AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ 4,800ಕ್ಕೂ ಅಧಿಕ ಪುಟಗಳ ಚಾರ್ಜ್​ಶೀಟ್; ನಡೀತಿದೆ ತಪ್ಪು ತಿದ್ದೋ ಕೆಲಸ

ನಟ ದರ್ಶನ್​ಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣ ಕಂಟಕವಾಗಿದೆ. ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 4) ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ. ಈ ಮಧ್ಯೆ ದರ್ಶನ್ ವಿರುದ್ಧವಾಗಿ ಪ್ರಬಲ ಸಾಕ್ಷಿಗಳೇ ಲಭ್ಯವಾಗಿವೆ.

ದರ್ಶನ್ ವಿರುದ್ಧ 4,800ಕ್ಕೂ ಅಧಿಕ ಪುಟಗಳ ಚಾರ್ಜ್​ಶೀಟ್; ನಡೀತಿದೆ ತಪ್ಪು ತಿದ್ದೋ ಕೆಲಸ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Sep 04, 2024 | 10:28 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 4800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಯಾವೆಲ್ಲ ಅಂಶಗಳು ಇರಲಿವೆ ಎನ್ನುವ ಕುರಿತು ಕುತೂಹಲ ಮೂಡಿದೆ. ಒಂದೊಮ್ಮೆ ದರ್ಶನ್ ಅವರನ್ನು ಎ2ನಿಂದ ಎ1 ಆರೋಪಿ ಮಾಡಿದರೆ ಅದು ಪ್ರಮುಖ ಬೆಳವಣಿಗೆ ಆಗಲಿದೆ. ಇದಕ್ಕೆಲ್ಲ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಚಾರ್ಜ್​ಶೀಟ್ ಸಲ್ಲಿಕೆ ಆಗುತ್ತಿರುವ ವಿಚಾರ ಕೇಳಿ ದರ್ಶನ್ ಅವರು ರಾತ್ರಿಯಿಡೀ ನಿದ್ದೆ ಮಾಡಿಲ್ಲ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಏನಾಯಿತು? ಕೊಲೆಗೆ ಯಾರೆಲ್ಲ ಪ್ರಯತ್ನಿಸಿದರು? ತನಿಖೆ ವೇಳೆ ಸಿಕ್ಕ ಸಾಕ್ಷಿಗಳು ಸೇರಿದಂತೆ ಎಲ್ಲವೂ 4,800ಕ್ಕೂ ಪುಟಗಳ ಚಾರ್ಜ್​​ಶೀಟ್​ನಲ್ಲಿ ಇರಲಿದೆ. ಇಂದು ಚಾರ್ಜ್​ಶೀಟ್ ಕರೆಕ್ಷನ್ ಕೆಲಸ ನಡೆಯುತ್ತಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್​ಪಿಪಿ) ಸೂಚಿಸಿದ ಸಣ್ಣಪುಟ್ಟ ತಪ್ಪುಗಳನ್ನು ಸರಿ ಮಾಡುವ ಕೆಲಸ ಆಗುತ್ತಿದೆ. ನಂತರ ಕೋರ್ಟ್​​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಲಿದೆ.

20 ಸೆಟ್

ಸಂಜೆ 5 ಗಂಟೆಯೊಳಗೆ ಚಾರ್ಜ್​ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಒಟ್ಟು 20 ಸೆಟ್ ಚಾರ್ಜ್​ಶೀಟ್ ಪ್ರಿಂಟ್ ಆಗಲಿದೆ. 17 ಆರೋಪಿಗಳ ಪರ ವಕೀಲರಿಗೆ ಒಂದೊಂದು ಚಾರ್ಜ್​ಶೀಟ್ ನೀಡಲಾಗುತ್ತದೆ. ಒಂದು ಚಾರ್ಜ್​ಶೀಟ್ ಕಾಪಿ ಕೋರ್ಟ್​ಗೆ ಸಲ್ಲಿಸಲಾಗುತ್ತದೆ. ಒಂದು ಚಾರ್ಜ್​ಶೀಟ್ ಕಾಪಿ​​ ತನಿಖಾಧಿಕಾರಿ ಬಳಿ ಇರಲಿದ್ದು, ಒಂದು ಕಾಪಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಇರಲಿದೆ.

ಇದನ್ನೂ ಓದಿ: ಹಲ್ಲೆಯ ವಿಡಿಯೋ, ಸಿಸಿಟಿವಿ ದೃಶ್ಯ; ದರ್ಶನ್ ವಿರುದ್ಧ ಸಿಕ್ಕ ಪ್ರಬಲ ಸಾಕ್ಷಿಗಳೇನು? 

ದರ್ಶನ್​ಗಿಲ್ಲ ನಿದ್ದೆ

ಚಾರ್ಜ್​ಶೀಟ್ ಸಲ್ಲಿಕೆ ವಿಚಾರದಿಂದ ದರ್ಶನ್ ಟೆನ್ಷನ್ ಆಗಿದ್ದಾರೆ. ಅವರು ನಿದ್ರೆ ಇಲ್ಲದೇ ಎಚ್ಚರವಾಗೇ ಕಾಲ ಕಳೆದಿದ್ದಾರೆ. ಅವರು ಊಟವನ್ನೂ ಸರಿಯಾಗಿ ಮಾಡಿಲ್ಲ ಎಂದು ವರದಿ ಆಗಿದೆ. ಜಾರ್ಜ್​ಶೀಟ್ ಸಲ್ಲಿಕೆ ಬಳಿಕ ಏನಾಗುತ್ತದೆ ಎನ್ನುವ ಟೆನ್ಷನ್ ಅವರನ್ನು ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ