AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 16, 2024 | 8:42 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಇದನ್ನೂ ಓದಿ: ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು 

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು