AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ‘ಎಲ್ಲರನ್ನೂ ಗೌರವಿಸೋಣ’; ನೇರವಾಗಿ ಪ್ರತಿಕ್ರಿಯಿಸಿದ ರಾಕಿಂಗ್ ಸ್ಟಾರ್ ಯಶ್

ಇತ್ತೀಚೆಗೆ ಬಾಲಿವುಡ್​ನ ಹಲವು ಸಿನಿಮಾಗಳು ಸೋತಿವೆ. ಈ ವರ್ಷ ಅಲ್ಲಿ ಗೆದ್ದ ಸಿನಿಮಾಗಳು ಬೆರಳೆಣಿಕೆ ಮಾತ್ರ. ಹಿಂದಿಗೆ ಡಬ್ ಆಗಿ ತೆರೆಕಂಡ ಹಲವು ದಕ್ಷಿಣದ ಚಿತ್ರಗಳು ದೊಡ್ಡ ಮಟ್ಟದ ಯಶಸ್ಸು ಕಂಡಿವೆ.

Rocking Star Yash: ‘ಎಲ್ಲರನ್ನೂ ಗೌರವಿಸೋಣ’; ನೇರವಾಗಿ ಪ್ರತಿಕ್ರಿಯಿಸಿದ ರಾಕಿಂಗ್ ಸ್ಟಾರ್ ಯಶ್
ಯಶ್
TV9 Web
| Edited By: |

Updated on:Dec 23, 2022 | 5:54 PM

Share

ಯಶ್ (Yash) ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ  ಬೆಳೆದಿದ್ದಾರೆ. ‘ಕೆಜಿಎಫ್ 2’ (KGF Chapter 2) ತೆರೆಕಂಡು ಹಲವು ತಿಂಗಳು ಕಳೆದರೂ ಯಶ್ ಮುಂದಿನ ಸಿನಿಮಾ ಯಾವುದು ಎಂಬುದು ಘೋಷಣೆ ಆಗಿಲ್ಲ. ಈ ಮಧ್ಯೆ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ ಇತ್ತೀಚೆಗೆ ಹೆಚ್ಚು ಚರ್ಚೆ ಆಗುತ್ತಿರುವ ಬಾಲಿವುಡ್ vs​ ದಕ್ಷಿಣ ಸಿನಿಮಾ ಇಂಡಸ್ಟ್ರಿ ಬಗ್ಗೆ ಯಶ್ ಮಾತನಾಡಿದ್ದಾರೆ. ‘ಎಲ್ಲಾ ಚಿತ್ರರಂಗಕ್ಕೆ ಗೌರವ ನೀಡಬೇಕು’ ಎಂದು ಅವರು ಹೇಳಿದ್ದಾರೆ.

ಫಿಲ್ಮ್ ಕಂಪ್ಯಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಅವರು ನೇರ ನುಡಿಗಳಿಂದ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಕರ್ನಾಟಕದ ಜನರು ಬೇರೆ ಇಂಡಸ್ಟ್ರಿ ಬಗ್ಗೆ ಕೀಳಾಗಿ ಮಾತನಾಡಬಾರದು. ಎಲ್ಲರೂ ನಮ್ಮನ್ನು ಹಾಗೆ ನಡೆಸಿಕೊಂಡಾಗ ನಾವು ಕೂಡ ಆ ಸಮಸ್ಯೆಯನ್ನು ಎದುರಿಸಿದ್ದೆವು. ಆ ಗೌರವ ಪಡೆಯಲು ಶ್ರಮಿಸಿದ್ದೇವೆ. ಅದು ಸಿಕ್ಕ ನಂತರ ನಾವು ಯಾರನ್ನೂ ಕೆಟ್ಟದಾಗಿ ನಡೆಸಿಕೊಳ್ಳಬಾರದು. ನಾವು ಎಲ್ಲರನ್ನೂ ಗೌರವಿಸಬೇಕು. ಬಾಲಿವುಡ್ ಅನ್ನು ಗೌರವಿಸಿ. ಈ ಉತ್ತರ ಮತ್ತು ದಕ್ಷಿಣ ಎಂಬುದನ್ನು ಮರೆತುಬಿಡಿ’ ಎಂದು ಕೋರಿದ್ದಾರೆ ಯಶ್.

ಒಟ್ಟಾಗಿ ಕೆಲಸ ಮಾಡೋಣ ಎಂದ ಯಶ್

‘ನಾವು ಉತ್ತಮ ಸಿನಿಮಾಗಳನ್ನು ಮಾಡಬೇಕು. ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ಚಿತ್ರಮಂದಿರಗಳನ್ನು ನಿರ್ಮಿಸಬೇಕು. ಮಾಡಲು ತುಂಬಾ ಕೆಲಸಗಳಿವೆ. ನಮ್ಮ ನಡುವೆ ಜಗಳವಾಡುವುದನ್ನು ನಾವು ನಿಲ್ಲಿಸಬೇಕಿದೆ. ಹೊರಗಿನ ಪ್ರಪಂಚದೊಂದಿಗೆ ಸ್ಪರ್ಧಿಸಬೇಕಿದೆ’ ಎಂದಿದ್ದಾರೆ. ಈ ಮೂಲಕ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಇದನ್ನೂ ಓದಿ: Yash: ‘ಬಾಹುಬಲಿ 2’ ದಾಖಲೆಯನ್ನು ಮುರಿದ ‘ಕೆಜಿಎಫ್ 2’; ಇದು ಯಶ್ ಸಿನಿಮಾ ಸಾಧನೆ  

ಯಾಕೆ ಈ ಚರ್ಚೆ?

ಇತ್ತೀಚೆಗೆ ಬಾಲಿವುಡ್​ನ ಹಲವು ಸಿನಿಮಾಗಳು ಸೋತಿವೆ. ಈ ವರ್ಷ ಅಲ್ಲಿ ಗೆದ್ದ ಸಿನಿಮಾಗಳು ಬೆರಳೆಣಿಕೆ ಮಾತ್ರ. ಹಿಂದಿಗೆ ಡಬ್ ಆಗಿ ತೆರೆಕಂಡ ಹಲವು ದಕ್ಷಿಣದ ಚಿತ್ರಗಳು ದೊಡ್ಡ ಮಟ್ಟದ ಯಶಸ್ಸು ಕಂಡಿವೆ. ಈ ಕಾರಣಕ್ಕೆ  ದಕ್ಷಿಣ ಭಾರತ ಹಾಗೂ ಬಾಲಿವುಡ್ ಎಂಬ ಚರ್ಚೆ ಜೋರಾಗಿದೆ. ಈ ಮೊದಲೆಲ್ಲ ಭಾರತ ಚಿತ್ರರಂಗ ಎಂದರೆ ಬಾಲಿವುಡ್ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರಾದೇಶಿಕ ಸಿನಿಮಾಗಳು ಗೆಲುವು ಕಾಣುತ್ತಿವೆ. ಈ ಸಂದರ್ಭದಲ್ಲಿ ಕೆಲವರು ಬಾಲಿವುಡ್ ಬಗ್ಗೆ ಕೀಳಾಗಿ ಮಾತನಾಡಿದ್ದರು. ಈ ರೀತಿ ಆಗಬಾರದು ಎಂಬುದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:08 pm, Fri, 23 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು