AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಜಾಮೀನು: ನೋವಿನಲ್ಲೂ ಘನತೆ ಮೆರೆದ ರೇಣುಕಾ ಸ್ವಾಮಿ ತಂದೆ

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ಗೆ ಮಧ್ಯಂತರ ಜಾಮೀನು ದೊರೆತಿದೆ. ಆರು ವಾರಗಳ ಜಾಮೀನು ಇದಾಗಿದ್ದು, ಚಿಕಿತ್ಸೆಯ ಕಾರಣಕ್ಕೆ ಜಾಮೀನು ನೀಡಲಾಗಿದೆ. ದರ್ಶನ್​ಗೆ ಜಾಮೀನು ಸಿಕ್ಕಿರುವ ಬಗ್ಗೆ ರೇಣುಕಾ ಸ್ವಾಮಿಯ ತಂದೆ ಕಾಶೀನಾಥಯ್ಯ ಮಾತನಾಡಿದ್ದಾರೆ.

ದರ್ಶನ್​ಗೆ ಜಾಮೀನು: ನೋವಿನಲ್ಲೂ ಘನತೆ ಮೆರೆದ ರೇಣುಕಾ ಸ್ವಾಮಿ ತಂದೆ
ಮಂಜುನಾಥ ಸಿ.
|

Updated on: Oct 30, 2024 | 12:24 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಮಧ್ಯಂತರ ಜಾಮೀನು ದೊರೆತಿದೆ. ಆರು ವಾರಗಳ ಮಧ್ಯಂತರ ಜಾಮೀನನ್ನು ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದೆ. ಹೈಕೋರ್ಟ್ ಆದೇಶದಿಂದ ಸಹಜವಾಗಿಯೇ ದರ್ಶನ್ ಪರ ಕುಟುಂಬದವರು ಖುಷಿಯಾಗಿದ್ದಾರೆ. ಆದರೆ ಇನ್ನೊಂದು ಕಡೆ ರೇಣುಕಾ ಸ್ವಾಮಿ ಕುಟುಂಬದವರಿಗೆ ಇದರಿಂದ ಬೇಸರ ಆದಂತಿದೆ. ದಾವಣಗೆರೆಯ ಹರಿಹರದಲ್ಲಿ ಟಿವಿ9 ಜೊತೆ ಮಾತನಾಡಿರುವ ರೇಣುಕಾ ಸ್ವಾಮಿ ತಂದೆ ಕಾಶೀನಾಥಯ್ಯ ನೋವಿನಲ್ಲೂ ಘನತೆ ಮೆರೆದಿದ್ದಾರೆ, ಜವಾಬ್ದಾರಿಯುತ ಮಾತುಗಳನ್ನಾಡಿದ್ದಾರೆ.

ದರ್ಶನ್​ಗೆ ಜಾಮೀನು ಸಿಕ್ಕಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರೇಣುಕಾ ಸ್ವಾಮಿ ತಂದೆ ಕಾಶೀನಾಥಯ್ಯ, ‘ಮಧ್ಯಂತರ ಜಾಮೀನು ಸಿಕ್ಕಿದೆ, ಅದಕ್ಕೆ ನಮ್ಮದೇನು ಅಭ್ಯಂತರವಿಲ್ಲ, ಅದು ನ್ಯಾಯಾಲಯ ಕೊಟ್ಟಿರುವ ಆದೇಶ, ದರ್ಶನ್​ಗೆ ಜಾಮೀನು ಸಿಕ್ಕಿರುವುದು ಅದೊಂದು ಕಾನೂನು ಕ್ರಮ, ಅದಕ್ಕೆ ಗೌರವ ಕೊಡುತ್ತೇವೆ’ ಎಂದಿದ್ದಾರೆ. ಆ ಮೂಲಕ ತಮಗೆ ನೋವಿದ್ದರೂ ಕಾನೂನು ಪ್ರಕ್ರಿಯೆಗೆ, ನ್ಯಾಯಾಲಯದ ಆದೇಶಕ್ಕೆ ಗೌರವ ಸಲ್ಲಿಸಿದ್ದಾರೆ.

ಇದನ್ನೂ ಓದಿ:ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

‘ನಮಗೆ, ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ, ನಾವು ಕಾನೂನು ಹೋರಾಟ ಮಾಡುತ್ತೇವೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುವವರೆಗೆ ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ’ ಎಂದಿದ್ದಾರೆ. ಸೊಸೆ, ಮೊಮ್ಮಗನ ಜೊತೆಗೆ ಹರಿಹರಕ್ಕೆ ಅವರು ತೆರಳಿದ್ದರು. ಈ ವೇಳೆ ಅವರು ಟಿವಿ9 ಜೊತೆ ಮಾತನಾಡಿ ದರ್ಶನ್​ಗೆ ಜಾಮೀನು ಸಿಕ್ಕ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗಷ್ಟೆ ರೇಣುಕಾ ಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾ ಸ್ವಾಮಿಯ ಕೊಲೆಯಾದಾಗ ಅವರ ಪತ್ನಿ ಗರ್ಭಿಣಿ ಆಗಿದ್ದರು.

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ಮೇಲಿದೆ. ಪ್ರಕರಣದಲ್ಲಿ ದರ್ಶನ್ ಆರೋಪಿ ನಂಬರ್ 2 ಆಗಿದ್ದಾರೆ. ಪವಿತ್ರಾ ಗೌಡ ಪ್ರಕರಣದ ಮೊದಲ ಆರೋಪಿಯಾಗಿದ್ದಾರೆ. ಪ್ರಸ್ತುತ, ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಜಾಮೀನು ಮಂಜೂರು ಮಾಡಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಈ ಜಾಮೀನು ನೀಡಲಾಗಿದ್ದು, ದರ್ಶನ್ ತಮ್ಮಿಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು