AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 16, 2024 | 8:42 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಇದನ್ನೂ ಓದಿ: ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು 

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ