AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ-ಕಾಲು ಹೋಗಿದ್ದರೂ ಪರವಾಗಿಲ್ಲ, ಕರೆದುಕೊಂಡು ಬನ್ನಿ’ ಎಂದಿದ್ದ ರೇಣುಕಾಸ್ವಾಮಿ ಪತ್ನಿ

ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಪ್ರಮುಖ ಆರೋಪಿಗಳ ಜಾಮೀನು ರದ್ದು ಮಾಡಿ ಮತ್ತೆ ಜೈಲಿಗೆ ಹಾಕಲಾಗಿದೆ. ಸುಪ್ರೀಂ ಕೋರ್ಟ್​ ಆದೇಶದ ಪರಿಣಾಮದಿಂದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ತಮಗೆ ಆದ ಆಘಾತ ಎಂಥದ್ದು ಎಂಬುದನ್ನು ಟಿವಿ9 ಸಂದರ್ಶನದಲ್ಲಿ ಅವರು ವಿವರಿಸಿದ್ದಾರೆ.

‘ಕೈ-ಕಾಲು ಹೋಗಿದ್ದರೂ ಪರವಾಗಿಲ್ಲ, ಕರೆದುಕೊಂಡು ಬನ್ನಿ’ ಎಂದಿದ್ದ ರೇಣುಕಾಸ್ವಾಮಿ ಪತ್ನಿ
Sahana, Renukaswamy
ಮದನ್​ ಕುಮಾರ್​
|

Updated on: Aug 17, 2025 | 9:15 AM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬ (Renukaswamy Family) ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ದರ್ಶನ್ ಮತ್ತು ಗ್ಯಾಂಗ್​​ನವರಿಂದ ಚಿತ್ರಹಿಂಸೆಗೆ ಒಳಗಾಗಿ ಹತ್ಯೆಯಾದ ರೇಣುಕಾಸ್ವಾಮಿ ಇನ್ನಿಲ್ಲ ಎಂಬ ವಿಷಯ ಗೊತ್ತಾಗಾದ ಪತ್ನಿ, ತಾಯಿ ಮತ್ತು ತಂದೆಗೆ ಆದ ಆಘಾತ ಅಷ್ಟಿಷ್ಟಲ್ಲ. ಅಲ್ಲದೇ, ಆತನ ಶವವನ್ನು ಗುರುತಿಸುವುದು ಕೂಡ ಕಷ್ಟ ಆಗಿತ್ತು. ಅಷ್ಟರಮಟ್ಟಿಗೆ ಚಿತ್ರಹಿಂಸೆ ನೀಡಿ ಸಾಯಿಸಲಾಗಿತ್ತು. ಇತ್ತೀಚೆಗೆ ದರ್ಶನ್ (Darshan), ಪವಿತ್ರಾ ಗೌಡ ಮತ್ತು ಇತರೆ ಪ್ರಮುಖ ಆರೋಪಿಗಳ ಜಾಮೀನು ರದ್ದಾಗಿದ್ದು, ಮತ್ತೆ ಪರಪ್ಪನ ಅಗ್ರಹಾರ (Paarappana Agrahara) ಜೈಲಿಗೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕುಟುಂಬದವರು ಟಿವಿ9 ಜೊತೆ ಮಾತನಾಡಿದ್ದಾರೆ.

ಅನೇಕ ನೋವಿನ ಸಂಗತಿಗಳನ್ನು ರೇಣುಕಾಸ್ವಾಮಿ ಕುಟುಂಬ ಹಂಚಿಕೊಂಡಿದೆ. ಆರಂಭದಲ್ಲಿ ರೇಣುಕಾಸ್ವಾಮಿ ಕೊಲೆಯಾಗಿರುವ ವಿಷಯ ಆತನ ಪತ್ನಿ ಸಹನಾಗೆ ತಿಳಿದಿರಲಿಲ್ಲ. ಗರ್ಭಿಣಿ ಆಗಿದ್ದರಿಂದ ಅವರಿಂದ ವಿಷಯವನ್ನು ಮುಚ್ಚಿಡಲಾಗಿತ್ತು. ಏನೋ ಜಗಳ ಆಗಿದೆ ಎಂಬುದನ್ನಷ್ಟೇ ಹೇಳಲಾಗಿತ್ತು. ‘ಹೇಗಾದರೂ ಮಾಡಿ ಅವರ ಜೀವವನ್ನು ಉಳಿಸಿ. ಕೈ, ಕಾಲು ಹೋಗಿದ್ದರೂ ಚಿಂತೆಯಿಲ್ಲ. ನಾನು ಅವರ ಆರೈಕೆ ಮಾಡುತ್ತೇನೆ. ಕರೆದುಕೊಂಡ ಬನ್ನಿ’ ಎಂದು ಪತ್ನಿ ಸಹನಾ ಕಣ್ನೀರು ಹಾಕಿದ್ದರು.

ರೇಣುಕಾಸ್ವಾಮಿ ಹತ್ಯೆ ನಡೆದಾಗ ರೇಣುಕಾಸ್ವಾಮಿ ಪತ್ನಿ 5 ತಿಂಗಳ ಗರ್ಭಿಣಿ ಆಗಿದ್ದರು. ಆ ದಿನವನ್ನು ರೇಣುಕಾಸ್ವಾಮಿ ತಂದೆ-ತಾಯಿ ನೆನಪಿಸಿಕೊಂಡಿದ್ದಾರೆ. ‘ಕರೆದುಕೊಂಡು ಬರುತ್ತೇನೆ ಅಂತ ಸೊಸೆಗೆ ಹೇಳಿದ್ದೆವು. ಆದರೆ ಹೆಣವಾಗಿ ಕರೆದುಕೊಂಡು ಬರುತ್ತೇವೆ ಅಂತ ನಾವು ಹೇಳಿರಲಿಲ್ಲ. ಆ ಸಮಯದಲ್ಲಿ ನಾವು ಹೇಳುವಂತಿರಲಿಲ್ಲ. ನಂತರ ಹೇಗೋ ಆಕೆಗೆ ಗೊತ್ತಾಯಿತು. ಪೊಲೀಸರು, ಮಾಧ್ಯಮದವರು ಮನೆ ಬಳಿ ಬಂದರು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಅಭಿಮಾನಿಗಳಿಗೆ ಜೈಲಿಂದಲೇ ಸಂದೇಶ ಕಳಿಸಿದ ನಟ ದರ್ಶನ್
Image
20 ಕೋಟಿ ರೂ. ಕೊಟ್ಟರು ಎಂಬುದೆಲ್ಲ ಸುಳ್ಳು: ರೇಣುಕಾಸ್ವಾಮಿ ತಂದೆ ಖಡಕ್ ಮಾತು
Image
ಯಾವ ಜೈಲಿಗೆ ಹೋಗಲಿದ್ದಾರೆ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸಿದ್ಧತೆ?
Image
ಸುಪ್ರೀಂ ಚುರುಕು; ಬೇಗ ಇತ್ಯರ್ಥವಾಗುತ್ತಾ ರೇಣುಕಾಸ್ವಾಮಿ ಪ್ರಕರಣ?

‘ನಮ್ಮನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಬಾಡಿ ಕೊಡಲು ಸಹಿ ಮಾಡಿಸಿಕೊಂಡರು. ಮೊದಲಿಗೆ ಗುರುತು ಹಿಡಿಯಲು ಆಗಲಿಲ್ಲ. ಬಾಯಿ, ತುಟಿಯನ್ನು ನಾಯಿ ತಿಂದಿತ್ತು. ಮುಖದಿಂದ ಹಿಡಿದ ಎಲ್ಲ ಭಾಗಕ್ಕೂ ಹೊಡದು ಗಾಯ ಮಾಡಿದ್ದರು. ದೇಹ ಊದಿಕೊಂಡಿತ್ತು. ಚಡ್ಡಿ, ವೇಷ-ಭೂಷಣ ನೋಡಿ ಅವನೇ ನಮ್ಮ ಮಗ ಅಂತ ಗೊತ್ತಾಯಿತು. ಅಷ್ಟರಮಟ್ಟಿಗೆ ವಿಕಾರ ಆಗಿತ್ತು’ ಎಂದಿದ್ದಾರೆ ರೇಣುಕಾಸ್ವಾಮಿ ಪೋಷಕರು.

ಇದನ್ನೂ ಓದಿ:  ಜೈಲಿನಲ್ಲಿ ದರ್ಶನ್ ವಿಲ ವಿಲ ಒದ್ದಾಟ: 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು

‘ಮಗ ಮಾಡಿದ ತಪ್ಪನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ತಪ್ಪಿನ ಪ್ರಮಾಣದಲ್ಲೇ ಶಿಕ್ಷೆ ನೀಡಬೇಕಿತ್ತು. ಆಕೆ (ಪವಿತ್ರಾ ಗೌಡ) ಬ್ಲಾಕ್ ಮಾಡಬಹುದಿತ್ತು. ಪೊಲೀಸರಿಗೆ ಕರೆ ಮಾಡಿ ಹೇಳಬಹುದಿತ್ತು. ಅವರು ಅಷ್ಟು ದೊಡ್ಡ ವ್ಯಕ್ತಿಯಲ್ಲವೇ? ಪ್ರಾಣ ತೆಗೆಯುವಂತಹ ಕೆಲಸಕ್ಕೆ ಮುಂದಾಗಬಾರದಿತ್ತು. 8-10 ಜನರು ಸೇರಿಕೊಂಡು ಕೊಲ್ಲಬೇಕಿತ್ತಾ?’ ಎಂದು ಕಣ್ಣೀರು ಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್