ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ವಿಚಾರಣೆ; ವಾದ-ಪ್ರತಿವಾದ ಏನು?

ವಾದ, ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದ. ಒಂದು ವಾರದಲ್ಲಿ 3 ಪುಟಗಳ ಲಿಖಿತ ವಾದಾಂಶ ಸಲ್ಲಿಸಲು ಸೂಚನೆ ನೀಡಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ಬರಲಿದೆ. ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ಪರ ವಕೀಲರ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಿದೆ.

ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ವಿಚಾರಣೆ; ವಾದ-ಪ್ರತಿವಾದ ಏನು?
Darshan, Supreme Court

Updated on: Jul 24, 2025 | 3:52 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 7 ಆರೋಪಿಗಳ ಜಾಮೀನು ವಿಚಾರಣೆಗೆ ಸುಪ್ರೀಂ ಕೋರ್ಟ್​ನಲ್ಲಿ ಮುಕ್ತಾಯ ಆಗಿದೆ. ದರ್ಶನ್ (Darshan), ಪವಿತ್ರ ಗೌಡ ಮುಂತಾದವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್​ನಲ್ಲಿ (Supreme Court) ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮಹದೇವನ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆದಿದೆ. ಪ್ರಾಸಿಕ್ಯೂಷನ್ ಪರ ಸಿದ್ದಾರ್ಥ ಲೂಥ್ರಾ ವಾದ ಮಂಡನೆ ಮಾಡಿದರು. ದರ್ಶನ್ ಪರ ಸಿದ್ದಾರ್ಥ ದವೆ ವಾದ ಮಾಡಿದರು.

‘ಪ್ರಕರಣದ ವೇಳೆ ವಾಹನದಲ್ಲಿದ್ದ ಆರೋಪಿಗಳನ್ನು ಗುರುತಿಸಲಾಗಿದೆ. ಅವರಿಗೂ ಈಗ ಜಾಮೀನು ಸಿಕ್ಕಿದೆ. ಜೀಪ್ ರಾಂಗ್ಲರ್ ವಿನಯ್ ಎಂಬಾತನಿಗೆ ಸೇರಿದ್ದು. ಆತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್​ನ ಮಾಲೀಕ ಹಾಗೂ ಆರೋಪಿ. 3 ಜನ ತಾವೇ ಕೊಲೆ ಮಾಡಿದ್ದೇವೆಂದು ಸರೆಂಡರ್ ಆಗಿದ್ದರು. ಎ4 ರಾಘವೇಂದ್ರ ಸಿಡಿಆರ್ ಪರಿಶೀಲಿಸಿದಾಗ 45 ಕಾಲ್ ಮಾಡಿದ್ದಾನೆ. ಘಟನೆ ವೇಳೆ ನಾಗರಾಜ್​ಗೂ ಈತ ಮೆಸೇಜ್ ಮಾಡಿದ್ದಾನೆ’ ಎಂದು ಸಿದ್ದಾರ್ಥ ಲೂತ್ರಾ ವಾದ ಮಂಡಿಸಿದರು.

ಪವನ್ ಸೂಚನೆ ಮೇರೆಗೆ ರೇಣುಕಾಸ್ವಾಮಿ ಕಿಡ್ನಾಪ್ ಮಾಡಲಾಯಿತು. ದರ್ಶನ್, ಪವಿತ್ರಾಗೌಡ ಮತ್ತಿತರರು ಶೆಡ್​ಗೆ ಬಂದು ಹಲ್ಲೆ ಮಾಡಿದರು. ಹಲ್ಲೆಯಿಂದಾಗಿ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ಜಡ್ಜ್ ಎದುರು ಸಿದ್ದಾರ್ಥ ಲೂತ್ರಾ ಮಾಹಿತಿ ನೀಡಿದರು.

ಇದನ್ನೂ ಓದಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಕರ್ನಾಟಕದ ಮುಖ್ಯ ಮಂತ್ರಿಯಾದ ನಟ ದರ್ಶನ್, ಪಕ್ಷ ಯಾವುದು ಗೊತ್ತೆ?

ಇದನ್ನೂ ಓದಿ: ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ

ಹಲ್ಲೆಯ ಪ್ರತ್ಯಕ್ಷದರ್ಶಿ ಯಾರಾದರೂ ಇದ್ದಾರಾ ಎಂದು ಜಡ್ಜ್ ಹೇಳಿದರು. ‘ಪುನೀತ್ ಹಾಗೂ ಕಿರಣ್ ಈ ಘಟನೆಯ ಪ್ರತ್ಯಕ್ಷದರ್ಶಿಗಳು. ಇವರು ಶೆಡ್​ನಲ್ಲಿ ಕೆಲಸಗಾರರಾಗಿದ್ದರು. ಒಬ್ಬನ ಹೇಳಿಕೆಯನ್ನು 7 ದಿನಗಳಲ್ಲಿ ದಾಖಲಿಸಲಾಗಿದೆ. ಮತ್ತೊಬ್ಬನ ಹೇಳಿಕೆಯನ್ನು 20 ದಿನಗಳಲ್ಲಿ ದಾಖಲಿಸಲಾಗಿದೆ. ಆತ ಒಂದೆಡೆಯಿಂದ ಮತ್ತೊಂದೆಡೆಗೆ ಸಂಚರಿಸುತ್ತಿದ್ದ ಹೀಗಾಗಿ ವಿಳಂಬವಾಗಿದೆ. 7 ದಿನಗಳಲ್ಲಿ ಕಿರಣ್, 12 ದಿನಗಳಲ್ಲಿ ಪುನೀತ್ ಹೇಳಿಕೆ ದಾಖಲಾಗಿದೆ’ ಎಂದು ಸಿದ್ದಾರ್ಥ್ ಲೂತ್ರ ತಿಳಿಸಿದರು.

ಇದನ್ನೂ ಓದಿ: ‘ಇಡೀ ಕೇಸ್ ಆಗಲು ನೀವೇ ಕಾರಣ ಅಲ್ಲವೇ’; ಪವಿತ್ರಾ ಗೌಡಗೆ ಸುಪ್ರೀಂ ಜಡ್ಜ್ ಪ್ರಶ್ನೆ

ರೇಣುಕಾಸ್ವಾಮಿ ಕೊಲೆ ಬಳಿಕ ಆರೋಪಿಗಳು ದರ್ಶನ್ ಜೊತೆ ಫೋಟೋ ತೆಗೆಸಿಕೊಂಡಿದ್ದರು. ಆ ವಿಷಯ ತಿಳಿದು ಜಡ್ಜ್​ಗೆ ಅಚ್ಚರಿ ಆಯಿತು. ‘ನಂಬಲಸಾಧ್ಯ! ಘಟನೆ ನಂತರ ಫೋಟೋ ತೆಗೆಸಿಕೊಂಡರೇ? ಕೊಲೆ ಮಾಡಿ ಇಂತಹ ಫೋಟೋ ತೆಗೆದುಕೊಳ್ಳಲು ಸಾಧ್ಯವೇ? ಇವರೆಂತಹ ವ್ಯಕ್ತಿಗಳು? ನಾನು ಆಕಸ್ಮಿಕ ಫೋಟೋ ಎಂದುಕೊಂಡಿದ್ದೆ’ ಎಂದು ಜಡ್ಜ್ ಜೆ.ಬಿ. ಪರ್ದಿವಾಲಾ ಅಚ್ಚರಿ ವ್ಯಕ್ತಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us