AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್; ಕರುಳು ಚುರುಕ್ ಎನ್ನುತ್ತೆ

ನಟ ದರ್ಶನ್​ ವಿರುದ್ಧ ಸಾವಿರಾರು ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಎ2 ಆಗಿ ಮುಂದುವರಿದಿದ್ದಾರೆ. ಚಾರ್ಜ್​ಶೀಟ್​ ಸಲ್ಲಿಕೆ ಬೆನ್ನಲ್ಲೇ ರೇಣುಕಾ ಸ್ವಾಮಿ ಫೋಟೋ ವೈರಲ್ ಆಗಿದೆ. ಅವರು ಕೈಮುಗಿದು ಅಂಗಲಾಚುತ್ತಿದ್ದಾರೆ.

ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್; ಕರುಳು ಚುರುಕ್ ಎನ್ನುತ್ತೆ
ರೇಣುಕಾ ಸ್ವಾಮಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 05, 2024 | 2:03 PM

Share

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್​ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚರ್​ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.

ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.

ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳು ಸಿಕ್ಕಿವೆ. ಆರೋಪಿಗಳ ಮೊಬೈಲ್​ನಲ್ಲಿ ಇದನ್ನು ಸೆರೆಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಚಾರ್ಜ್​ಶೀಟ್​​ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್

ರೇಣುಕಾ ಸ್ವಾಮಿ ಕೊಲೆ ಕೇಸ್ ವಿಚಾರಣೆಯನ್ನು ವಿಶೇಷ ಕೋರ್ಟ್​ಗೆ ನೀಡುವಂತೆ ಮನವಿ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Thu, 5 September 24

Follow Us
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?