Sign In

By signing in or creating an account, you agree with Associated Broadcasting Company's Terms & Conditions and Privacy Policy.

Richiee Kannada Movie: ಚಂದನವನದಲ್ಲಿ ಮತ್ತೆ ಕೇಳಿಸ್ತಿದೆ ‘ರಿಚ್ಚಿ’ ಹೆಸರು; ಕುನಾಲ್​ ಗಾಂಜಾವಾಲಾ ಹಾಡಿದ ಗೀತೆಯಿಂದ ಹೆಚ್ಚಲಿದೆ ಸದ್ದು

ಕನ್ನಡದಲ್ಲಿ ಕುನಾಲ್​ ಗಾಂಜಾವಾಲಾ ಅವರು ಅನೇಕ ಸೂಪರ್​ ಹಿಟ್​ ಗೀತೆಗಳಿಗೆ ಧ್ವನಿ ಆಗಿದ್ದಾರೆ. ಈಗ ಅವರ ಕಂಠದಲ್ಲಿ ‘ರಿಚ್ಚಿ’ ಸಿನಿಮಾದ ಹಾಡು ಮೂಡಿಬಂದಿದ್ದು, ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ.

Richiee Kannada Movie: ಚಂದನವನದಲ್ಲಿ ಮತ್ತೆ ಕೇಳಿಸ್ತಿದೆ ‘ರಿಚ್ಚಿ’ ಹೆಸರು; ಕುನಾಲ್​ ಗಾಂಜಾವಾಲಾ ಹಾಡಿದ ಗೀತೆಯಿಂದ ಹೆಚ್ಚಲಿದೆ ಸದ್ದು
ರಮೋಲಾ, ರಿಚ್ಚಿ, ಕುನಾಲ್ ಗಾಂಜಾವಾಲಾ
Follow us
ಮದನ್​ ಕುಮಾರ್​
|

Updated on: May 10, 2023 | 11:00 AM

ರಕ್ಷಿತ್​ ಶೆಟ್ಟಿ ನಟನೆ, ನಿರ್ದೇಶನದ ‘ಉಳಿದವರು ಕಂಡಂತೆ’ ಸಿನಿಮಾ ನೋಡಿದ ಎಲ್ಲರಿಗೂ ರಿಚ್ಚಿ ಪಾತ್ರ ನೆನಪಿರುತ್ತದೆ. ಈಗ ಆ ವಿಚಾರ ನೆನಪಿಸಿಕೊಳ್ಳಲು ಒಂದು ಕಾರಣ ಇದೆ. ಗಾಂಧಿನಗರದಲ್ಲಿ ಮತ್ತೆ ‘ರಿಚ್ಚಿ’ ಹೆಸರು ಕೇಳಿಬರುತ್ತಿದೆ. ಈ ಬಾರಿಯ ವಿಷಯ ರಕ್ಷಿತ್​ ಶೆಟ್ಟಿಗೆ ಸಂಬಂಧಿಸಿದ್ದಲ್ಲ. ‘ರಿಚ್ಚಿ’ (Richiee) ಎಂಬ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ಒಂದಷ್ಟು ವಿಶೇಷತೆಗಳಿವೆ. ಈ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದನ ಹೆಸರೇ ರಿಚ್ಚಿ. ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿ ಕೂಡ ಅವರದ್ದೇ. ತಮ್ಮ ಹೆಸರನ್ನೇ ಸಿನಿಮಾದ ಶೀರ್ಷಿಕೆಯನ್ನಾಗಿಸಿಕೊಂಡು ಅವರು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ‘ರಿಚ್ಚಿ’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಮೇ 18ರಂದು ಬಿಡುಗಡೆ ಆಗಲಿರುವ ಈ ಹಾಡಿಗೆ ಕುನಾಲ್​ ಗಾಂಜಾವಾಲಾ (Kunal Ganjawala) ಅವರು ಧ್ವನಿ ನೀಡಿದ್ದಾರೆ ಎಂಬುದು ವಿಶೇಷ.

ಕನ್ನಡದಲ್ಲಿ ಕುನಾಲ್​ ಗಾಂಜಾವಾಲಾ ಅವರು ಅನೇಕ ಸೂಪರ್​ ಹಿಟ್​ ಗೀತೆಗಳಿಗೆ ಧ್ವನಿ ಆಗಿದ್ದಾರೆ. ಈಗ ಅವರ ಕಂಠದಲ್ಲಿ ‘ರಿಚ್ಚಿ’ ಸಿನಿಮಾದ ಹಾಡು ಮೂಡಿಬಂದಿದ್ದು, ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈ ಹಾಡನ್ನು ಖ್ಯಾತ ಗೀತರಚನಕಾರ ಗೌಸ್ ಫೀರ್ ಬರೆದಿದ್ದಾರೆ. ಅದಕ್ಕೆ ಅಗಸ್ತ್ಯ ಸಂತೋಷ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಖ್ಯಾತ ಕೋರಿಯೋಗ್ರಾಫರ್ ಚಿನ್ನಿ ಮಾಸ್ಟರ್ ಅವರ ನೃತ್ಯ ನಿರ್ದೇಶನ ಈ ಹಾಡಿಗಿದೆ. ಈ ಸಿನಿಮಾದಲ್ಲಿ ರಿಚ್ಚಿಗೆ ಜೋಡಿಯಾಗಿ ಕಿರುತೆರೆಯ ಖ್ಯಾತ ನಟಿ ರಮೋಲಾ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ಬಿಡುಗಡೆ ಮಾಡಲಾಗದ 40 ಹಾಡುಗಳು ನನ್ನಲ್ಲೇ ಇವೆ: ಪ್ರಿಯಾಂಕಾ ಚೋಪ್ರಾ

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಅನುಭವ ಪಡೆದಿರುವ ರಿಚ್ಚಿ ಅವರು ಈ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಲು ಸಜ್ಜಾಗಿದ್ದಾರೆ. ನಟನೆ, ನಿರ್ದೇಶನ, ನಿರ್ಮಾಣ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿರುವ ಅವರು ಮೊದಲ ಹಾಡಿಗೆ ಜನರ ಪ್ರತಿಕ್ರಿಯೆ ಪಡೆಯಲು ಕಾದಿದ್ದಾರೆ. ಸಾಂಗ್​ ಬಿಡುಗಡೆ ಬಳಿಕ ಸಿನಿಮಾದ ರಿಲೀಸ್​ ದಿನಾಂಕವನ್ನು ಅನೌನ್ಸ್​ ಮಾಡಲಾಗುವುದು. ಅಣಜಿ ನಾಗರಾಜ್ ಅರ್ಪಿಸುವ ಈ ಚಿತ್ರಕ್ಕೆ ರಾಕೇಶ್ ರಾವ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲೋಕೆ ನಾನೇ ಕಾರಣ ಎಂದ ಅಜಯ್ ದೇವಗನ್

ಲವ್ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಮೈ ನವಿರೇಳಿಸುವಂತಹ ಸಾಹಸ ದೃಶ್ಯಗಳು ಇರಲಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಜಿತ್ ಕುಮಾರ್ ಎನ್. ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಚಿನ್ನಿ ಪ್ರಕಾಶ್, ಧನಂಜಯ ಮತ್ತು ಭೂಷಣ್ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ