AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 16, 2024 | 8:42 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

ಇದನ್ನೂ ಓದಿ: ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು 

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ