AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

ಬೈಲೂರು ನೀಲಕಂಠ ಮಹಾಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜ್ಯೂನಿಯರ್ ಫ್ರೆಂಡ್ಸ್​ ತಂಡ ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಭಾಗವಹಿಸಿದ್ದಾರೆ.

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ
ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: Aug 31, 2021 | 3:54 PM

Share

ಸ್ಯಾಂಡವುಡ್ ನಟ ರಕ್ಷಿತ್ ಶೆಟ್ಟಿ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಹುಲಿವೇಷ ಕುಣಿದಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ಕಾರಣದಿಂದ ಉಡುಪಿಯಲ್ಲಿ ಈ ಬಾರಿ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗಿದೆ. ಅಷ್ಟಮಿ ಅಂದರೆ ಉಡುಪಿಯಲ್ಲಿ ಹುಲಿವೇಷಗಳ ಕಲರವ ಇದ್ದೇ ಇರುತ್ತದೆ. ಆದರೆ ಈ ಬಾರಿ ವೇಷಗಳಿಗೆ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ದೇವಸ್ಥಾನಗಳಿಂದ ದೈವಸ್ಥಾನಗಳಿಗೆ ಹೊರಡುವ ಹುಲಿವೇಷ ತಂಡಗಳು ಸಾಂಪ್ರದಾಯಿಕ ಲೋಬಾನ ಹಾಕುವ ಆಚರಣೆಯನ್ನು ಮಾತ್ರ ಮಾಡಿದೆ.

ಬೈಲೂರು ನೀಲಕಂಠ ಮಹಾಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜ್ಯೂನಿಯರ್ ಫ್ರೆಂಡ್ಸ್ ತಂಡ ಆಯೋಜಿಸಿದ್ದ ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಭಾಗವಹಿಸಿದ್ದಾರೆ. ದೈವಸ್ಥಾನದ ಹುಲಿವೇಷ ತಂಡದ ಯುವಕರ ಜೊತೆ ರಕ್ಷಿತ್ ಶೆಟ್ಟಿ ಜಬರ್ದಸ್ತ್ ಆಗಿ ಸ್ಟೆಪ್ ಹಾಕಿದ್ದಾರೆ. ಪಕ್ಕಾ ವೇಷಧಾರಿಗಳಂತೆ ಅವರು ಕುಣಿದಿದ್ದು, ವಿಡಿಯೋ ವೈರಲ್​ ಆಗಿದೆ.

ರಕ್ಷಿತ್​ ಶೆಟ್ಟಿಗೆ ಚಿತ್ರರಂಗದಲ್ಲಿ ಹೆಚ್ಚು ಜನಪ್ರಿಯತೆ ನೀಡಿದ ಸಿನಿಮಾ ‘ಉಳಿದವರು ಕಂಡಂತೆ’. ಆ ಚಿತ್ರ ಹಿಟ್​ ಆಗುವುದಕ್ಕೂ ಮೊದಲು ಇದೇ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಇಲ್ಲಿನ ತಂಡವನ್ನು ರಕ್ಷಿತ್ ಚಿತ್ರೀಕರಣಕ್ಕೆ ಕರೆದೊಯ್ದಿದ್ದರು. ಚಿತ್ರದ ಸಕ್ಸಸ್ ಹಿಂದೆ ಬಬ್ಬುಸ್ವಾಮಿ ಕೊರಗಜ್ಜ ದೈವದ ಆಶೀರ್ವಾದ ಕೂಡ ಇದೆ ಎಂದು ರಕ್ಷಿತ್ ಶೆಟ್ಟಿ ಬಲವಾಗಿ ನಂಬಿದ್ದಾರೆ. ಪ್ರತಿ ವರ್ಷ ಅಷ್ಟಮಿ ಸಂದರ್ಭ ದೈವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಮತ್ತು ಪ್ರಾಂಗಣದಲ್ಲಿ ಹುಲಿ ಕುಣಿಯುವ ಸಂಪ್ರದಾಯ ನಡೆಸಿಕೊಂಡು ಬರುತ್ತಿದ್ದಾರೆ.

‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ನಂತರ ಹಲವು ಪ್ರಾಜೆಕ್ಟ್​ಗಳನ್ನು ರಕ್ಷಿತ್​ ಶೆಟ್ಟಿ ಬ್ಯುಸಿ ಆಗಿದ್ದಾರೆ. ಹೇಮಂತ್​ ರಾವ್​ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’, ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ರಿಚರ್ಡ್​ ಆ್ಯಂಟನಿ’, ‘777 ಚಾರ್ಲಿ’ ಚಿತ್ರಗಳ ಕೆಲಸಗಳು ನಡೆಯುತ್ತಿವೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೆ ತಮಿಳು, ಮಲಯಾಳಂ, ಹಿಂದಿ ಮತ್ತು ತೆಲುಗು ಭಾಷೆಗಳಲ್ಲೂ ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಲಿದೆ. ಸೆ.9ರಂದು ಈ ಸಿನಿಮಾದಿಂದ ‘ಟಾರ್ಚರ್​’ ಸಾಂಗ್​ ರಿಲೀಸ್​ ಆಗಲಿದೆ.

ಇದನ್ನೂ ಓದಿ:

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

ಅಭಿಮಾನಿಗಳ ಕಾಯುವಿಕೆಗೆ ಕೊನೆ ಹಾಡೇ ಬಿಟ್ರು ರಕ್ಷಿತ್​ ಶೆಟ್ಟಿ, ಡೈರೆಕ್ಟರ್ ಕ್ಯಾಪ್​ ಹಾಕ್ಕೊಳ್ಳೋ ಟೈಮ್ ಬಂದೇ ಬಿಡ್ತು!

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ