AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ರೇಣುಕಾ ಸ್ವಾಮಿಯ ಕೊಲೆ ಕೇಸ್​ನಲ್ಲಿ ದರ್ಶನ್​ ಎ2 ಆಗಿದ್ದು, ಚಿತ್ರರಂಗದಲ್ಲಿ ಈ ಬಗ್ಗೆ ಹಲವು ಬಗೆಯ ಚರ್ಚೆ ಶುರುವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಬ್ಯಾನ್​ ಆಗಬೇಕು ಎಂಬ ಒತ್ತಾಯ ಕೆಲವರಿಂದ ಕೇಳಿಬಂದಿದೆ. ಈ ಕುರಿತು ಕಿಚ್ಚ ಸುದೀಪ್​ ಅವರ ಅನಿಸಿಕೆ ಏನು? ಈ ವಿಡಿಯೋದಲ್ಲಿದೆ ಉತ್ತರ.

ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jun 16, 2024 | 10:25 PM

Share

ಸ್ಟಾರ್​ ನಟನಾಗಿ ಮಿಂಚುತ್ತಿದ್ದ ದರ್ಶನ್​ (Darshan) ಈಗ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿಯ ಸ್ಥಾನದಲ್ಲಿ ನಿಲ್ಲುವಂತಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು, ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್​ ಮತ್ತು ಗ್ಯಾಂಗ್​ ಮೇಲೆ ಇದೆ. ಇದು ಗಂಭೀರ ಪ್ರಕರಣ ಆದ್ದರಿಂದ ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಎಂದು ಕೆಲವರು ಹೇಳುತ್ತಿದ್ದಾರೆ. ದರ್ಶನ್​ ಅವರನ್ನು ಸಿನಿಮಾ ರಂಗದಿಂದ ಬ್ಯಾನ್​ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಈ ವಿಚಾರದ ಬಗ್ಗೆ ನಟ ಕಿಚ್ಚ ಸುದೀಪ್​ (Kichcha Sudeep) ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ನಾವು ಯಾರೂ ಕಾನೂನು ಅಲ್ಲ. ಯಾರನ್ನೂ ನಾವು ಬ್ಯಾನ್​ ಮಾಡೋಕೆ ಆಗಲ್ಲ. ಈ ಕೇಸ್​ನಿಂದ (ದರ್ಶನ್​) ಹೊರಗಡೆ ಬಂದರೆ ಬ್ಯಾನ್​ ಎಂಬ ಮಾತು ಬರುವುದೇ ಇಲ್ಲವಲ್ಲ. ಬ್ಯಾನ್​ ಎಂಬುದು ಇಲ್ಲಿ ಮುಖ್ಯವಲ್ಲ. ನ್ಯಾಯ ಸಿಗಬೇಕು ಎಂಬುದು ಮುಖ್ಯ. ವಾಣಿಜ್ಯ ಮಂಡಳಿಯಲ್ಲಿ ನಮ್ಮ ಸ್ನೇಹಿತರು ಹಾಗೂ ಹಿರಿಯರು ಕೂತಿದ್ದಾರೆ. ಎಲ್ಲರೂ ಹೋಗಿ ಅವರ ಮೇಲೆ ಒತ್ತಡ ಹಾಕಿದಾಗ ಏನು ಹೇಳೋಕೆ ಆಗತ್ತೆ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: ‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ

‘ಕೆಲವು ತಿಂಗಳ ಹಿಂದೆ ನನ್ನ ಮೇಲೂ ಬ್ಯಾನ್​ ಅಂತ ಹೇಳುತ್ತಿದ್ದರು. ಅದು ಪಾಯಿಂಟ್​ ಅಲ್ಲ. ಏನು ನ್ಯಾಯ ಇದೆಯೋ ಅದನ್ನು ಮಾಡಲಿ. ವಾಣಿಜ್ಯ ಮಂಡಳಿ ಇರುವುದು ಚಿತ್ರರಂಗದ ಪ್ರತಿಯೊಬ್ಬರಿಗೆ ನ್ಯಾಯ ನೀಡುವುದಕ್ಕೇ ಹೊರತು ಬ್ಯಾನ್​ ಎಂಬುದು ನಮ್ಮ ಪದ ಅಲ್ಲ. ವಾಣಿಜ್ಯ ಮಂಡಳಿಯಲ್ಲಿ ಇರುವ ಹಿರಿಯರು ಮತ್ತು ನನ್ನ ಗಮನ ಇರುವುದು ನ್ಯಾಯದ ಬಗ್ಗೆ’ ಎಂದು ಸುದೀಪ್​ ಹೇಳಿದ್ದಾರೆ.

‘ಪೊಲೀಸ್​ನವರು ಹೇಗೆ ಕೆಲಸ ಮಾಡುತ್ತಿದ್ದಾರೆ? ಮಾಧ್ಯಮದವರು ಹೇಗೆ ಕೆಲಸ ಮಾಡುತ್ತಿದ್ದಾರೆ? ನಾಳೆ ಕೋರ್ಟ್​ಗೆ ಹೋದಾಗ ಅಲ್ಲಿ ಏನು ನಡೆಯುತ್ತದೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ. ಅದೇ ಮುಖ್ಯ. ಬ್ಯಾನ್​ ಎಂಬುದೆಲ್ಲ ಸೆಕೆಂಡರಿ. ನೋವು ಅನುಭವಿಸಿದ ವ್ಯಕ್ತಿಗಳು ಮತ್ತು ಕುಟುಂಬದವರಿಗೆ ನ್ಯಾಯ ಸಿಗಬೇಕು. ಎಲ್ಲರ ಗಮನ ಅದರ ಮೇಲಿರಲಿ’ ಎಂಬುದು ಕಿಚ್ಚ ಸುದೀಪ್​ ಅವರ ಮಾತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ