AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಸಹಚರ ಅನು ಬಂಧನದ ಬಳಿಕ ಹೃದಯಾಘಾತದಿಂದ ತಂದೆ ಚಂದ್ರಣ್ಣ ನಿಧನ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಅನು ಅಲಿಯಾಸ್​ ಅನುಕುಮಾರ್ ಆರೋಪಿ ಆಗಿದ್ದಾನೆ. ಆತನ ತಂದೆ ಚಂದ್ರಣ್ಣ ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು (ಜೂನ್​ 14) ಮಗನ ಬಂಧನದ ನಂತರ ಅವರು ತೀವ್ರವಾಗಿ ನೊಂದಿದ್ದರು. ಮಾನಸಿಕವಾಗಿ ನೊಂದಿದ್ದ ಅವರಿಗೆ ಹೃದಯಾಘಾತ ಆಗಿದೆ. ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ನಿವಾಸದಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ದರ್ಶನ್​ ಸಹಚರ ಅನು ಬಂಧನದ ಬಳಿಕ ಹೃದಯಾಘಾತದಿಂದ ತಂದೆ ಚಂದ್ರಣ್ಣ ನಿಧನ
ಅನು, ಚಂದ್ರಣ್ಣ, ದರ್ಶನ್​
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jun 14, 2024 | 8:03 PM

Share

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನು ಅಲಿಯಾಸ್​ ಅನುಕುಮಾರ್​ ಮನೆಯಲ್ಲಿ ಇನ್ನೊಂದು ದುರಂತ ನಡೆದಿದೆ. ಮಗನ ಬಂಧನದ ಬಳಿಕ ಚಿಂತೆಗೆ ಒಳಾಗಿದ್ದ ಅನುಕುಮಾರ್​ ತಂದೆ ಚಂದ್ರಣ್ಣ ಅವರು ಹೃದಯಾಘಾತದಿಂದ (Heart Attack) ಮೃತರಾಗಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್​ (Darshan), ಪವಿತ್ರಾ ಗೌಡ ಮುಂತಾದವರ ಜೊತೆ 7ನೇ ಆರೋಪಿಗಾಗಿ ಅನು ಅರೆಸ್ಟ್​ ಆಗಿದ್ದಾನೆ. ಇದರಿಂದಾಗಿ ಅವರ ಕುಟುಂಬಕ್ಕೆ ಆಘಾತ ಆಗಿದೆ. ಅದರ ಬೆನ್ನಲ್ಲೇ ಅನು ತಂದೆ ಚಂದ್ರಣ್ಣ ಸಾವು ಸಂಭವಿಸಿದೆ.

ಅನುಕುಮಾರ್ ತಂದೆ ಚಂದ್ರಣ್ಣ ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು (ಜೂನ್​ 14) ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಅನು ಬಂಧನ ಆಗಿತ್ತು. ಮಗನ ಬಂಧನದ ಬಳಿಕ ಚಂದ್ರಣ್ಣ ಆಘಾತಕ್ಕೆ ಒಳಗಾಗಿದ್ದರು. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂಬ ಆರೋಪ ಎದುರಾಗಿದ್ದರಿಂದ ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಾಗ ಕೇವಲ 13 ಜನರನ್ನು ಮಾತ್ರ ಅರೆಸ್ಟ್​ ಮಾಡಲಾಗಿತ್ತು. ದರ್ಶನ್​, ಪವಿತ್ರಾ ಗೌಡ, ಪವನ್​, ವಿನಯ್​, ದೀಪಕ್​ ಕುಮಾರ್​ ಮುಂತಾದವರು ಬಂಧನ ಆಗಿತ್ತು. ನಂತರದಲ್ಲಿ ಇನ್ನೂ ನಾಲ್ಕು ಮಂದಿಯ ಹೆಸರು ಹೊರಬಿತ್ತು. ಆಗ ಅನು ಅಲಿಯಾಸ್​ ಅನುಕುಮಾರ್​ ಕೂಡ ಈ ಕೃತ್ಯದಲ್ಲಿ ಭಾಗಿ ಆಗಿರುವುದು ಬೆಳಕಿಗೆ ಬಂತು.

ಇದನ್ನೂ ಓದಿ: ‘ಅಪ್ಪ-ಅಮ್ಮನಿಗೆ ಬೆಂಬಲ ಬೇಕಿರುವ ಈ ಸಮಯದಲ್ಲಿ..’: ದರ್ಶನ್​ ಪುತ್ರನ ಅಳಲು

ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕಾಗಿ ಶುರುವಾದ ಅಪಹರಣ ಕೃತ್ಯವು ಕೊಲೆಯಲ್ಲಿ ಅಂತ್ಯವಾಗಿದೆ. ಅಪಹರಣ ಮಾಡುವುದರಿಂದ ಹಿಡಿದು ಕೊಲೆ ಮಾಡಿ ಶವ ಎಸೆಯುವ ತನಕ ಈ ಕೃತ್ಯದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಎಲ್ಲರೂ ಈಗ ಪೊಲೀಸರ ಅತಿಥಿ ಆಗಿದ್ದಾರೆ. ಪ್ರಮುಖ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ತನಿಖೆ ಚುರುಕುಗೊಂಡಿದೆ. ಅಪರಾಧಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂಬ ಒತ್ತಾಯ ಜನರಿಂದ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:01 pm, Fri, 14 June 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ