AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ; ಇಲ್ಲಿದೆ ಎಲ್ಲರ ವಿವರ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ದರ್ಶನ್​, ಪವಿತ್ರಾ ಗೌಡ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಎಲ್ಲ 13 ಮಂದಿ ಆರೋಪಿಗಳ ವಿಳಾಸದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತನಿಖೆ ಚುರುಕುಕೊಂಡಿದ್ದು ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ; ಇಲ್ಲಿದೆ ಎಲ್ಲರ ವಿವರ
ದರ್ಶನ್​, ಪವಿತ್ರಾ ಸೇರಿ 13 ಜನರ ಬಂಧನ
Follow us
Prajwal Kumar NY
| Updated By: ಮದನ್​ ಕುಮಾರ್​

Updated on: Jun 11, 2024 | 3:19 PM

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್​ (Darshan), ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ. ಕ್ಷುಲ್ಲಕ ವಿಚಾರದಿಂದ ಕೊಲೆ ನಡೆದುಹೋಗಿದೆ. ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ದರ್ಶನ್​ ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲ 13 ಜನರ ಹೆಸರು ಮತ್ತು ವಿಳಾಸ ಬಹಿರಂಗ ಆಗಿವೆ.

ದರ್ಶನ್​, ಪವಿತ್ರಾ ಗೌಡ ಜೊತೆ ವಿ. ವಿನಯ್, ಆರ್.ನಾಗರಾಜು, ಎಂ. ಲಕ್ಷ್ಮಣ್​, ಎಸ್​. ಪ್ರದೋಶ್​, ಕೆ. ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಈಗ ಪೊಲೀಸರ ವಶದಲ್ಲಿ ಇದ್ದಾರೆ. ಇಂದು (ಜೂನ್ 11) ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಆರೋಪಿಗಳು ವಿವರ ಹೀಗಿದೆ:

ವಿನಯ್ ವಿ – ಜಯಣ್ಣ ಫಾರ್ಮ್​ ಹೌಸ್​. ನಾಗರಾಜು ಆರ್​ – ರಾಮಕೃಷ್ಣ ನಗರ ಮೈಸೂರು. ಲಕ್ಷ್ಮಣ್​ ಎಂ – ಆರ್​ಪಿಸಿ ಲೇಔಟ್​, ಬೆಂಗಳೂರು. ಪ್ರದೋಶ್​ ಎಸ್. – ಗಿರಿನಗರ. ಪವನ್ ಕೆ – ಚನ್ನಪಟ್ಟಣ (ಆರ್​ ಆರ್​ ನಗರದಲ್ಲಿ ವಾಸ). ದೀಪಕ್ ಕುಮಾರ್​ ಎಂ – ಆರ್​.ಆರ್​. ನಗರ. ನಂದೀಶ್​ – ಮಂಡ್ಯ (ಆರ್​ಆರ್​ ನಗರ ವಾಸ). ಕಾರ್ತಿಕ್​ – ಗಿರಿ ನಗರ. ನಿಖಿಲ್ ನಾಯಕ್​ – ಬನ್ನೇರುಘಟ್ಟ ಮೇನ್​, ಕೆಂಬತ್ತಳ್ಳಿ ಗೊಟ್ಟಿಗೇರಿ. ರಾಘವೇಂದ್ರ ಅಲಿಯಾಸ್​ ರಾಘು – ಕೋಳಿಹಟ್ಟಿ ದೊಡ್ಡ ಪೇಟೆ, ಚಿತ್ರದುರ್ಗ. ಕೇಶವ ಮೂರ್ತಿ- ಗಿರಿನಗರ.

ಇದನ್ನೂ ಓದಿ: ಮೋರಿಯಲ್ಲಿದ್ದ ಶವ ಎಳೆದಾಡಿದ್ದ ನಾಯಿಗಳು: ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದೇ ಹೀಗೆ!

ಕೊಲೆಯಾದ ರೇಣುಕಾ ಸ್ವಾಮಿ ಕೂಡ ದರ್ಶನ್​ ಅಭಿಮಾನಿ ಆಗಿದ್ದ. ಪವಿತ್ರಾ ಗೌಡಗೆ ಮೆಸೇಜ್ ಮಾಡಿದ ಬಗ್ಗೆ ಕೊಲೆಗೂ ಮುನ್ನ ಸ್ನೇಹಿತರ ಬಳಿ ರೇಣುಕಾಸ್ವಾಮಿ ಕೊಲೆಗೂ ಮುನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದ ರೇಣುಕಾಸ್ವಾಮಿ.‘ನಮ್ಮ ಬಾಸ್ ಸಂಸಾರವನ್ನು ಪವಿತ್ರಾ ಗೌಡ ಹಾಳು ಮಾಡಿದ್ದಾಳೆ. ಅದಕ್ಕೆ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದೆ’ ಎಂದು ರೇಣುಕಾ ಸ್ವಾಮಿ ಹೇಳಿಕೊಂಡಿದ್ದ ಎನ್ನಲಾಗಿದೆ. ತನಿಖೆ ಮುಂದುವರಿದಂತೆಲ್ಲ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ