AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್, ಆಗಸ್ಟ್ 15ಕ್ಕೆ ಬಿಡುಗಡೆ

Ricky Kej: ಬೆಂಗಳೂರಿನ ಹೆಮ್ಮೆಯ ಸಂಗೀತ ನಿರ್ದೇಶಕ, ಮೂರು ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್, ರಾಷ್ಟ್ರಗೀತೆಯನ್ನು ಹೊಸ ಟಚ್​ ಜೊತೆಗೆ ರೆಕಾರ್ಡ್ ಮಾಡಿದ್ದು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದಾರೆ.

ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್, ಆಗಸ್ಟ್ 15ಕ್ಕೆ ಬಿಡುಗಡೆ
ರಿಕ್ಕಿ ಕೇಜ್
ಮಂಜುನಾಥ ಸಿ.
|

Updated on: Aug 11, 2023 | 11:03 PM

Share

ರಿಕ್ಕಿ ಕೇಜ್ (Ricky Kej) ಕೇವಲ ಕರ್ನಾಟಕದ ಮಾತ್ರವಲ್ಲ ಭಾರತದ ಹೆಮ್ಮೆಯ ಸಂಗೀತ ನಿರ್ದೇಶಕ ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಗಮನ ಸೆಳೆಯುವುದು ತಮ್ಮ ಭಿನ್ನತೆಯಿಂದ. ಆಧುನಿಕ ಸಂಗೀತ ವಿಧಾನವನ್ನು ಸಾಂಪ್ರದಾಯಿಕ ಹಾಗೂ ಜನಪದದೊಟ್ಟಿಗೆ ಬೆರೆಸಿ ಪ್ರಸ್ತುತ ಪಡಿಸುವ ಅವರ ಪ್ರಯೋಗಗಳು ಕೇಳುಗರ ಮಂತ್ರಮುಗ್ಧಗೊಳಿಸಿವೆ. ಸದಾ ಕ್ರೀಯಾಶೀಲರಾಗಿರುವ ರಿಕ್ಕಿ ಕೇಜ್, ಇದೀಗ ಹೊಸ ಪ್ರಯೋಗವೊಂದಕ್ಕೆ ತಮ್ಮನ್ನು ಒಡ್ಡಿಕೊಂಡಿದ್ದಾರೆ.

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿಯೂ ಆಗಿರುವ ರಿಕ್ಕಿ ಕೇಜ್ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಜನಗಣಮನ ಎಂದಾರಂಭವಾಗುವ ನಮ್ಮ ರಾಷ್ಟ್ರಗೀತೆಗೆ ಹೊಸ ಬಗೆಯ ಟ್ಯೂನ್ ಮೂಲಕ ಹೊಸ ಟಚ್ ನೀಡಲು ಮುಂದಾಗಿದ್ದಾರೆ. ನಮ್ಮ ರಾಷ್ಟ್ರಗೀತೆಗೆ ಹೊಸ ಬಗೆಯ ಟಚ್ ಅನ್ನು ನೀಡಿ ರೆಕಾರ್ಡ್ ಮಾಡಲಾಗಿದ್ದು, ಸ್ವಾತಂತ್ರ್ಯ ದಿನದ ಹಿಂದಿನ ದಿನ ಅಂದರೆ ಆಗಸ್ಟ್ 14ರಂದು ಸಂಜೆ 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆ ಆಗಲಿದೆ.

ಹಾಡಿನ ಮತ್ತೊಂದು ವಿಶೇಷತೆ ಏನೆಂದರೆ ಭಾರತವನ್ನು ನಾಲ್ಕು ನೂರು ವರ್ಷಗಳ ಕಾಲ ಆಳಿದ ಬ್ರಿಟೀಷರ ನೆಲದಲ್ಲಿಯೇ ಅಂದರೆ ಲಂಡನ್​ನಲ್ಲಿಯೇ ಅಬ್ಬೆ ರೋಡ್​ನ ಸ್ಟುಡಿಯೋ ಒಂದರಲ್ಲಿ ನಮ್ಮ ರಾಷ್ಟ್ರಗೀತೆಯನ್ನು ಹೊಸ ವಿಧವಾದ ಸಂಗೀತದೊಂದಿಗೆ ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಹೊಸ ರೀತಿಯಲ್ಲಿ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Ricky Kej: ಬೆಂಗಳೂರು ಮೂಲದ ರಿಕ್ಕಿ ಕೇಜ್​ಗೆ ಗ್ರ್ಯಾಮಿ ಅವಾರ್ಡ್​; 3 ಬಾರಿ ಪ್ರಶಸ್ತಿ ಗೆದ್ದ ಭಾರತೀಯ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಿಕ್ಕಿ ಕೇಜ್, ”ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಹೊಸ ಬಗೆಯ ರಾಷ್ಟ್ರಗೀತೆ ಬಿಡುಗಡೆ ಮಾಡಲು, ಜನರಿಗೆ ಅದನ್ನು ಕೇಳಿಸಲು ನಾನು ಕಾಯುತ್ತಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ಈ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಿದ್ದೇನೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷರ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಸಂಗೀತಗಾರರ ಸಹಾಯದಿಂದ ಭಾರತದ ರಾಷ್ಟ್ರಗೀತೆ ಹೊಸ ವಿಧಾಣದಲ್ಲಿ ಸಿದ್ಧವಾಗಿದೆ ಎಂದು ಖುಷಿ ಹಂಚಿಕೊಂಡರು.

ರಿಕ್ಕಿ ಕೇಜ್ ಬೆಂಗಳೂರಿನವರೇ ಆಗಿದ್ದು ರಿಕ್ಕಿ ಅವರಿಗೆ ಮೂರು ಬಾರಿ ಗ್ರ್ಯಾಮಿ ದೊರೆತಿದ್ದು ಮೂರು ಬಾರಿ ನಾಮಿನೇಟ್ ಆಗಿದ್ದಾರೆ. ಹಲವಾರು ರಾಷ್ಟ್ರೀಯ, ಅಂತರಾಷ್ಟ್ರೀಯ ಖ್ಯಾತ ಸಂಗೀತಗಾರರೊಟ್ಟಿಗೆ ರಿಕ್ಕಿ ಕೇಜ್ ಕೆಲಸ ಮಾಡಿದ್ದು ಹಲವು ಅತ್ಯದ್ಭುತ ಆಲ್ಬಂಗಳನ್ನು ಹೊರತಂದಿದ್ದಾರೆ. ಬಹಳ ಕಡಿಮೆ ಸಿನಿಮಾಕ್ಕೆ ರಿಕ್ಕಿ ಕೇಜ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?