AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಯಿಂದ ಬಳಲಿ ಬೆಂಡಾದ ದರ್ಶನ್; ಕೊಲೆ ಆರೋಪಿಗೆ ಕಾಡಿದೆ ಭವಿಷ್ಯದ ಚಿಂತೆ

ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿ ಸಾಕಷ್ಟು ದಿನ ಕಳೆದಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಇವರು ಪ್ರಮುಖ ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಇದರಿಂದ ದರ್ಶನ್ ತೀವ್ರ ಚಿಂತೆಗೊಂಡಿದ್ದಾರೆ.

ವಿಚಾರಣೆಯಿಂದ ಬಳಲಿ ಬೆಂಡಾದ ದರ್ಶನ್; ಕೊಲೆ ಆರೋಪಿಗೆ ಕಾಡಿದೆ ಭವಿಷ್ಯದ ಚಿಂತೆ
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 14, 2024 | 6:58 AM

Share

ನಟಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾ ಸ್ವಾಮಿಯನ್ನು ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಆರೋಪ ದರ್ಶನ್ ಹಾಗೂ ಗ್ಯಾಂಗ್ ಮೇಲೆ ಇದೆ. ಈ ಪ್ರಕರಣದ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಪ್ರಕರಣದ ವಿಚಾರಣೆ ಕಂಡು ದರ್ಶನ್ ಕಂಗಾಲಾಗಿದ್ದಾರೆ. ಈಗ ಅವರಿಗೆ ಭವಿಷ್ಯದ ಚಿಂತೆ ಕಾಡಿದೆಯಂತೆ. ಅವರು ದಿನಕಳೆದಂತೆ ಸೈಲೆಂಟ್ ಆಗಿದ್ದಾರೆ ಎಂದು ವರದಿ ಆಗಿದೆ.

ದರ್ಶನ್ ಅವರು ಕೊಲೆ ಕೇಸ್​​ನಲ್ಲಿ ಜೈಲು ಸೇರಿದ್ದಾರೆ. ಈಗಾಗಲೇ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಳ್ಳುವ ಹಂತ ತಲುಪಿದೆ. ದರ್ಶನ್ ತಮಗೆ ಇರುವ ಪ್ರಭಾವ ಬಳಸಿಕೊಂಡು ಹೊರಗೆ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದ ಅವರು ಕಂಗಾಲಾಗಿದ್ದಾರೆ.

ಪ್ರಕರಣದ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ದರ್ಶನ್ ಮೃದುವಾಗಿದ್ದಾರಂತೆ. ಅರೆಸ್ಟ್ ಆದ ಮೊದಲ ದಿನ ಇದ್ದ ಗತ್ತು ಈಗ ಅವರಲ್ಲಿ ಉಳಿದುಕೊಂಡಿಲ್ಲ. ನಿರಂತರ ವಿಚಾರಣೆಯಿಂದ ಫುಲ್ ಸೈಲೆಂಟ್ ಆಗಿದ್ದಾರೆ. ದರ್ಶನ್ ಘಟನೆ ಬಗ್ಗೆ ಗೊತ್ತಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹೀಗಾಗಿ, ಇತರೆ ಆರೋಪಿಗಳ ಹೇಳಿಕೆ ಆಧರಿಸಿ ದರ್ಶನ್ ವಿಚಾರಣೆ ಮಾಡಲಾಗುತ್ತಿದೆ. ಸ್ಥಳ ಮಹಜರು ಸಂದರ್ಭದಲ್ಲಿ ಇತರೆ ಆರೋಪಿಗಳ ಹೇಳಿಕೆ ಆಧಾರದರ ಮೇಲೆ ದರ್ಶನ್ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಅಪ್ಪ-ಅಮ್ಮನಿಗೆ ಬೆಂಬಲ ಬೇಕಿರುವ ಈ ಸಮಯದಲ್ಲಿ..’: ದರ್ಶನ್​ ಪುತ್ರನ ಅಳಲು

ಪೊಲೀಸರಿಂದ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಇದೆ. ಇದರ ಮಧ್ಯೆಯೂ ದರ್ಶನ್  ಬಸವಳಿದಿದ್ದಾರೆ. ತಮ್ಮ ಸ್ಟಾರ್​​ಡಮ್ ಹಾಗೂ ಭವಿಷ್ಯದ ಬಗ್ಗೆ ಅವರಿಗೆ ತೀವ್ರ ಚಿಂತೆ ಕಾಡಿದೆ. ಅವರು ಪ್ರಕರಣದ ಭಾಗವಾಗಿರುವುದಕ್ಕೆ ಮರುಗುತ್ತಿದ್ದಾರೆ. ತಡರಾತ್ರಿ ದರ್ಶನ್ ಎರಡುಮೂರು ಬಾರಿ ಎಚ್ಚರಗೊಂಡಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ