ತಮಿಳು ಹುಡುಗನನ್ನು ಮದುವೆ ಆಗ್ತಾರಾ ರಶ್ಮಿಕಾ ಮಂದಣ್ಣ? ಹರಿದಾಡುತ್ತಿದೆ ಹೊಸ ಗಾಸಿಪ್​

Rashmika Mandanna: ‘ಸುಲ್ತಾನ್​’ ಸಿನಿಮಾ ಮೂಲಕ ರಶ್ಮಿಕಾ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಆ ಸಿನಿಮಾ ತೆರೆಕಂಡ ನಂತರ ಅವರು ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿಸಿಕೊಂಡರು. ಅಲ್ಲದೆ ಅವರು ಅಲ್ಲಿನ ಸಂಸ್ಕೃತಿಗೆ ಮಾರು ಹೋಗಿದ್ದಾರಂತೆ.

ತಮಿಳು ಹುಡುಗನನ್ನು ಮದುವೆ ಆಗ್ತಾರಾ ರಶ್ಮಿಕಾ ಮಂದಣ್ಣ? ಹರಿದಾಡುತ್ತಿದೆ ಹೊಸ ಗಾಸಿಪ್​
ರಶ್ಮಿಕಾ ಮಂದಣ್ಣ
Follow us
| Updated By: ರಾಜೇಶ್ ದುಗ್ಗುಮನೆ

Updated on: May 16, 2021 | 3:56 PM

ನಟಿ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ದೇಶಾದ್ಯಂತ ಹಬ್ಬಿದೆ. ಕನ್ನಡದಿಂದ ಸಿನಿಮಾ ಜರ್ನಿ ಆರಂಭಿಸಿದ ಅವರು ಪರಭಾಷೆಯಲ್ಲಿಯೇ ಈಗ ಹೆಚ್ಚು ಬ್ಯುಸಿ ಆಗಿದ್ದಾರೆ. ಸ್ಯಾಂಡಲ್​ವುಡ್​ ಸಿನಿಮಾಗಳಿಗಿಂತಲೂ ಟಾಲಿವುಡ್​, ಕಾಲಿವುಡ್​ ಮತ್ತು ಬಾಲಿವುಡ್​ನಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ. ಸಿನಿಮಾ ಮಾತ್ರವಲ್ಲದೇ ಅವರು ವೈಯಕ್ತಿಕ ಕಾರಣಕ್ಕಾಗಿಯೂ ಆಗಾಗ ಸುದ್ದಿ ಆಗುತ್ತಾರೆ. ಅಚ್ಚರಿ ಎಂದರೆ ಅವರು ತಮಿಳು ಹುಡುಗನನ್ನು ಮದುವೆ ಆಗುತ್ತೇನೆ ಎಂದು ಹೇಳಿರುವ ವಿಚಾರ ಈಗ ಹೆಚ್ಚು ವೈರಲ್​ ಆಗುತ್ತಿದೆ.

ಕಾರ್ತಿ ನಟನೆಯ ‘ಸುಲ್ತಾನ್​’ ಸಿನಿಮಾ ಮೂಲಕ ರಶ್ಮಿಕಾ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಆ ಸಿನಿಮಾ ತೆರೆಕಂಡ ಬಳಿಕ ಅವರು ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿಸಿಕೊಂಡರು. ಅಲ್ಲದೆ ಅವರು ಅಲ್ಲಿನ ಸಂಸ್ಕೃತಿಗೆ ಮಾರು ಹೋಗಿದ್ದಾರಂತೆ. ಈ ಎಲ್ಲ ವಿಚಾರಗಳ ಕುರಿತಂತೆ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಹಲವೆಡೆ ವರದಿ ಆಗಿದೆ.

‘ತಮಿಳುನಾಡಿನ ಸಂಸ್ಕೃತಿ ನನಗೆ ಹೆಚ್ಚು ಇಷ್ಟವಾಗಿದೆ. ಅದರಲ್ಲೂ ಇಲ್ಲಿನ ಅಡುಗೆ ತುಂಬ ಇಷ್ಟ. ತಮಿಳುನಾಡಿನ ಊಟ ತುಂಬ ರುಚಿಯಾಗಿರುತ್ತದೆ. ನಾನು ತಮಿಳು ಹುಡುಗನನ್ನೇ ಮದುವೆ ಆಗಿ ತಮಿಳುನಾಡಿನ ಸೊಸೆ ಆಗುತ್ತೇನೆ ಎನಿಸುತ್ತದೆ’ ಎಂದು ರಶ್ಮಿಕಾ ಹೇಳಿದ್ದಾರೆ ಎಂಬುದಾಗಿ ಕೆಲವು ವೆಬ್​ಸೈಟ್​ಗಳು ವರದಿ ಮಾಡಿವೆ. ಹಾಗಾದರೆ ರಶ್ಮಿಕಾರನ್ನು ಕೈ ಹಿಡಿಯಲಿರುವ ಆ ಲಕ್ಕಿ ತಮಿಳು ಹುಡುಗ ಯಾರಿರಬಹುದು ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ರಕ್ಷಿತ್​ ಶೆಟ್ಟಿ ಜೊತೆ ರಶ್ಮಿಕಾಗೆ ಎಂಗೇಜ್​ಮೆಂಟ್​ ಆಗಿತ್ತು. ಆದರೆ ಅದು ಮದುವೆಯವರೆಗೆ ಬರಲೇ ಇಲ್ಲ. ಇಬ್ಬರ ಮಧ್ಯೆ ವೈಮನಸ್ಸು ಉಂಟಾದ ಕಾರಣ ಅವರು ಬ್ರೇಕಪ್​ ಮಾಡಿಕೊಂಡರು. ನಂತರ ವಿಜಯ್​ ದೇವರಕೊಂಡ ಜೊತೆ ರಶ್ಮಿಕಾ ಹೆಸರು ತಳುಕು ಹಾಕಿಕೊಂಡಿತು. ಆದರೆ ನಾವಿಬ್ಬರು ಕೇವಲ ಬೆಸ್ಟ್​ ಫ್ರೆಂಡ್ಸ್​ ಎನ್ನುವ ಮೂಲಕ ಅವರು ಎಲ್ಲ ವದಂತಿಗಳನ್ನು ತಳ್ಳಿ ಹಾಕಿದರು. ಸದ್ಯ ರಶ್ಮಿಕಾ ಕೈಯಲ್ಲಿ ಒಳ್ಳೊಳ್ಳೆಯ ಆಫರ್​ಗಳಿವೆ. ಹಿಂದಿಯ ‘ಗುಡ್​ ಬೈ’ ಸಿನಿಮಾದಲ್ಲಿ ಅವರು ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಬಾಲಿವುಡ್​ಗೆ ಕಾಲಿಡೋಕೆ ಕಾರಣವಾಗಿದ್ದು ಯಾರು? ಅಸಲಿ ವಿಚಾರ ಬಯಲು

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ