AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಸಹಚರ ಅನು ಬಂಧನದ ಬಳಿಕ ಹೃದಯಾಘಾತದಿಂದ ತಂದೆ ಚಂದ್ರಣ್ಣ ನಿಧನ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಅನು ಅಲಿಯಾಸ್​ ಅನುಕುಮಾರ್ ಆರೋಪಿ ಆಗಿದ್ದಾನೆ. ಆತನ ತಂದೆ ಚಂದ್ರಣ್ಣ ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು (ಜೂನ್​ 14) ಮಗನ ಬಂಧನದ ನಂತರ ಅವರು ತೀವ್ರವಾಗಿ ನೊಂದಿದ್ದರು. ಮಾನಸಿಕವಾಗಿ ನೊಂದಿದ್ದ ಅವರಿಗೆ ಹೃದಯಾಘಾತ ಆಗಿದೆ. ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ನಿವಾಸದಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ದರ್ಶನ್​ ಸಹಚರ ಅನು ಬಂಧನದ ಬಳಿಕ ಹೃದಯಾಘಾತದಿಂದ ತಂದೆ ಚಂದ್ರಣ್ಣ ನಿಧನ
ಅನು, ಚಂದ್ರಣ್ಣ, ದರ್ಶನ್​
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಮದನ್​ ಕುಮಾರ್​|

Updated on:Jun 14, 2024 | 8:03 PM

Share

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನು ಅಲಿಯಾಸ್​ ಅನುಕುಮಾರ್​ ಮನೆಯಲ್ಲಿ ಇನ್ನೊಂದು ದುರಂತ ನಡೆದಿದೆ. ಮಗನ ಬಂಧನದ ಬಳಿಕ ಚಿಂತೆಗೆ ಒಳಾಗಿದ್ದ ಅನುಕುಮಾರ್​ ತಂದೆ ಚಂದ್ರಣ್ಣ ಅವರು ಹೃದಯಾಘಾತದಿಂದ (Heart Attack) ಮೃತರಾಗಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್​ (Darshan), ಪವಿತ್ರಾ ಗೌಡ ಮುಂತಾದವರ ಜೊತೆ 7ನೇ ಆರೋಪಿಗಾಗಿ ಅನು ಅರೆಸ್ಟ್​ ಆಗಿದ್ದಾನೆ. ಇದರಿಂದಾಗಿ ಅವರ ಕುಟುಂಬಕ್ಕೆ ಆಘಾತ ಆಗಿದೆ. ಅದರ ಬೆನ್ನಲ್ಲೇ ಅನು ತಂದೆ ಚಂದ್ರಣ್ಣ ಸಾವು ಸಂಭವಿಸಿದೆ.

ಅನುಕುಮಾರ್ ತಂದೆ ಚಂದ್ರಣ್ಣ ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು (ಜೂನ್​ 14) ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಅನು ಬಂಧನ ಆಗಿತ್ತು. ಮಗನ ಬಂಧನದ ಬಳಿಕ ಚಂದ್ರಣ್ಣ ಆಘಾತಕ್ಕೆ ಒಳಗಾಗಿದ್ದರು. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂಬ ಆರೋಪ ಎದುರಾಗಿದ್ದರಿಂದ ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಾಗ ಕೇವಲ 13 ಜನರನ್ನು ಮಾತ್ರ ಅರೆಸ್ಟ್​ ಮಾಡಲಾಗಿತ್ತು. ದರ್ಶನ್​, ಪವಿತ್ರಾ ಗೌಡ, ಪವನ್​, ವಿನಯ್​, ದೀಪಕ್​ ಕುಮಾರ್​ ಮುಂತಾದವರು ಬಂಧನ ಆಗಿತ್ತು. ನಂತರದಲ್ಲಿ ಇನ್ನೂ ನಾಲ್ಕು ಮಂದಿಯ ಹೆಸರು ಹೊರಬಿತ್ತು. ಆಗ ಅನು ಅಲಿಯಾಸ್​ ಅನುಕುಮಾರ್​ ಕೂಡ ಈ ಕೃತ್ಯದಲ್ಲಿ ಭಾಗಿ ಆಗಿರುವುದು ಬೆಳಕಿಗೆ ಬಂತು.

ಇದನ್ನೂ ಓದಿ: ‘ಅಪ್ಪ-ಅಮ್ಮನಿಗೆ ಬೆಂಬಲ ಬೇಕಿರುವ ಈ ಸಮಯದಲ್ಲಿ..’: ದರ್ಶನ್​ ಪುತ್ರನ ಅಳಲು

ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕಾಗಿ ಶುರುವಾದ ಅಪಹರಣ ಕೃತ್ಯವು ಕೊಲೆಯಲ್ಲಿ ಅಂತ್ಯವಾಗಿದೆ. ಅಪಹರಣ ಮಾಡುವುದರಿಂದ ಹಿಡಿದು ಕೊಲೆ ಮಾಡಿ ಶವ ಎಸೆಯುವ ತನಕ ಈ ಕೃತ್ಯದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಎಲ್ಲರೂ ಈಗ ಪೊಲೀಸರ ಅತಿಥಿ ಆಗಿದ್ದಾರೆ. ಪ್ರಮುಖ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ತನಿಖೆ ಚುರುಕುಗೊಂಡಿದೆ. ಅಪರಾಧಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂಬ ಒತ್ತಾಯ ಜನರಿಂದ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:01 pm, Fri, 14 June 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ