AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ನೋಡುವ ಆಸೆಯಿಂದ ಬೆಂಗಳೂರಿಗೆ ಬಂದು ಹೆಣವಾದ ರೇಣುಕಾ ಸ್ವಾಮಿ; ಕಿಡ್ನ್ಯಾಪರ್​ಗಳ ಐಡಿಯಾ ಹೇಗಿತ್ತು?

ಚಿತ್ರದುರ್ಗದ ಹೊರವಲಯದಲ್ಲಿ ರೇಣುಕಾ ಸ್ವಾಮಿಯನ್ನು ಆಟೋದಿಂದ ಕಾರಿಗೆ ಶಿಫ್ಟ್ ಮಾಡಿದರು. ನಟ ದರ್ಶನ್ ಜೊತೆ ಭೇಟಿ ಮಾಡಿಸುತ್ತೇನೆ ಎಂದು ರೇಣುಕಾಸ್ವಾಮಿಗೆ ರಘು ನಂಬಿಸಿದ್ದ. ಆತನ ಮಾತನ್ನು ನಂಬಿದ ರೇಣುಕಾ ಸ್ವಾಮಿಯು ದರ್ಶನ್​ರನ್ನು ಭೇಟಿ ಮಾಡುವ ಆಸೆಗೆ ಖುಷಿಯಿಂದ ಅಪಹರಣಕಾರರ ಜೊತೆ ಹೋಗಿದ್ದ. ಆದರೆ ಕೊನೆಯಲ್ಲಿ ಪತ್ತೆಯಾಗಿದ್ದು ಶವವಾಗಿ ಎಂಬುದೇ ದುರಂತ.

ದರ್ಶನ್​ ನೋಡುವ ಆಸೆಯಿಂದ ಬೆಂಗಳೂರಿಗೆ ಬಂದು ಹೆಣವಾದ ರೇಣುಕಾ ಸ್ವಾಮಿ; ಕಿಡ್ನ್ಯಾಪರ್​ಗಳ ಐಡಿಯಾ ಹೇಗಿತ್ತು?
ರೇಣುಕಾ ಸ್ವಾಮಿ, ದರ್ಶನ್​
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಮದನ್​ ಕುಮಾರ್​|

Updated on: Jun 13, 2024 | 6:12 PM

Share

ಚಿತ್ರದುರ್ಗದ ಹೊರವಲಯದಲ್ಲಿ ರೇಣುಕಾ ಸ್ವಾಮಿಯನ್ನು ಆಟೋದಿಂದ ಕಾರಿಗೆ ಶಿಫ್ಟ್ ಮಾಡಿದರು. ನಟ ದರ್ಶನ್ (Darshan) ಜೊತೆ ಭೇಟಿ ಮಾಡಿಸುತ್ತೇನೆ ಎಂದು ರೇಣುಕಾಸ್ವಾಮಿಗೆ ರಘು ನಂಬಿಸಿದ್ದ. ಆತನ ಮಾತನ್ನು ನಂಬಿದ ರೇಣುಕಾ ಸ್ವಾಮಿಯು ದರ್ಶನ್​ರನ್ನು ಭೇಟಿ ಮಾಡುವ ಆಸೆಗೆ ಖುಷಿಯಿಂದ ಅಪಹರಣಕಾರರ ಜೊತೆ ಹೋಗಿದ್ದ. ಆದರೆ ಕೊನೆಯಲ್ಲಿ ಪತ್ತೆಯಾಗಿದ್ದು ಶವವಾಗಿ ಎಂಬುದೇ ದುರಂತ.ಪವಿತ್ರಾ ಗೌಡಗೆ (Pavithra Gowda) ಅಶ್ಲೀಲವಾಗಿ ಮೆಸೇಜ್​ ಕಳಿಸಿದ್ದ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಬದುಕು ದುರಂತ ಅಂತ್ಯ ಕಂಡಿದೆ. ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಸೋಶಿಯಲ್​ ಮೀಡಿಯಾ ಮೂಲಕ ಅಸಭ್ಯ ಫೋಟೋ ಕಳಿಸಿದ್ದ ರೇಣುಕಾ ಸ್ವಾಮಿಗೆ (Renuka Swamy) ಬುದ್ಧಿ ಕಲಿಸಲು ದರ್ಶನ್​ ಹಾಗೂ ಸಹಚರರು ಕಾನೂನು ಕೈಗೆತ್ತಿಕೊಂಡರು. ರೇಣುಕಾ ಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ದುರಂತ ಏನೆಂದರೆ, ದರ್ಶನ್​ರನ್ನು ನೋಡುವ ಆಸೆಯಿಂದ ಕಿಡ್ನ್ಯಾಪರ್​ಗಳ ಕಾರು ಹತ್ತಿದ್ದ ರೇಣುಕಾ ಸ್ವಾಮಿ. ಆದರೆ ಬೆಂಗಳೂರಿಗೆ ಬಂದಾಗ ಆಗಿದ್ದು ಮಾತ್ರ ದೊಡ್ಡ ದುರಂತ.

ಚಿತ್ರದುರ್ಗದಲ್ಲಿ ಐವರು ಸೇರಿಕೊಂಡು ರೇಣುಕಾ ಸ್ವಾಮಿ ಕಿಡ್ನ್ಯಾಪ್ ಮಾಡಿದ್ದರು. ರಾಘವೇಂದ್ರ, ಜಗದೀಶ್, ಅನು, ರಾಜು, ರವಿಯಿಂದ ಕಿಡ್ನ್ಯಾಪ್​ ನಡೆಯಿತು ಎಂಬ ಆರೋಪ ಇದೆ. ಜಗದೀಶ್, ಅನು, ರವಿ ಹಾಗೂ ರಾಜು ಚಿತ್ರದುರ್ಗದವರು. ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿಯ ಕಿಡ್ನ್ಯಾಪ್ ಮಾಡಲಾಯಿತು. ಎಲ್ಲರೂ ಸೇರಿ ರೇಣುಕಾ ಸ್ವಾಮಿಯನ್ನು ಆಟೋದಲ್ಲಿ ಚಿತ್ರದುರ್ಗದ ಹೊರವಲಯಕ್ಕೆ ಕರೆದೊಯ್ದಿದ್ದರು.

ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್​ ನೋಡಲು ಕಿಕ್ಕಿರಿದು ಸೇರಿದ ಜನರಿಗೆ ಪೊಲೀಸ್​ ಲಾಠಿ ರುಚಿ

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದ ಹೊರವಲಯದಲ್ಲಿ ಆಟೋದಿಂದ ಕಾರಿಗೆ ಶಿಫ್ಟ್ ಮಾಡಲಾಯಿತು. ಬಾಡಿಗೆಗೆ ಎಂದು ಹೇಳಿ ಕಾರು ಚಾಲಕ ರವಿಯನ್ನು ಕರೆಸಿಕೊಂಡಿದ್ದರು. ದರ್ಶನ್ ಭೇಟಿ ಮಾಡಿಸುತ್ತೇನೆಂದು ರೇಣುಕಾಸ್ವಾಮಿಗೆ ರಘು ನಂಬಿಸಿದ್ದ. ದರ್ಶನ್​ರನ್ನು ಭೇಟಿ ಮಾಡುವ ಆಸೆಯಿಂದ ರೇಣುಕಾ ಸ್ವಾಮಿ ಹೋಗಿದ್ದ. ಆದರೆ ಕೊನೆಗೆ ಶವಾಗಿ ಪತ್ತೆಯಾಗಿದ್ದು ದುರಂತ ಸಂಗತಿ.

ಈ ಕೇಸ್​​ನಲ್ಲಿ ದರ್ಶನ್​, ಪವಿತ್ರಾ ಗೌಡ, ರಾಘವೇಂದ್ರ ಮುಂತಾದವರ ಬಂಧನ ಆಗಿದೆ. ಕಾರು ಚಾಲಕ ರವಿ ಇಂದು (ಜೂನ್​ 13) ಚಿತ್ರದುರ್ಗದಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. 3 ಆರೋಪಿಗಳು ನಾಪತ್ತೆ ಆಗಿದ್ದಾರೆ. ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. 6 ದಿನಗಳ ಕಾಲ ಎಲ್ಲ ಆರೋಪಿಗಳನ್ನು ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಹೈ ಪ್ರೊಫೈಲ್​ ಕೇಸ್​ ಆದ್ದರಿಂದ ತನಿಖೆ ಚುರುಕುಗೊಂಡಿದೆ. ತನಿಖೆಯ ಪ್ರತಿ ಹಂತದಲ್ಲೂ ಹೊಸ ಹೊಸ ಶಾಕಿಂಗ್​ ವಿವಚಾರಗಳು ಹೊರಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ