ದರ್ಶನ್​, ಪವಿತ್ರಾ ಗೌಡಗೆ ಡಿಎನ್​ಎ ಟೆಸ್ಟ್​ ಮಾಡಿಸಿದ ಪೊಲೀಸರು; ಕಾರಣ ಏನು?

ಡಿಎನ್​ಎ ಪರೀಕ್ಷೆ ಸಲುವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೂದಲು ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಬಳಿಕ ಆರೋಪಿಗಳನ್ನು ಪೊಲೀಸ್​ ಠಾಣೆಗೆ ಶಿಫ್ಟ್​ ಮಾಡಲಾಗುತ್ತಿದೆ. ಪವಿತ್ರಾ ಗೌಡ, ದರ್ಶನ್​ ಸೇರಿ ಒಟ್ಟು 9 ಮಂದಿಯ ಡಿಎನ್​ಎ ಟೆಸ್ಟ್​ ಮಾಡಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

ದರ್ಶನ್​, ಪವಿತ್ರಾ ಗೌಡಗೆ ಡಿಎನ್​ಎ ಟೆಸ್ಟ್​ ಮಾಡಿಸಿದ ಪೊಲೀಸರು; ಕಾರಣ ಏನು?
ಪವಿತ್ರಾ ಗೌಡ, ದರ್ಶನ್​
Follow us
| Updated By: ಮದನ್​ ಕುಮಾರ್​

Updated on: Jun 19, 2024 | 5:29 PM

ನಟ ದರ್ಶನ್​, ನಟಿ ಪವಿತ್ರಾ ಗೌಡ (Pavithra Gowda) ಸೇರಿದಂತೆ ಅನೇಕರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಎಲ್ಲರನ್ನೂ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈಗಾಗಲೇ ಹಲವು ಸುತ್ತಿನ ವಿಚಾರಣೆ ನಡೆಸಲಾಗಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಈ ಮೂಲಕ ನೂರಾರು ಬಗೆಯ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಇಂದು (ಜೂನ್​ 19) ದರ್ಶನ್​ (Darshan), ಪವಿತ್ರಾ ಗೌಡ ಮುಂತಾದ ಆರೋಪಿಗಳ ಡಿಎನ್​ಎ ಟೆಸ್ಟ್​ (DNA Test) ಮಾಡಿಸಲಾಗಿದೆ. ಅದಕ್ಕೆ ಪ್ರಮುಖ ಕಾರಣ ಕೂಡ ಇದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್​, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ ಮಾಡಲಾಗಿದೆ. ಒಟ್ಟು 9 ಆರೋಪಿಗಳ ಸ್ಯಾಂಪಲ್ಸ್​ ಪಡೆದುಕೊಳ್ಳಲಾಗಿದೆ. ಆರೋಪಿಗಳ ರಕ್ತ ಮತ್ತು ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ರೇಣುಕಾ ಸ್ವಾಮಿ ಹತ್ಯೆ ನಡೆದ ಸ್ಥಳದಲ್ಲಿ ಪತ್ತೆಯಾದ ಕೂದಲು ಹಾಗೂ ರಕ್ತದ ಮಾದರಿಯ ಜೊತೆ ಮ್ಯಾಚ್ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ.

ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಅದನ್ನುಎಫ್‌ಎಸ್ಎಲ್‌ಗೆ (ವಿಧಿ ವಿಜ್ಞಾನ ಪ್ರಯೋಗಾಲಯ) ಕಳುಹಿಸಲಾಗುತ್ತದೆ. ಒಂದು ವೇಳೆ, ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಆರೋಪಿಗಳ ಸ್ಯಾಂಪಲ್​ ಜೊತೆ ಮ್ಯಾಚ್​ ಆದರೆ ಅದು ಪ್ರಮುಖ ಸಾಕ್ಷ್ಯ ಆಗಲಿದೆ. ಆ ಕಾರಣದಿಂದ 9 ಆರೋಪಿಗಳ ಡಿಎನ್​ಎ ಪರೀಕ್ಷೆ ಇಂದು ಮಾಡಿಸಲಾಗಿದೆ.

ಇದನ್ನೂ ಓದಿ: ‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡ ಈ ಕೇಸ್​ನಲ್ಲಿ ಎ1. ಪವಿತ್ರಾಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಅಪಹರಿಸಿ, ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ಪವನ್​, ವಿನಯ್​ ಮುಂತಾದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಚಾರಣೆ ತೀವ್ರಗೊಂಡಂತೆಲ್ಲ ಅನೇಕ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!