AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೇಸ್​ನಲ್ಲಿ 13 ಜನ ಮಾತ್ರವಲ್ಲ, ಬರೋಬ್ಬರಿ 17 ಆರೋಪಿಗಳು; 4 ಮಂದಿ ನಾಪತ್ತೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಹಾಗೂ ಇತರ 13 ಆರೋಪಿಗಳ ಜೊತೆ ಹೊಸದಾಗಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿಬಂದಿವೆ. ಇವರೆಲ್ಲ ಸದ್ಯಕ್ಕೆ ನಾಪತ್ತೆ ಆಗಿದ್ದಾರೆ. ತಲೆ ತಪ್ಪಿಸಿಕೊಂಡಿರುವ ಈ 4 ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಶುರು ಮಾಡಿದ್ದಾರೆ. ಈ ಆರೋಪಿಗಳು ಸಿಕ್ಕ ನಂತರ ಇನ್ನಷ್ಟು ಹೊಸ ಮಾಹಿತಿಗಳು ಹೊರಬರಲಿದೆ.

ದರ್ಶನ್ ಕೇಸ್​ನಲ್ಲಿ 13 ಜನ ಮಾತ್ರವಲ್ಲ, ಬರೋಬ್ಬರಿ 17 ಆರೋಪಿಗಳು; 4 ಮಂದಿ ನಾಪತ್ತೆ
ದರ್ಶನ್​, ಪವಿತ್ರಾ ಗೌಡ, ಕೊಲೆಯಾದ ರೇಣುಕಾ ಸ್ವಾಮಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jun 12, 2024 | 5:36 PM

Share

ನಟ ದರ್ಶನ್​ (Darshan) ಮಾಡಿಕೊಂಡ ವಿವಾದ ದೊಡ್ಡದಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆತಂದು ಸಾಯಿಸಿದ ಆರೋಪ ದರ್ಶನ್​ ಮೇಲಿದೆ. ಅಲ್ಲದೇ ಈ ಕೃತ್ಯದಲ್ಲಿ ಅನೇಕರು ಅರೆಸ್ಟ್​ ಮಾಡಲಾಗಿದ್ದು, ವಿಚಾರಣೆ ಕೂಡ ತೀವ್ರವಾಗಿದೆ. ಮಂಗಳವಾರ (ಜೂನ್​ 11) ಒಟ್ಟು 13 ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಈ ಕೇಸ್​ನಲ್ಲಿ (Darshan Case) ಭಾಗಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು (ಜೂನ್​ 12) ಲಭ್ಯವಾದ ಮಾಹಿತಿ ಪ್ರಕಾರ ಒಟ್ಟು 17 ಜನರು ಈ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ. ಆ ಪೈಕಿ ನಾಲ್ಕು ಜನರು ನಾಪತ್ತೆ ಆಗಿದ್ದಾರೆ!

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕಾಗಿ ರೇಣುಕಾ ಸ್ವಾಮಿಯನ್ನು ಅಪಹರಿಸಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ಆತನ ಮೇಲೆ ಹಲ್ಲೆ ಮಾಡಲಾಯಿತು. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿಯ ಶವವನ್ನು ರಾಜಕಾಲುವೆಗೆ ಎಸೆಯಲಾಯಿತು. ಒಟ್ಟಾರೆ ಈ ಪ್ರಕರಣದಲ್ಲಿ ಹಲವರು ಕೈ ಜೋಡಿಸಿದ್ದು ಬೆಳಕಿಗೆ ಬಂದಿದೆ. ತನಿಖೆ ಚುರುಕಾದಂತೆಲ್ಲ ಬೇರೆ ಬೇರೆ ಹೆಸರುಗಳು ಹೊರಬರುತ್ತಿವೆ.

ಈ ಕೇಸ್​ನಲ್ಲಿ ಹೊಸದಾಗಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿಬಂದಿವೆ. ಸದ್ಯಕ್ಕೆ ಇವರೆಲ್ಲ ನಾಪತ್ತೆ ಆಗಿದ್ದಾರೆ. ತಲೆ ತಪ್ಪಿಸಿಕೊಂಡಿರುವ ಈ ನಾಲ್ಕು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಈ ನಾಲ್ವರು ಸಿಕ್ಕ ಬಳಿಕ ಇನ್ನಷ್ಟು ಹೊಸ ಮಾಹಿತಿಗಳು ಹೊರಬರುವುದು ಖಚಿತ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ರೇಣುಕಾ ಸ್ವಾಮಿ ಕುಟುಂಬದವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಠಾಣೆಯಲ್ಲಿರುವ ಕೊಲೆ ಆರೋಪಿ ದರ್ಶನ್​ಗೆ ದೊನ್ನೆ ಬಿರಿಯಾನಿ ತರಿಸಿದ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾಳೆ. ದರ್ಶನ್​ ಎ2 ಹಾಗೂ ಕೆ.ಪವನ್ ಎ3 ಆಗಿದ್ದಾನೆ. ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಅಲಿಯಾಸ್ ಜಗ್ಗ ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜ್ ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್​ ಎ14, ಕಾರ್ತಿಕ್ ಎ15, ಕೇಶವ ಮೂರ್ತಿ ಎ16, ನಿಖಿಲ್ ನಾಯಕ್ ಎ17 ಎಂದು ಕೇಸ್​ ದಾಖಲಾಗಿದೆ. 13 ಮಂದಿ ಈಗ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!