AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೇಸ್​ನಲ್ಲಿ 13 ಜನ ಮಾತ್ರವಲ್ಲ, ಬರೋಬ್ಬರಿ 17 ಆರೋಪಿಗಳು; 4 ಮಂದಿ ನಾಪತ್ತೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಹಾಗೂ ಇತರ 13 ಆರೋಪಿಗಳ ಜೊತೆ ಹೊಸದಾಗಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿಬಂದಿವೆ. ಇವರೆಲ್ಲ ಸದ್ಯಕ್ಕೆ ನಾಪತ್ತೆ ಆಗಿದ್ದಾರೆ. ತಲೆ ತಪ್ಪಿಸಿಕೊಂಡಿರುವ ಈ 4 ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಶುರು ಮಾಡಿದ್ದಾರೆ. ಈ ಆರೋಪಿಗಳು ಸಿಕ್ಕ ನಂತರ ಇನ್ನಷ್ಟು ಹೊಸ ಮಾಹಿತಿಗಳು ಹೊರಬರಲಿದೆ.

ದರ್ಶನ್ ಕೇಸ್​ನಲ್ಲಿ 13 ಜನ ಮಾತ್ರವಲ್ಲ, ಬರೋಬ್ಬರಿ 17 ಆರೋಪಿಗಳು; 4 ಮಂದಿ ನಾಪತ್ತೆ
ದರ್ಶನ್​, ಪವಿತ್ರಾ ಗೌಡ, ಕೊಲೆಯಾದ ರೇಣುಕಾ ಸ್ವಾಮಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jun 12, 2024 | 5:36 PM

Share

ನಟ ದರ್ಶನ್​ (Darshan) ಮಾಡಿಕೊಂಡ ವಿವಾದ ದೊಡ್ಡದಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆತಂದು ಸಾಯಿಸಿದ ಆರೋಪ ದರ್ಶನ್​ ಮೇಲಿದೆ. ಅಲ್ಲದೇ ಈ ಕೃತ್ಯದಲ್ಲಿ ಅನೇಕರು ಅರೆಸ್ಟ್​ ಮಾಡಲಾಗಿದ್ದು, ವಿಚಾರಣೆ ಕೂಡ ತೀವ್ರವಾಗಿದೆ. ಮಂಗಳವಾರ (ಜೂನ್​ 11) ಒಟ್ಟು 13 ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಈ ಕೇಸ್​ನಲ್ಲಿ (Darshan Case) ಭಾಗಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು (ಜೂನ್​ 12) ಲಭ್ಯವಾದ ಮಾಹಿತಿ ಪ್ರಕಾರ ಒಟ್ಟು 17 ಜನರು ಈ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ. ಆ ಪೈಕಿ ನಾಲ್ಕು ಜನರು ನಾಪತ್ತೆ ಆಗಿದ್ದಾರೆ!

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕಾಗಿ ರೇಣುಕಾ ಸ್ವಾಮಿಯನ್ನು ಅಪಹರಿಸಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ಆತನ ಮೇಲೆ ಹಲ್ಲೆ ಮಾಡಲಾಯಿತು. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿಯ ಶವವನ್ನು ರಾಜಕಾಲುವೆಗೆ ಎಸೆಯಲಾಯಿತು. ಒಟ್ಟಾರೆ ಈ ಪ್ರಕರಣದಲ್ಲಿ ಹಲವರು ಕೈ ಜೋಡಿಸಿದ್ದು ಬೆಳಕಿಗೆ ಬಂದಿದೆ. ತನಿಖೆ ಚುರುಕಾದಂತೆಲ್ಲ ಬೇರೆ ಬೇರೆ ಹೆಸರುಗಳು ಹೊರಬರುತ್ತಿವೆ.

ಈ ಕೇಸ್​ನಲ್ಲಿ ಹೊಸದಾಗಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿಬಂದಿವೆ. ಸದ್ಯಕ್ಕೆ ಇವರೆಲ್ಲ ನಾಪತ್ತೆ ಆಗಿದ್ದಾರೆ. ತಲೆ ತಪ್ಪಿಸಿಕೊಂಡಿರುವ ಈ ನಾಲ್ಕು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಈ ನಾಲ್ವರು ಸಿಕ್ಕ ಬಳಿಕ ಇನ್ನಷ್ಟು ಹೊಸ ಮಾಹಿತಿಗಳು ಹೊರಬರುವುದು ಖಚಿತ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ರೇಣುಕಾ ಸ್ವಾಮಿ ಕುಟುಂಬದವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಠಾಣೆಯಲ್ಲಿರುವ ಕೊಲೆ ಆರೋಪಿ ದರ್ಶನ್​ಗೆ ದೊನ್ನೆ ಬಿರಿಯಾನಿ ತರಿಸಿದ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾಳೆ. ದರ್ಶನ್​ ಎ2 ಹಾಗೂ ಕೆ.ಪವನ್ ಎ3 ಆಗಿದ್ದಾನೆ. ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಅಲಿಯಾಸ್ ಜಗ್ಗ ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜ್ ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್​ ಎ14, ಕಾರ್ತಿಕ್ ಎ15, ಕೇಶವ ಮೂರ್ತಿ ಎ16, ನಿಖಿಲ್ ನಾಯಕ್ ಎ17 ಎಂದು ಕೇಸ್​ ದಾಖಲಾಗಿದೆ. 13 ಮಂದಿ ಈಗ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ