AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಗೆ ಲೈಂಗಿಕ ಕಿರುಕುಳ: ನಟ, ನಿರ್ದೇಶಕ ಹೇಮಂತ್ ಬಂಧನ

Actress complaint: ನಟಿಯೊಬ್ಬರಿಗೆ ಸಿನಿಮಾನಲ್ಲಿ ಅವಕಾಶ ನೀಡಿ, ಪ್ರಚಾರಕ್ಕೆಂದು ಮುಂಬೈಗೆ ಕರೆದೊಯ್ದು, ಅಲ್ಲಿ ನಟಿಗೆ ಗೊತ್ತಿಲ್ಲದೆ ಮದ್ಯ ಕುಡಿಸಿ ಆಕೆಯ ಖಾಸಗಿ ವಿಡಿಯೋಗಳನ್ನು ಮಾಡಿಕೊಂಡು ಈಗ ನಟಿಗೆ ಬ್ಲಾಕ್​​ಮೇಲ್ ಮಾಡುತ್ತಿರುವ ಆರೋಪದಲ್ಲಿ ಸಿನಿಮಾ ನಟ, ನಿರ್ದೇಶಕ ನಿರ್ಮಾಪಕರೂ ಆಗಿರುವ ಹೇಮಂತ್ ಅನ್ನು ಬಂಧಿಸಲಾಗಿದೆ.

ನಟಿಗೆ ಲೈಂಗಿಕ ಕಿರುಕುಳ: ನಟ, ನಿರ್ದೇಶಕ ಹೇಮಂತ್ ಬಂಧನ
Hemanth
ಮಂಜುನಾಥ ಸಿ.
|

Updated on:Oct 07, 2025 | 8:52 AM

Share

ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಪದೇ ಪದೇ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ. ನಟಿಯ ಆರೋಪದ ಬೆನ್ನಲ್ಲೆ ನಿರ್ದೇಶಕನನ್ನು ಬಂಧಿಸಲಾಗಿದೆ. ಈ ಹಿಂದೆ ‘ರಿಚ್ಚಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿ, ನಟಿಸಿ ನಿರ್ಮಾಣವನ್ನೂ ಮಾಡಿದ್ದ ಹೇಮಂತ್ ಅನ್ನು ಇದೀಗ ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ನಟಿಯೊಬ್ಬರು ಹೇಮಂತ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದಾರೆ. ದೂರಿನಲ್ಲಿ ಹೇಳಿರುವಂತೆ, 2022ರಲ್ಲಿ ನಟಿಗೆ ನಟ ಹೇಮಂತ್ ಪರಿಚಯ ಆಗಿದ್ದರು. ರಿಚ್ಚಿ ಎಂಬ ಚಿತ್ರದಲ್ಲಿ ನಟಿಗೆ ಅವಕಾಶ ನೀಡಿದ್ದರು. ಸಿನಿಮಾದ ಪ್ರಚಾರಕ್ಕೆಂದು 2023ರ ಆಗಸ್ಟ್ 5 ರಂದು ಸುದ್ದಿಗೋಷ್ಠಿಗೆಂದು ಮುಂಬೈಗೆ ಹೋದಾಗ ಮಾಕ್​​ಟೇಲ್​​​ನಲ್ಲಿ ಮದ್ಯ ಬೆರೆಸಿ ನಟಿಗೆ ಕುಡಿಸಿದ್ದರಂತೆ. ನಟಿಗೆ ಮತ್ತು ಬರಿಸಿ ಅವರ ಖಾಸಗಿ ವಿಡಿಯೋಗಳು, ಚಿತ್ರಗಳನ್ನು ತೆಗೆದುಕೊಂಡಿರುವ ನಟ ಹೇಮಂತ್, ಬಳಿಕ ನಟಿಯನ್ನು ಲೈಂಗಿಕವಾಗಿ ಬಳಸಿಕೊಂಡು ಆ ಬಳಿಕ ಬ್ಲಾಕ್​​ಮೇಲ್ ಮಾಡಿರುವುದಾಗಿ ನಟಿ ದೂರು ನೀಡಿದ್ದರು. ನಟಿಯ ದೂರಿನ ಬೆನ್ನಲ್ಲೆ ಹೇಮಂತ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಒಟಿಟಿಗಳಿಂದ ನಿರ್ಲಕ್ಷ್ಯ, ಕನ್ನಡ ಸಿನಿಮಾಗಳ ನೆರವಿಗೆ ಬಂದ ಸರ್ಕಾರ

ಅಂದಹಾಗೆ ನಟ ಹೇಮಂತ್ ಮತ್ತು ನಟಿಯ ನಡುವೆ ಈ ಹಿಂದೆಯೂ ಸಹ ಜಗಳ ನಡೆದಿತ್ತು. ನಟಿ ತಮ್ಮ ‘ರಿಚ್ಚಿ’ ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ, ಕರೆಯನ್ನೂ ಸ್ವೀಕರಿಸುತ್ತಿಲ್ಲ ಎಂದು ‘ರಿಚ್ಚಿ’ ಸಿನಿಮಾದ ನಿರ್ಮಾಪಕರೂ ಆಗಿರುವ ಹೇಮಂತ್, ಫಿಲಂ ಚೇಂಬರ್​​​ಗೆ ದೂರು ನೀಡಿದ್ದರು. ಅದಕ್ಕೂ ಹಿಂದೆ 2023 ರಲ್ಲಿ ನಟಿ ಹಾಗೂ ಆಕೆಯ ತಾಯಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಮಂತ್ ಫಿಲಂ ಚೇಂಬರ್ ಮೆಟ್ಟಿಲೇರಿದ್ದರು. ಆ ಸಮಯದಲ್ಲಿ ಫಿಲಂ ಚೇಂಬರ್​​ನವರು ಮಧ್ಯಸ್ಥಿಕೆವಹಿಸಿ ಸಂಧಾನ ಮಾಡಿಸಿದ್ದರು. ಈಗ ನಟಿ ಲೈಂಗಿಕ ಕಿರುಕುಳ ದೂರು ನೀಡಿದ್ದು, ಹೇಮಂತ್ ಪೊಲೀಸರ ಅತಿಥಿಯಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 am, Tue, 7 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ