AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಜೂನ್ 8 ರಿಂದ ಇಂದಿನ ವರೆಗೆ ಏನೇನಾಯ್ತು?

ಚಿತ್ರದುರ್ಗದ ರೇಣುಕಾ ಸ್ವಾಮಿ ಬಂಧನದ ಆರೋಪದಲ್ಲಿ ನಟ ದರ್ಶನ್ ಹಾಗೂ ಇತರೆ 10 ಮಂದಿಯನ್ನು ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಜೂನ್ 8 ರಿಂದ ಜೂನ್ 11 ರವರೆಗೆ ಏನೇನಾಯ್ತು? ದಿನವಹಿ ಮಾಹಿತಿ ಇಲ್ಲಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಜೂನ್ 8 ರಿಂದ ಇಂದಿನ ವರೆಗೆ ಏನೇನಾಯ್ತು?
ಮಂಜುನಾಥ ಸಿ.
|

Updated on: Jun 11, 2024 | 2:01 PM

Share

ದರ್ಶನ್ (Darshan Thoogudeepa) ಅಭಿಮಾನಿ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಮಾತ್ರವೇ ಅಲ್ಲದೆ ಅವರ 10 ಮಂದಿ ಸಹಚರರನ್ನೂ ಸಹ ಪೊಲೀಸರು ಬಂಧಿಸಿದ್ದು, ವಿಚಾರಣೆ ಚಾಲ್ತಿಯಲ್ಲಿದೆ. ರೇಣುಕಾ ಸ್ವಾಮಿ ಕೊಲೆ ನಡೆದಿದ್ದು ಹೇಗೆ? ಯಾವ ದಿನ ಏನೇನಾಯ್ತು? ದಿನವಹಿ ಮಾಹಿತಿ ಇಲ್ಲಿದೆ.

ಜೂನ್ 8 : ಚಿತ್ರದುರ್ಗದಿಂದ ರೇಣಕಾಸ್ವಾಮಿಯನ್ನು ಚಿತ್ರದುರ್ಗ ದರ್ಶನ್​ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಹಾಗೂ ಆತನ ಸಹಚರರು ಅಪಹರಿಸಿ ಬೆಂಗಳೂರಿಗೆ ಕರೆತಂದರು.

ಜೂನ್ 8 : ದರ್ಶನ್ ಆಪ್ತ ವಿನಯ್ ಗೆ ಸೇರಿದ ರಾಜರಾಜೇಶ್ವರಿ ನಗರದ ಶೆಡ್​​ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ, ಕೊಲೆ.

ಜೂನ್ 8 : ರಾತ್ರಿ ವೇಳೆ ವಿನಯ್ ಹಾಗೂ ಇತರೆ ಇಬ್ಬರು ಸೇರಿ ರೇಣುಕಾಸ್ವಾಮಿ ಶವವನ್ನು ಸುಮನಹಳ್ಳಿ ರಾಜಕಾಲುವೆಗೆ ಎಸೆದಿದ್ದರು.

ಜೂನ್ 9 : ಬೆಳಗ್ಗೆ 8 ಗಂಟೆಗೆ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆ ಆಗಿದೆ. ಪಕ್ಕದಲ್ಲೇ ಇರುವ ಸತ್ವ ಅನುಗ್ರಹ ಅಪಾರ್ಟ್​ಮೆಂಟ್​ನ ಭದ್ರತಾ ಕಾವಲುಗಾರ ರಾಮ್ ದೋರ್ ಜೀ ದೂರು ನೀಡಿದ್ದಾರೆ.

ಜೂನ್ 9 : ಬೆಳಗ್ಗೆ 8.30ಕ್ಕೆ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೂನ್ 10 : ಮೂವರು ದರ್ಶನ್ ಸಹಚರರು ಕೊಲೆ ಮಾಡಿದ್ದಾಗಿ ಒಪ್ಪಿ ಠಾಣೆಗೆ ಶರಣಾಗಿದ್ದಾರೆ. ಆದರೆ ವಿಚಾರಣೆ ನಡೆದಾಗ ಕೊಲೆಯ ಅಸಲಿ ವಿಷಯ ಬೆಳಕಿಗೆ.

ಜೂನ್ 10 : ರಾತ್ರಿಯೇ ಮೈಸೂರಿಗೆ ತೆರಳಿದ ಬೆಂಗಳೂರು ಪೊಲೀಸರು. ದರ್ಶನ್ ಇರುವ ಸ್ಥಳದ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದ ಇತರೆ ಆರೋಪಿಗಳನ್ನೂ ಬಂಧಿಸಿದ್ದಾರೆ.

ಜೂನ್ 11 : ಬೆಳಗ್ಗೆ 6.30ಕ್ಕೆ ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ಜಿಮ್ ಮಾಡ್ತಿದ್ದ ದರ್ಶನ್.

ಜೂನ್ 11 : ಹೋಟೆಲ್ ಜಿಮ್ ಹೊರಗೆ ಕಾಯುತ್ತಿದ್ದ ಪೊಲೀಸರು, ದರ್ಶನ್ ಜಿಮ್ ಮಾಡಿ ಹೊರಬರುತ್ತಿದ್ದಂತೆ ವಶಕ್ಕೆ ಪಡೆದಿದ್ದಾರೆ.

ಜೂನ್ 11 : ಮಧ್ಯಾಹ್ನದ ವೇಲೆಗೆ ದರ್ಶನ್​​ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದ ಪೊಲೀಸರು.

ಜೂನ್ 11: ದರ್ಶನ್​ರ ಆಪ್ತೆ, ಪವಿತ್ರಾ ಗೌಡ ಅವರನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?