಶಕ್ಕೆ ಕೇಳಿದ್ದರು ಆದರೆ ದರ್ಶನ್ ಪರ ವಕೀಲರು ತಕರಾರು ಸಲ್ಲಿಸಿದ ಕಾರಣ ಕೇವಲ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?