ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ರೇಣುಕಾ ಸ್ವಾಮಿಯ ಕೊಲೆ ಕೇಸ್​ನಲ್ಲಿ ದರ್ಶನ್​ ಎ2 ಆಗಿದ್ದು, ಚಿತ್ರರಂಗದಲ್ಲಿ ಈ ಬಗ್ಗೆ ಹಲವು ಬಗೆಯ ಚರ್ಚೆ ಶುರುವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಬ್ಯಾನ್​ ಆಗಬೇಕು ಎಂಬ ಒತ್ತಾಯ ಕೆಲವರಿಂದ ಕೇಳಿಬಂದಿದೆ. ಈ ಕುರಿತು ಕಿಚ್ಚ ಸುದೀಪ್​ ಅವರ ಅನಿಸಿಕೆ ಏನು? ಈ ವಿಡಿಯೋದಲ್ಲಿದೆ ಉತ್ತರ.

ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..
ಕಿಚ್ಚ ಸುದೀಪ್​
Follow us
|

Updated on: Jun 16, 2024 | 10:25 PM

ಸ್ಟಾರ್​ ನಟನಾಗಿ ಮಿಂಚುತ್ತಿದ್ದ ದರ್ಶನ್​ (Darshan) ಈಗ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿಯ ಸ್ಥಾನದಲ್ಲಿ ನಿಲ್ಲುವಂತಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು, ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್​ ಮತ್ತು ಗ್ಯಾಂಗ್​ ಮೇಲೆ ಇದೆ. ಇದು ಗಂಭೀರ ಪ್ರಕರಣ ಆದ್ದರಿಂದ ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಎಂದು ಕೆಲವರು ಹೇಳುತ್ತಿದ್ದಾರೆ. ದರ್ಶನ್​ ಅವರನ್ನು ಸಿನಿಮಾ ರಂಗದಿಂದ ಬ್ಯಾನ್​ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಈ ವಿಚಾರದ ಬಗ್ಗೆ ನಟ ಕಿಚ್ಚ ಸುದೀಪ್​ (Kichcha Sudeep) ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ನಾವು ಯಾರೂ ಕಾನೂನು ಅಲ್ಲ. ಯಾರನ್ನೂ ನಾವು ಬ್ಯಾನ್​ ಮಾಡೋಕೆ ಆಗಲ್ಲ. ಈ ಕೇಸ್​ನಿಂದ (ದರ್ಶನ್​) ಹೊರಗಡೆ ಬಂದರೆ ಬ್ಯಾನ್​ ಎಂಬ ಮಾತು ಬರುವುದೇ ಇಲ್ಲವಲ್ಲ. ಬ್ಯಾನ್​ ಎಂಬುದು ಇಲ್ಲಿ ಮುಖ್ಯವಲ್ಲ. ನ್ಯಾಯ ಸಿಗಬೇಕು ಎಂಬುದು ಮುಖ್ಯ. ವಾಣಿಜ್ಯ ಮಂಡಳಿಯಲ್ಲಿ ನಮ್ಮ ಸ್ನೇಹಿತರು ಹಾಗೂ ಹಿರಿಯರು ಕೂತಿದ್ದಾರೆ. ಎಲ್ಲರೂ ಹೋಗಿ ಅವರ ಮೇಲೆ ಒತ್ತಡ ಹಾಕಿದಾಗ ಏನು ಹೇಳೋಕೆ ಆಗತ್ತೆ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: ‘ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ’: ದರ್ಶನ್​ ಕೇಸ್​ಗೆ ಸುದೀಪ್​ ಪ್ರತಿಕ್ರಿಯೆ

‘ಕೆಲವು ತಿಂಗಳ ಹಿಂದೆ ನನ್ನ ಮೇಲೂ ಬ್ಯಾನ್​ ಅಂತ ಹೇಳುತ್ತಿದ್ದರು. ಅದು ಪಾಯಿಂಟ್​ ಅಲ್ಲ. ಏನು ನ್ಯಾಯ ಇದೆಯೋ ಅದನ್ನು ಮಾಡಲಿ. ವಾಣಿಜ್ಯ ಮಂಡಳಿ ಇರುವುದು ಚಿತ್ರರಂಗದ ಪ್ರತಿಯೊಬ್ಬರಿಗೆ ನ್ಯಾಯ ನೀಡುವುದಕ್ಕೇ ಹೊರತು ಬ್ಯಾನ್​ ಎಂಬುದು ನಮ್ಮ ಪದ ಅಲ್ಲ. ವಾಣಿಜ್ಯ ಮಂಡಳಿಯಲ್ಲಿ ಇರುವ ಹಿರಿಯರು ಮತ್ತು ನನ್ನ ಗಮನ ಇರುವುದು ನ್ಯಾಯದ ಬಗ್ಗೆ’ ಎಂದು ಸುದೀಪ್​ ಹೇಳಿದ್ದಾರೆ.

‘ಪೊಲೀಸ್​ನವರು ಹೇಗೆ ಕೆಲಸ ಮಾಡುತ್ತಿದ್ದಾರೆ? ಮಾಧ್ಯಮದವರು ಹೇಗೆ ಕೆಲಸ ಮಾಡುತ್ತಿದ್ದಾರೆ? ನಾಳೆ ಕೋರ್ಟ್​ಗೆ ಹೋದಾಗ ಅಲ್ಲಿ ಏನು ನಡೆಯುತ್ತದೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ. ಅದೇ ಮುಖ್ಯ. ಬ್ಯಾನ್​ ಎಂಬುದೆಲ್ಲ ಸೆಕೆಂಡರಿ. ನೋವು ಅನುಭವಿಸಿದ ವ್ಯಕ್ತಿಗಳು ಮತ್ತು ಕುಟುಂಬದವರಿಗೆ ನ್ಯಾಯ ಸಿಗಬೇಕು. ಎಲ್ಲರ ಗಮನ ಅದರ ಮೇಲಿರಲಿ’ ಎಂಬುದು ಕಿಚ್ಚ ಸುದೀಪ್​ ಅವರ ಮಾತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!