AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ವಿಚಾರಣೆ; ವಾದ-ಪ್ರತಿವಾದ ಏನು?

ವಾದ, ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದ. ಒಂದು ವಾರದಲ್ಲಿ 3 ಪುಟಗಳ ಲಿಖಿತ ವಾದಾಂಶ ಸಲ್ಲಿಸಲು ಸೂಚನೆ ನೀಡಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ಬರಲಿದೆ. ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ಪರ ವಕೀಲರ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಿದೆ.

ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ವಿಚಾರಣೆ; ವಾದ-ಪ್ರತಿವಾದ ಏನು?
Darshan, Supreme Court
ಮದನ್​ ಕುಮಾರ್​
|

Updated on: Jul 24, 2025 | 3:52 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 7 ಆರೋಪಿಗಳ ಜಾಮೀನು ವಿಚಾರಣೆಗೆ ಸುಪ್ರೀಂ ಕೋರ್ಟ್​ನಲ್ಲಿ ಮುಕ್ತಾಯ ಆಗಿದೆ. ದರ್ಶನ್ (Darshan), ಪವಿತ್ರ ಗೌಡ ಮುಂತಾದವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್​ನಲ್ಲಿ (Supreme Court) ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮಹದೇವನ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆದಿದೆ. ಪ್ರಾಸಿಕ್ಯೂಷನ್ ಪರ ಸಿದ್ದಾರ್ಥ ಲೂಥ್ರಾ ವಾದ ಮಂಡನೆ ಮಾಡಿದರು. ದರ್ಶನ್ ಪರ ಸಿದ್ದಾರ್ಥ ದವೆ ವಾದ ಮಾಡಿದರು.

‘ಪ್ರಕರಣದ ವೇಳೆ ವಾಹನದಲ್ಲಿದ್ದ ಆರೋಪಿಗಳನ್ನು ಗುರುತಿಸಲಾಗಿದೆ. ಅವರಿಗೂ ಈಗ ಜಾಮೀನು ಸಿಕ್ಕಿದೆ. ಜೀಪ್ ರಾಂಗ್ಲರ್ ವಿನಯ್ ಎಂಬಾತನಿಗೆ ಸೇರಿದ್ದು. ಆತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್​ನ ಮಾಲೀಕ ಹಾಗೂ ಆರೋಪಿ. 3 ಜನ ತಾವೇ ಕೊಲೆ ಮಾಡಿದ್ದೇವೆಂದು ಸರೆಂಡರ್ ಆಗಿದ್ದರು. ಎ4 ರಾಘವೇಂದ್ರ ಸಿಡಿಆರ್ ಪರಿಶೀಲಿಸಿದಾಗ 45 ಕಾಲ್ ಮಾಡಿದ್ದಾನೆ. ಘಟನೆ ವೇಳೆ ನಾಗರಾಜ್​ಗೂ ಈತ ಮೆಸೇಜ್ ಮಾಡಿದ್ದಾನೆ’ ಎಂದು ಸಿದ್ದಾರ್ಥ ಲೂತ್ರಾ ವಾದ ಮಂಡಿಸಿದರು.

ಪವನ್ ಸೂಚನೆ ಮೇರೆಗೆ ರೇಣುಕಾಸ್ವಾಮಿ ಕಿಡ್ನಾಪ್ ಮಾಡಲಾಯಿತು. ದರ್ಶನ್, ಪವಿತ್ರಾಗೌಡ ಮತ್ತಿತರರು ಶೆಡ್​ಗೆ ಬಂದು ಹಲ್ಲೆ ಮಾಡಿದರು. ಹಲ್ಲೆಯಿಂದಾಗಿ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ಜಡ್ಜ್ ಎದುರು ಸಿದ್ದಾರ್ಥ ಲೂತ್ರಾ ಮಾಹಿತಿ ನೀಡಿದರು.

ಇದನ್ನೂ ಓದಿ
Image
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
Image
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
Image
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
Image
ಕರ್ನಾಟಕದ ಮುಖ್ಯ ಮಂತ್ರಿಯಾದ ನಟ ದರ್ಶನ್, ಪಕ್ಷ ಯಾವುದು ಗೊತ್ತೆ?

ಇದನ್ನೂ ಓದಿ: ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ

ಹಲ್ಲೆಯ ಪ್ರತ್ಯಕ್ಷದರ್ಶಿ ಯಾರಾದರೂ ಇದ್ದಾರಾ ಎಂದು ಜಡ್ಜ್ ಹೇಳಿದರು. ‘ಪುನೀತ್ ಹಾಗೂ ಕಿರಣ್ ಈ ಘಟನೆಯ ಪ್ರತ್ಯಕ್ಷದರ್ಶಿಗಳು. ಇವರು ಶೆಡ್​ನಲ್ಲಿ ಕೆಲಸಗಾರರಾಗಿದ್ದರು. ಒಬ್ಬನ ಹೇಳಿಕೆಯನ್ನು 7 ದಿನಗಳಲ್ಲಿ ದಾಖಲಿಸಲಾಗಿದೆ. ಮತ್ತೊಬ್ಬನ ಹೇಳಿಕೆಯನ್ನು 20 ದಿನಗಳಲ್ಲಿ ದಾಖಲಿಸಲಾಗಿದೆ. ಆತ ಒಂದೆಡೆಯಿಂದ ಮತ್ತೊಂದೆಡೆಗೆ ಸಂಚರಿಸುತ್ತಿದ್ದ ಹೀಗಾಗಿ ವಿಳಂಬವಾಗಿದೆ. 7 ದಿನಗಳಲ್ಲಿ ಕಿರಣ್, 12 ದಿನಗಳಲ್ಲಿ ಪುನೀತ್ ಹೇಳಿಕೆ ದಾಖಲಾಗಿದೆ’ ಎಂದು ಸಿದ್ದಾರ್ಥ್ ಲೂತ್ರ ತಿಳಿಸಿದರು.

ಇದನ್ನೂ ಓದಿ: ‘ಇಡೀ ಕೇಸ್ ಆಗಲು ನೀವೇ ಕಾರಣ ಅಲ್ಲವೇ’; ಪವಿತ್ರಾ ಗೌಡಗೆ ಸುಪ್ರೀಂ ಜಡ್ಜ್ ಪ್ರಶ್ನೆ

ರೇಣುಕಾಸ್ವಾಮಿ ಕೊಲೆ ಬಳಿಕ ಆರೋಪಿಗಳು ದರ್ಶನ್ ಜೊತೆ ಫೋಟೋ ತೆಗೆಸಿಕೊಂಡಿದ್ದರು. ಆ ವಿಷಯ ತಿಳಿದು ಜಡ್ಜ್​ಗೆ ಅಚ್ಚರಿ ಆಯಿತು. ‘ನಂಬಲಸಾಧ್ಯ! ಘಟನೆ ನಂತರ ಫೋಟೋ ತೆಗೆಸಿಕೊಂಡರೇ? ಕೊಲೆ ಮಾಡಿ ಇಂತಹ ಫೋಟೋ ತೆಗೆದುಕೊಳ್ಳಲು ಸಾಧ್ಯವೇ? ಇವರೆಂತಹ ವ್ಯಕ್ತಿಗಳು? ನಾನು ಆಕಸ್ಮಿಕ ಫೋಟೋ ಎಂದುಕೊಂಡಿದ್ದೆ’ ಎಂದು ಜಡ್ಜ್ ಜೆ.ಬಿ. ಪರ್ದಿವಾಲಾ ಅಚ್ಚರಿ ವ್ಯಕ್ತಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ