AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಯಿಂದ ಬಳಲಿ ಬೆಂಡಾದ ದರ್ಶನ್; ಕೊಲೆ ಆರೋಪಿಗೆ ಕಾಡಿದೆ ಭವಿಷ್ಯದ ಚಿಂತೆ

ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿ ಸಾಕಷ್ಟು ದಿನ ಕಳೆದಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಇವರು ಪ್ರಮುಖ ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಇದರಿಂದ ದರ್ಶನ್ ತೀವ್ರ ಚಿಂತೆಗೊಂಡಿದ್ದಾರೆ.

ವಿಚಾರಣೆಯಿಂದ ಬಳಲಿ ಬೆಂಡಾದ ದರ್ಶನ್; ಕೊಲೆ ಆರೋಪಿಗೆ ಕಾಡಿದೆ ಭವಿಷ್ಯದ ಚಿಂತೆ
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 14, 2024 | 6:58 AM

Share

ನಟಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾ ಸ್ವಾಮಿಯನ್ನು ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಆರೋಪ ದರ್ಶನ್ ಹಾಗೂ ಗ್ಯಾಂಗ್ ಮೇಲೆ ಇದೆ. ಈ ಪ್ರಕರಣದ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಪ್ರಕರಣದ ವಿಚಾರಣೆ ಕಂಡು ದರ್ಶನ್ ಕಂಗಾಲಾಗಿದ್ದಾರೆ. ಈಗ ಅವರಿಗೆ ಭವಿಷ್ಯದ ಚಿಂತೆ ಕಾಡಿದೆಯಂತೆ. ಅವರು ದಿನಕಳೆದಂತೆ ಸೈಲೆಂಟ್ ಆಗಿದ್ದಾರೆ ಎಂದು ವರದಿ ಆಗಿದೆ.

ದರ್ಶನ್ ಅವರು ಕೊಲೆ ಕೇಸ್​​ನಲ್ಲಿ ಜೈಲು ಸೇರಿದ್ದಾರೆ. ಈಗಾಗಲೇ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಳ್ಳುವ ಹಂತ ತಲುಪಿದೆ. ದರ್ಶನ್ ತಮಗೆ ಇರುವ ಪ್ರಭಾವ ಬಳಸಿಕೊಂಡು ಹೊರಗೆ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದ ಅವರು ಕಂಗಾಲಾಗಿದ್ದಾರೆ.

ಪ್ರಕರಣದ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ದರ್ಶನ್ ಮೃದುವಾಗಿದ್ದಾರಂತೆ. ಅರೆಸ್ಟ್ ಆದ ಮೊದಲ ದಿನ ಇದ್ದ ಗತ್ತು ಈಗ ಅವರಲ್ಲಿ ಉಳಿದುಕೊಂಡಿಲ್ಲ. ನಿರಂತರ ವಿಚಾರಣೆಯಿಂದ ಫುಲ್ ಸೈಲೆಂಟ್ ಆಗಿದ್ದಾರೆ. ದರ್ಶನ್ ಘಟನೆ ಬಗ್ಗೆ ಗೊತ್ತಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹೀಗಾಗಿ, ಇತರೆ ಆರೋಪಿಗಳ ಹೇಳಿಕೆ ಆಧರಿಸಿ ದರ್ಶನ್ ವಿಚಾರಣೆ ಮಾಡಲಾಗುತ್ತಿದೆ. ಸ್ಥಳ ಮಹಜರು ಸಂದರ್ಭದಲ್ಲಿ ಇತರೆ ಆರೋಪಿಗಳ ಹೇಳಿಕೆ ಆಧಾರದರ ಮೇಲೆ ದರ್ಶನ್ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಅಪ್ಪ-ಅಮ್ಮನಿಗೆ ಬೆಂಬಲ ಬೇಕಿರುವ ಈ ಸಮಯದಲ್ಲಿ..’: ದರ್ಶನ್​ ಪುತ್ರನ ಅಳಲು

ಪೊಲೀಸರಿಂದ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಇದೆ. ಇದರ ಮಧ್ಯೆಯೂ ದರ್ಶನ್  ಬಸವಳಿದಿದ್ದಾರೆ. ತಮ್ಮ ಸ್ಟಾರ್​​ಡಮ್ ಹಾಗೂ ಭವಿಷ್ಯದ ಬಗ್ಗೆ ಅವರಿಗೆ ತೀವ್ರ ಚಿಂತೆ ಕಾಡಿದೆ. ಅವರು ಪ್ರಕರಣದ ಭಾಗವಾಗಿರುವುದಕ್ಕೆ ಮರುಗುತ್ತಿದ್ದಾರೆ. ತಡರಾತ್ರಿ ದರ್ಶನ್ ಎರಡುಮೂರು ಬಾರಿ ಎಚ್ಚರಗೊಂಡಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​