AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ 4,800ಕ್ಕೂ ಅಧಿಕ ಪುಟಗಳ ಚಾರ್ಜ್​ಶೀಟ್; ನಡೀತಿದೆ ತಪ್ಪು ತಿದ್ದೋ ಕೆಲಸ

ನಟ ದರ್ಶನ್​ಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣ ಕಂಟಕವಾಗಿದೆ. ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 4) ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ. ಈ ಮಧ್ಯೆ ದರ್ಶನ್ ವಿರುದ್ಧವಾಗಿ ಪ್ರಬಲ ಸಾಕ್ಷಿಗಳೇ ಲಭ್ಯವಾಗಿವೆ.

ದರ್ಶನ್ ವಿರುದ್ಧ 4,800ಕ್ಕೂ ಅಧಿಕ ಪುಟಗಳ ಚಾರ್ಜ್​ಶೀಟ್; ನಡೀತಿದೆ ತಪ್ಪು ತಿದ್ದೋ ಕೆಲಸ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Sep 04, 2024 | 10:28 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 4800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಯಾವೆಲ್ಲ ಅಂಶಗಳು ಇರಲಿವೆ ಎನ್ನುವ ಕುರಿತು ಕುತೂಹಲ ಮೂಡಿದೆ. ಒಂದೊಮ್ಮೆ ದರ್ಶನ್ ಅವರನ್ನು ಎ2ನಿಂದ ಎ1 ಆರೋಪಿ ಮಾಡಿದರೆ ಅದು ಪ್ರಮುಖ ಬೆಳವಣಿಗೆ ಆಗಲಿದೆ. ಇದಕ್ಕೆಲ್ಲ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಚಾರ್ಜ್​ಶೀಟ್ ಸಲ್ಲಿಕೆ ಆಗುತ್ತಿರುವ ವಿಚಾರ ಕೇಳಿ ದರ್ಶನ್ ಅವರು ರಾತ್ರಿಯಿಡೀ ನಿದ್ದೆ ಮಾಡಿಲ್ಲ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಏನಾಯಿತು? ಕೊಲೆಗೆ ಯಾರೆಲ್ಲ ಪ್ರಯತ್ನಿಸಿದರು? ತನಿಖೆ ವೇಳೆ ಸಿಕ್ಕ ಸಾಕ್ಷಿಗಳು ಸೇರಿದಂತೆ ಎಲ್ಲವೂ 4,800ಕ್ಕೂ ಪುಟಗಳ ಚಾರ್ಜ್​​ಶೀಟ್​ನಲ್ಲಿ ಇರಲಿದೆ. ಇಂದು ಚಾರ್ಜ್​ಶೀಟ್ ಕರೆಕ್ಷನ್ ಕೆಲಸ ನಡೆಯುತ್ತಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್​ಪಿಪಿ) ಸೂಚಿಸಿದ ಸಣ್ಣಪುಟ್ಟ ತಪ್ಪುಗಳನ್ನು ಸರಿ ಮಾಡುವ ಕೆಲಸ ಆಗುತ್ತಿದೆ. ನಂತರ ಕೋರ್ಟ್​​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ.

20 ಸೆಟ್

ಸಂಜೆ 5 ಗಂಟೆಯೊಳಗೆ ಚಾರ್ಜ್​ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಒಟ್ಟು 20 ಸೆಟ್ ಚಾರ್ಜ್​ಶೀಟ್ ಪ್ರಿಂಟ್ ಆಗಲಿದೆ. 17 ಆರೋಪಿಗಳ ಪರ ವಕೀಲರಿಗೆ ಒಂದೊಂದು ಚಾರ್ಜ್​ಶೀಟ್ ನೀಡಲಾಗುತ್ತದೆ. ಒಂದು ಚಾರ್ಜ್​ಶೀಟ್ ಕಾಪಿ ಕೋರ್ಟ್​ಗೆ ಸಲ್ಲಿಸಲಾಗುತ್ತದೆ. ಒಂದು ಚಾರ್ಜ್​ಶೀಟ್ ಕಾಪಿ​​ ತನಿಖಾಧಿಕಾರಿ ಬಳಿ ಇರಲಿದ್ದು, ಒಂದು ಕಾಪಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಇರಲಿದೆ.

ಇದನ್ನೂ ಓದಿ: ಹಲ್ಲೆಯ ವಿಡಿಯೋ, ಸಿಸಿಟಿವಿ ದೃಶ್ಯ; ದರ್ಶನ್ ವಿರುದ್ಧ ಸಿಕ್ಕ ಪ್ರಬಲ ಸಾಕ್ಷಿಗಳೇನು? 

ದರ್ಶನ್​ಗಿಲ್ಲ ನಿದ್ದೆ

ಚಾರ್ಜ್​ಶೀಟ್ ಸಲ್ಲಿಕೆ ವಿಚಾರದಿಂದ ದರ್ಶನ್ ಟೆನ್ಷನ್ ಆಗಿದ್ದಾರೆ. ಅವರು ನಿದ್ರೆ ಇಲ್ಲದೇ ಎಚ್ಚರವಾಗೇ ಕಾಲ ಕಳೆದಿದ್ದಾರೆ. ಅವರು ಊಟವನ್ನೂ ಸರಿಯಾಗಿ ಮಾಡಿಲ್ಲ ಎಂದು ವರದಿ ಆಗಿದೆ. ಜಾರ್ಜ್​ಶೀಟ್ ಸಲ್ಲಿಕೆ ಬಳಿಕ ಏನಾಗುತ್ತದೆ ಎನ್ನುವ ಟೆನ್ಷನ್ ಅವರನ್ನು ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ